Homeಮುಖಪುಟಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

ಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ‘ಕೆಳಮಟ್ಟದ ವೈಯಕ್ತಿಕ ಟೀಕೆ’ಯ ಹಿನ್ನೆಲೆ ಬಿಜೆಪಿ ಅಭ್ಯರ್ಥಿ, ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.

ಮಹಿಳೆಯರ ಘನತೆ ಮತ್ತು ಗೌರವವನ್ನು ಪ್ರಶ್ನಿಸುವ ಯಾವುದೇ ಟೀಕೆಗಳನ್ನು ಮಾಡಬಾರದು ಎಂದು ಅಭಿಜಿತ್ ಗಂಗೋಪಾಧ್ಯಾಯಗೆ ನಿರ್ದೇಶನವನ್ನು ನೀಡಲು ಬಿಜೆಪಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ವಿಫಲರಾಗಿದ್ದಾರೆ ಎಂದು ಚುನಾವಣಾ ಆಯೋಗ ಇದೇ ವೇಳೆ ಹೇಳಿದೆ. ಮೇ 15ರಂದು ಕೋಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರು ಮತ್ತು ಬಿಜೆಪಿಯ ತಮ್ಲುಕ್ ಕ್ಷೇತ್ರದ ಅಭ್ಯರ್ಥಿಯ ಟೀಕೆಗಳ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ ದೂರಿನ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಆಯೋಗವು ಸೋಮವಾರ ಸಂಜೆಯೊಳಗೆ ಗಂಗೋಪಾಧ್ಯಾಯ ಅವರ ಪ್ರತಿಕ್ರಿಯೆಯನ್ನು ಕೇಳಿತ್ತು. ಅವರ ಪ್ರತಿಕ್ರಿಯೆ ಪಡೆದ ಬಳಿಕ ಈ ಆದೇಶವನ್ನು ನೀಡಿದೆ.

ಅಭಿಜಿತ್ ಗಂಗೋಪಾಧ್ಯಾಯ ಅವರಂತಹ ಶೈಕ್ಷಣಿಕ ಮತ್ತು ವೃತ್ತಿಪರ ಹಿನ್ನೆಲೆಯ ವ್ಯಕ್ತಿಯಿಂದ ಅಸಹ್ಯಕರ ಮಾತುಗಳು ಬಂದಿವೆ ಎಂಬ ಅಂಶವನ್ನು ಆಯೋಗವು ನೋವಿನಿಂದ ಗಮನಿಸುತ್ತದೆ. ಮಹಿಳೆಯರಿಗೆ ಗೌರವ ನೀಡುವ ವಿಶಿಷ್ಟ ಸಂಪ್ರದಾಯವನ್ನು ಹೊಂದಿರುವ ಪ.ಬಂಗಾಳಕ್ಕೆ  ಅವರು ಅಪಖ್ಯಾತಿ ತಂದಿದ್ದಾರೆ ಎಂದು ಚುನಾವಣಾ ಅಯೋಗವು ಗಮನಿಸಿದೆ.

ಗಂಗೋಪಾಧ್ಯಾಯ ಅವರು ಕೋಲ್ಕತ್ತಾ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿದ್ದಾಗ ತೃಣಮೂಲ ಕಾಂಗ್ರೆಸ್ ಅವರನ್ನು ವ್ಯಾಪಕವಾಗಿ ಟೀಕಿಸಿತ್ತು. ಇತ್ತೀಚೆಗಷ್ಟೇ ನ್ಯಾಯಾಧೀಶರ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಮಹಿಳೆಯರ ಗೌರವ ಮತ್ತು ಘನತೆಗೆ ಚ್ಯುತಿ ತರುವಂತಹ ಯಾವುದೇ ಹೇಳಿಕೆಯನ್ನು ನೀಡದಂತೆ ಪಕ್ಷದ ಅಭ್ಯರ್ಥಿಗಳಿಗೆ ಮತ್ತು ಚುನಾವಣಾ ಪ್ರಚಾರಕರಿಗೆ ಸೂಚಿಸುವಂತೆ ಬಿಜೆಪಿ ಅಧ್ಯಕ್ಷರಿಗೆ ನಿರ್ದೇಶನ ನೀಡಿರುವ ಪತ್ರವನ್ನು ಚುನಾವಣಾ ಆಯೋಗವು ಆದೇಶದಲ್ಲಿ ಉಲ್ಲೇಖಿಸಿದೆ.

ಮೇ.16ರಂದು ತಮ್ಮ ದೂರಿನಲ್ಲಿ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಡೆರೆಕ್ ಒಬ್ರೇನ್ ಗಂಗೋಪಾಧ್ಯಾಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು ಮತ್ತು ಚುನಾವಣಾ ಪ್ರಚಾರ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದರು.

ಮೇ 21ರಂದು ಸಂಜೆ 5 ರಿಂದ 24 ಗಂಟೆಗಳ ಕಾಲ ಪ್ರಚಾರವನ್ನು ಮಾಡದಂತೆ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ ನಿಷೇಧ ವಿಧಿಸಲಾಗಿದೆ. ತಾಮ್ಲುಕ್ ಕ್ಷೇತ್ರಕ್ಕೆ ಮೇ 25ರಂದು ಚುನಾವಣೆ ನಡೆಯಲಿದ್ದು, ಗುರುವಾರ ಪ್ರಚಾರ ಕೊನೆಗೊಳ್ಳಲಿದೆ.

ಮೇ 15ರಂದು ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಗಂಗೋಪಾಧ್ಯಾಯ, ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಾಕಾರಿ ಹೇಳಿಕೆ ನೀಡಿದ್ದರು. ಗಂಗೋಪಾಧ್ಯಾಯ ಅವರು ನೋಟಿಸ್‌ಗೆ ನೀಡಿದ ಉತ್ತರವನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗಿದೆ. ಅವರು ಮಮತಾ ವಿರುದ್ಧ ನೀಡಿದ್ದ ಹೇಳಿಕೆಯನ್ನು ಮತ್ತೊಮ್ಮೆ ಪರಿಶೀಲಿಸಿದ್ದೇವೆ. ಮುಖ್ಯಮಂತ್ರಿ ವಿರುದ್ಧ ‘ಕೀಳುಮಟ್ಟದ ವೈಯಕ್ತಿಕ ದಾಳಿ’ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾಗಿದೆ’ ಎಂದು ಆಯೋಗ ತಿಳಿಸಿದೆ.

ಇದನ್ನು ಓದಿ: ‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...