Homeಮುಖಪುಟಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

- Advertisement -
- Advertisement -

ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಏಳು ಮತಗಟ್ಟೆಗಳಲ್ಲಿ ಮಾಚರ್ಲಾ ಕ್ಷೇತ್ರದ ಹಾಲಿ ಶಾಸಕ, ವೈಎಸ್‌ಆರ್‌ಸಿಪಿ ಮುಖಂಡ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಇವಿಎಂಗಳನ್ನು ಧ್ವಂಸ ಮಾಡಿದ್ದು, ಶಾಸಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇವಿಎಂ ಧ್ವಂಸ ಪ್ರಕರಣದಲ್ಲಿ ಶಾಸಕರನ್ನು ಆರೋಪಿ ಎಂದು ಹೆಸರಿಸಲಾಗಿದ್ದು, ಸೋಲಿನ ಭೀತಿಯಿಂದ ಶಾಸಕರು ಮತ್ತು ವೈಎಸ್‌ಆರ್‌ಸಿಪಿ ಇಂತಹ ವಿಧ್ವಂಸಕ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಪ್ರತಿಪಕ್ಷ ತೆಲುಗು ದೇಶಂ ಪಕ್ಷ ಹೇಳಿಕೊಂಡಿದೆ.

ಮೇ 13ರಂದು ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಕ್ಷೇತ್ರಗಳು ಮತ್ತು ಎಲ್ಲಾ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಾಗ ಈ ಘಟನೆ ನಡೆದಿದೆ. ಹಲವೆಡೆ ಚುನಾವಣೆಯ ದಿನ ಹಿಂಸಾಚಾರ ನಡೆದಿದ್ದು, ಆ ನಂತರವೂ ಅಲ್ಲಲ್ಲಿ ಹಲವೆಡೆ ಅಹಿತಕರ ಘಟನೆ ನಡೆದಿದೆ.

ವೈರಲ್‌ ವಿಡಿಯೋದಲ್ಲಿ ಏನದೆ?

ಶಾಸಕ ರಾಮಕೃಷ್ಣ ರೆಡ್ಡಿ ಪಾಲ್ವಾಯಿ ಗೇಟ್ ಮತಗಟ್ಟೆ ಕೇಂದ್ರಕ್ಕೆ ಹೋಗಿದ್ದು, ಅಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಅವರನ್ನು ಸ್ವಾಗತಿಸಲು ಎದ್ದು ನಿಂತಿದ್ದಾರೆ. ಎಂಎಲ್ಎ ಒಂದು ಮಾತನ್ನೂ ಹೇಳದೆ, ಇವಿಎಂ ಇರಿಸಿರುವ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿದ್ದ ವಿವಿಪ್ಯಾಟ್‌ ಯಂತ್ರವನ್ನು ಎತ್ತಿಕೊಂಡು ನೆಲಕ್ಕೆ ಎಸೆದಿದ್ದಾರೆ. ಈ ವೇಳೆ ಮತಗಟ್ಟೆಯಲ್ಲಿದ್ದ ಓರ್ವರು ಶಾಸಕರ ಸಹಾಯಕರಿಗೆ ಹಲ್ಲೆ ನಡೆಸಿದ್ದಾರೆ, ಶಾಸಕರ ಮೇಲೂ ಹಲ್ಲೆಗೆ ಮುಂದಾಗುತ್ತಾರೆ, ಈ ವೇಳೆ ಶಾಸಕರು ಆತನಿಗೆ ಕೈಯ್ಯಲ್ಲೇ ಬೆದರಿಕೆ ಹಾಕಿ ಮತಗಟ್ಟೆಯಿಂದ ನಿರ್ಗಮಿಸುತ್ತಾರೆ. ನಂತರ ಚುನಾವಣಾ ಅಧಿಕಾರಿಯೊಬ್ಬರು ನೆಲದ ಮೇಲೆ ಬಿದ್ದಿರುವ ವಿವಿಪ್ಯಾಟ್‌ನ್ನು ರೆಕಾರ್ಡ್ ಮಾಡಿದ್ದಾರೆ.

ಮಾಚರ್ಲ ಪಲ್ನಾಡು ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ, ಈ ಕ್ಷೇತ್ರದಲ್ಲಿ ಮತದಾನದ ದಿನ ಮತ್ತು ನಂತರ ಹೆಚ್ಚಾಗಿ ಹಿಂಸಾಚಾರ ನಡೆದಿತ್ತು.

ಘಟನೆ ಬಗ್ಗೆ ಟಿಡಿಪಿ  ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ವೈಎಸ್‌ಆರ್‌ಸಿಪಿ ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮಾಚರ್ಲಾ ಕ್ಷೇತ್ರದ ಪಾಲ್ವಾಯಿ ಗೇಟ್ ಮತದಾನ ಕೇಂದ್ರದಲ್ಲಿ ಇವಿಎಂನ್ನು ಧ್ವಂಸಗೊಳಿಸಿದ್ದಾರೆ. ಚುನಾವಣಾ ಆಯೋಗವು ರಾಮಕೃಷ್ಣ ರೆಡ್ಡಿ  ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಸೋಲಿನ ಭಯದಿಂದ ಇವಿಎಂಗಳನ್ನು ರೆಡ್ಡಿ ಧ್ವಂಸಗೊಳಿಸಿದ್ದಾರೆ. ಜೂನ್ 4ರಂದು ಜನರು ವೈಎಸ್‌ಆರ್‌ಸಿಪಿಯ ಬಣ ರಾಜಕೀಯದ ಬಗ್ಗೆ ನಿಜವಾದ ತೀರ್ಪು ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಮಾಚರ್ಲಾ ಅಸೆಂಬ್ಲಿ ಕ್ಷೇತ್ರದಲ್ಲಿ ಪಿಎಸ್ ಸಂಖ್ಯೆ 202ರ ಜೊತೆಗೆ 7 ಮತಗಟ್ಟೆ ಕೇಂದ್ರಗಳಲ್ಲಿ ರೆಡ್ಡಿ ಇವಿಎಂಗಳನ್ನು ಧ್ವಂಸ ಮಾಡುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿದೆ ಎಂದು ಚುನಾವಣಾ ಆಯೋಗ(ಇಸಿ) ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಗೆ ಸಂಬಂಧಿಸಿ ತನಿಖೆಗೆ ಪಲ್ನಾಡು ಜಿಲ್ಲಾ ಚುನಾವಣಾಧಿಕಾರಿಗಳು ಎಲ್ಲಾ ಮತಗಟ್ಟೆಗಳ ವಿಡಿಯೋ ದೃಶ್ಯಾವಳಿಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್ ಕುಮಾರ್ ಅವರಿಗೆ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗಿದೆ. ಪೊಲೀಸರು ಶಾಸಕರನ್ನು ಆರೋಪಿ ಎಂದು ಹೆಸರಿಸಿದ್ದು, ಭವಿಷ್ಯದಲ್ಲಿ ಯಾರೂ ಇಂತಹ ದುಷ್ಕೃತ್ಯಗಳನ್ನು ಎಸಗಲು ಧೈರ್ಯ ಮಾಡಬಾರದು ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನು ಓದಿ: ಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...