Homeಮುಖಪುಟಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

ಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

- Advertisement -
- Advertisement -

ಉತ್ತರಖಂಡದ ಕುಮಾನ್ ಬೆಟ್ಟಗಳಲ್ಲಿ 90 ಎಕರೆ ವಿಸ್ತೀರ್ಣದ ಹೋಟೆಲ್ ಮತ್ತು ಟೌನ್‌ಶಿಪ್ ಯೋಜನೆಯ ನಿರ್ಮಾಣವನ್ನು ತಾತ್ಕಾಲಿಕವಾಗಿ ತಡೆಹಿಡಿಯುವ ಮೂಲಕ ಪರಿಸರ ದುರ್ಬಲ ಮತ್ತು ಭೂಕಂಪನ ಪೀಡಿತ ಹಿಮಾಲಯ ಶ್ರೇಣಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಯನ್ನು ತ್ವರಿತಗೊಳಿಸುವ ಸರಕಾರದ ಉದ್ದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ.

ಈ ಕುರಿತು ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಮಧ್ಯಂತರ ಆದೇಶವನ್ನು ಜಾರಿಗೊಳಿಸಿದೆ. ಭೂಮಾಲೀಕ ಬೀರೇಂದ್ರ ಸಿಂಗ್ ಅವರು ಸಲ್ಲಿಸಿದ ವಿಶೇಷ ಅರ್ಜಿಯನ್ನು ಆಧರಿಸಿ, ಹಿರಿಯ ವಕೀಲ ಪಿ.ಬಿ. ಸುರೇಶ್ ಮತ್ತು ವಕೀಲರಾದ ವಿಪಿನ್ ನಾಯರ್ ಮತ್ತು ಕಾರ್ತಿಕ್ ಜಯಶಂಕರ್, ಈ ಪರಿಸರದಲ್ಲಿ ಹೋಟೆಲ್ ಯೋಜನೆಗಳಂತಹ ಬೃಹತ್ ನಿರ್ಮಾಣ ಯೊಜನೆ ಪ್ರಾರಂಭಿಸುವ ಮೊದಲು ಕಡ್ಡಾಯವಾಗಿದ್ದ ಪರಿಸರಕ್ಕೆ ಸಂಬಂಧಿಸಿದ ಕ್ಲಿಯರೆನ್ಸ್‌ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು.

ಪರಿಸರ ದುರ್ಬಲವಾದ ಉತ್ತರಾಖಂಡದಲ್ಲಿ ಹೋಟೆಲ್ ಯೋಜನೆಗಳಂತಹ ಬೃಹತ್ ನಿರ್ಮಾಣಗಳನ್ನು ಪ್ರಾರಂಭಿಸುವ ಮೊದಲು ಕ್ಲಿಯರೆನ್ಸ್‌ ಕಡ್ಡಾಯವಾಗಿದೆ. ದುರ್ಬಲವಾದ ಪರಿಸರ ವಲಯವನ್ನು ರಕ್ಷಿಸಲು  ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೆ ಯೋಜನೆಗೆ ಕ್ಲಿಯರೆನ್ಸ್‌ ಸುಲಭವಾಗಿ ನೀಡಬಹುದೇ? ಕುಮಾನ್ ಹಿಮಾಲಯದ ಪರಿಸರ ದುರ್ಬಲವಾದ ಮತ್ತು ಸೂಕ್ಷ್ಮ ಭೂಕಂಪನ ವಲಯವಾಗಿದೆ, ಆದರೂ ಯೋಜನೆಗೆ ಅನುಮತಿ ನೀಡಲಾಗಿದೆ. ಸರಾಸರಿ ಸಮುದ್ರ ಮಟ್ಟದಿಂದ 6,700 ಅಡಿಗಳಿಗಿಂತ ಹೆಚ್ಚು ಎತ್ತರವಿದೆಯೇ? ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಪ್ರಶ್ನಿಸಿದ್ದರು.

ಕಾನೂನು ಮತ್ತು ಸಮಗ್ರ ಪರಿಸರ ಪ್ರಭಾವದ ಮೌಲ್ಯಮಾಪನ (ಇಐಎ) ಅಡಿಯಲ್ಲಿ ಅಗತ್ಯವಾದ ಅನುಮತಿಯಿಲ್ಲದೆ ರಾಜ್ಯದಲ್ಲಿ ವಾಣಿಜ್ಯ ಯೋಜನೆಗಳನ್ನು ಪ್ರಾರಂಭಿಸುವುದನ್ನು ತಡೆಯುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ನ್ಯಾಯಮೂರ್ತಿ ಓಕಾ ಅವರ ಪೀಠವು ಆಗಸ್ಟ್ 12ಕ್ಕೆ ಪ್ರಕರಣವನ್ನು ಪಟ್ಟಿ ಮಾಡಿದೆ. ಹಿರಿಯ ವಕೀಲರಾದ ಸಿ.ಯು ಸಿಂಗ್ ಮತ್ತು ಆರ್ಯಮ ಸುಂದರಂ ನೇತೃತ್ವದ ತಂಡವು ಪ್ರತಿವಾದಿಗಳನ್ನು ಪ್ರತಿನಿಧಿಸಿದ್ದರು.

ಅರ್ಜಿದಾರರು ಸೆಪ್ಟೆಂಬರ್ 14, 2006ರ ಇಐಎ ಅಧಿಸೂಚನೆಯನ್ನು ಉಲ್ಲೇಖಿಸಿದ್ದಾರೆ, ಇದರಲ್ಲಿ ಯಾವುದೇ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸುವ ಮೊದಲು ಪೂರ್ವ ಪರಿಸರ ಅನುಮತಿ ಅಗತ್ಯವಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಇದು ಪರಿಸರ ವಿಪತ್ತುಗಳಿಗೆ ಕಾರಣವಾಗುವುದರಿಂದ ಅದನ್ನು ಬಲವಾಗಿ ನಿರಾಕರಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಇದನ್ನು ಓದಿ: ಕಾಂಗ್ರೆಸ್‌ ಮುಖಂಡ, ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...