Homeಮುಖಪುಟಚುನಾವಣಾ ಬಾಂಡ್‌: ಎಸ್ಒಪಿ ಮಾಹಿತಿ ನೀಡಲು ಮತ್ತೆ ನಿರಾಕರಿಸಿದ ಎಸ್‌ಬಿಐ

ಚುನಾವಣಾ ಬಾಂಡ್‌: ಎಸ್ಒಪಿ ಮಾಹಿತಿ ನೀಡಲು ಮತ್ತೆ ನಿರಾಕರಿಸಿದ ಎಸ್‌ಬಿಐ

- Advertisement -
- Advertisement -

ದೇಶದಲ್ಲಿ ಭಾರೀ ಸದ್ದು ಮಾಡಿದ್ದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಎಸ್‌ಒಪಿ ಮಾಹಿತಿಯನ್ನು ನೀಡಲು ಭಾರತೀಯ ಸ್ಟೇಟ್‌ ಬ್ಯಾಂಕ್‌ ಮತ್ತೆ ನಿರಾಕರಿಸಿದ್ದು, ಕೇಂದ್ರ ಮಾಹಿತಿ ಆಯೋಗಕ್ಕೆ (ಸಿಐಸಿ) ನಿರಾಕರಣೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಮುಂದಾಗಿದ್ದಾರೆ.

ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಸಲಾದ ಮೊದಲ ಮೇಲ್ಮನವಿಗೆ ಪ್ರತಿಕ್ರಿಯೆಯಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಬಾಂಡ್‌ಗಳ ಮಾರಾಟ ಮತ್ತು ನಗದೀಕರಣ ಕುರಿತಂತೆ ಶಾಖೆಗಳಿಗೆ ನೀಡಿದ ಎಸ್ಒಪಿ (ಸ್ಟಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್) ಪ್ರತಿಯನ್ನು ಒದಗಿಸಲು ಮತ್ತೆ ನಿರಾಕರಿಸಿದೆ. ಮಾಹಿತಿ ಹಕ್ಕು ಕಾಯಿದೆಯಡಿ ಕೋರಲಾದ ಮಾಹಿತಿಯನ್ನು ಬ್ಯಾಂಕ್ “ಕಮರ್ಷಿಯಲ್ ಕಾನ್ಫಿಡೆನ್ಸ್” ಆಗಿ ಇರಿಸಿಕೊಂಡಿದೆ ಮತ್ತು ಅದು “ಬ್ಯಾಂಕ್‌ನ ಬೌದ್ಧಿಕ ಆಸ್ತಿ” ಎಂದು ಮಾಹಿತಿ ನಿರಾಕರಣೆಗೆ ಬ್ಯಾಂಕ್ ಕಾರಣ ನೀಡಿದೆ. ಮೇಲಾಗಿ ಆಂತರಿಕ ಮಾರ್ಗಸೂಚಿಗಳು ಚುನಾವಣಾ ಬಾಂಡ್ ಕುರಿತಂತೆ ಕಾರ್ಯನಿರ್ವಹಿಸುವ ಸಿಬ್ಬಂದಿಗಾಗಿ ಮಾತ್ರ ಆಗಿವೆ ಎಂದೂ ಬ್ಯಾಂಕ್ ಹೇಳಿದೆ.

ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್, ಎಪ್ರಿಲ್ 2017ರಂದು ಬ್ಯಾಂಕ್ ಇದೀಗ ರದ್ದುಗೊಂಡಿರುವ ಬಾಂಡ್‌ಗಳ ಕುರಿತಂತೆ ಜಾರಿಗೊಳಿಸಲಾದ ಎಸ್ಒಪಿ ಕುರಿತು ಮಾಹಿತಿ ಕೋರಿದ್ದರು. ಮಾರ್ಚ್ 30ರಂದು ಬ್ಯಾಂಕ್ ಮಾಹಿತಿಯನ್ನು ನೀಡಲು ನಿರಾಕರಿಸಿದ ನಂತರ, ಅವರು ಎಸ್‌ಬಿಐನ ಮೇಲ್ಮನವಿ ಪ್ರಾಧಿಕಾರಕ್ಕೆ (ಎಫ್‌ಎಎ)ಗೆ ಮನವಿಯನ್ನು ಸಲ್ಲಿಸಿದ್ದರು. ಎಫ್‌ಎಎಯಿಂದ ಮೇ 17ರಂದು ಸ್ವೀಕರಿಸಿದ ಪ್ರತಿಕ್ರಿಯೆಯಿಂದ ಅತೃಪ್ತರಾಗಿರುವ ಭಾರದ್ವಾಜ್ ಈಗ ಕೇಂದ್ರ ಮಾಹಿತಿ ಆಯೋಗಕ್ಕೆ(ಸಿಐಸಿ) ನಿರಾಕರಣೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಮೇ 17ರ ಆದೇಶದಲ್ಲಿ ಮಾಹಿತಿಯು ಬ್ಯಾಂಕ್‌ನ ಬೌದ್ಧಿಕ ಆಸ್ತಿಯಾಗಿದೆ. ಆದ್ದರಿಂದ RTI ಕಾಯಿದೆಯಡಿ ಸೆಕ್ಷನ್ 8(1)(d) ಅಡಿಯಲ್ಲಿ ಸರಿಯಾಗಿ ನಿರಾಕರಿಸಲಾಗಿದೆ. ವಾಣಿಜ್ಯ ವಿಶ್ವಾಸ, ವ್ಯಾಪಾರ ರಹಸ್ಯಗಳು ಅಥವಾ ಬೌದ್ಧಿಕ ಆಸ್ತಿ ಸೇರಿದಂತೆ ಮಾಹಿತಿ ಬಹಿರಂಗಪಡಿಸುವಿಕೆಯು ಮೂರನೇ ವ್ಯಕ್ತಿಯ ಸ್ಪರ್ಧಾತ್ಮಕ ಸ್ಥಾನಕ್ಕೆ ಹಾನಿಯುಂಟುಮಾಡುತ್ತದೆ ಎಂದು ಹೇಳಲಾಗಿದೆ.

ಎಸ್‌ಬಿಐ ಬಾಂಡ್‌ಗಳ ವಹಿವಾಟು ಡೇಟಾವನ್ನು ಹೇಗೆ ನಿರ್ವಹಿಸುತ್ತದೆ ಎಂಬುದರ ಕುರಿತು ಅಸ್ಪಷ್ಟತೆಯಿಂದಾಗಿ ಎಸ್‌ಒಪಿಗಳನ್ನು ವಿನಂತಿಸಲಾಗಿದೆ. ಬಾಂಡ್‌ಗಳ ಸಂಭಾವ್ಯ ಟ್ರ್ಯಾಕಿಂಗ್ ಬಗ್ಗೆ ಕಳವಳಗಳು ಇದ್ದವು. ಏಕೆಂದರೆ    ಎಸ್‌ಬಿಐ ಖರೀದಿದಾರ ಮತ್ತು ರಿಡೀಮರ್ ಇಬ್ಬರಿಗೂ ವಿಶಿಷ್ಟ ಸಂಖ್ಯೆಯನ್ನು ದಾಖಲಿಸಿದೆ. ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿದ ನಂತರ ಮತ್ತು ಎಲ್ಲಾ ವಿವರಗಳನ್ನು ಬಹಿರಂಗಪಡಿಸಲು ಆದೇಶಿಸಿದ ನಂತರವೂ, ಎಸ್‌ಬಿಐ ನಿರ್ಣಾಯಕ ಮಾಹಿತಿಯನ್ನು ತಡೆಹಿಡಿಯುವುದನ್ನು ಮುಂದುವರೆಸಿದೆ ಎಂದು ಆರ್‌ಟಿಐ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...