Homeಮುಖಪುಟಪ್ಯಾಲೆಸ್ತೀನ್ ಒಂದು ರಾಷ್ಟ್ರವೆಂದು ಮಾನ್ಯ ಮಾಡಿದ ನಾರ್ವೆ, ಸ್ಪೇನ್, ಐರ್ಲೆಂಡ್

ಪ್ಯಾಲೆಸ್ತೀನ್ ಒಂದು ರಾಷ್ಟ್ರವೆಂದು ಮಾನ್ಯ ಮಾಡಿದ ನಾರ್ವೆ, ಸ್ಪೇನ್, ಐರ್ಲೆಂಡ್

ಐತಿಹಾಸಿಕ ನಿರ್ಧಾರದ ಬೆನ್ನಲ್ಲೇ ನಾರ್ವೆ, ಐರ್ಲೆಂಡ್‌ನಿಂದ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡ ಇಸ್ರೇಲ್

- Advertisement -
- Advertisement -

ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ದೇಶಗಳು ಪ್ಯಾಲೆಸ್ತೀನ್ ಅನ್ನು ‘ಪ್ರತ್ಯೇಖ ರಾಷ್ಟ್ರ’ ಎಂದು ಘೋಷಿಗಳು ನಿರ್ಧರಿಸಿವೆ. ಮೇ 28ರಿಂದ ಅಧಿಕೃತ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ.

ಇದು ಇಸ್ರೇಲ್ ವಿರುದ್ದ ಅಥವಾ ಹಮಾಸ್ ಪರವಾದ ನಿರ್ಧಾರವಲ್ಲ. ಇದು ‘ಶಾಂತಿಯ ಪರ’ವಾದ ನಿರ್ಧಾರ ಎಂದು ಸ್ಪೇನ್‌ ಹೇಳಿದೆ.

“ದ್ವಿರಾಷ್ಟ್ರ ಪರಿಹಾರ ಇಸ್ರೇಲ್‌ನ ಹಿತಾಸಕ್ತಿಯಲ್ಲಿದೆ” ಎಂದು ನಾರ್ವೆಯ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಬುಧವಾರ ಹೇಳಿದ್ದಾರೆ. ಮೇ 28ರಿಂದ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ಸಿಗಲಿದೆ. ದ್ವಿರಾಷ್ಟ್ರ ಪರಿಹಾರವಲ್ಲದೆ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸದು ಎಂದಿದ್ದಾರೆ.

ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಖ ರಾಷ್ಟ್ರ ಎಂದು ಘೋಷಿಸುವುದು ಕ್ರೂರ ಆಕ್ರಮಣದಲ್ಲಿ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜನರನ್ನು ಬೆಂಬಲಿಸುವ ಕ್ರಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾರ್ವೆಯ ನಿರ್ಧಾರದ ಬೆನ್ನಲ್ಲೇ ಐರ್ಲೆಂಡ್ ಪ್ರಧಾನಿ ಸೈಮನ್ ಹ್ಯಾರಿಸ್ ಅವರು ತಮ್ಮ ದೇಶ ಕೂಡ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲಿದೆ ಎಂದಿದ್ದಾರೆ.

“ಇಂದು ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ದೇಶವೆಂದು ಗುರುತಿಸಲು ನಿರ್ಧರಿಸಿದ್ದೇವೆ. ನಾವು ಪ್ರತಿಯೊಬ್ಬರೂ ಈ ನಿರ್ಧಾರವನ್ನು ಜಾರಿಗೆ ತರಲು ಅಗತ್ಯವಿರುವ ಎಲ್ಲಾ ರಾಷ್ಟ್ರೀಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹ್ಯಾರಿಸ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಝ್ ಅವರು, ನಮ್ಮ ದೇಶದ ಮಂತ್ರಿ ಮಂಡಲ (ಸರ್ಕಾರ) ಮೇ 28ರಿಂದ ಜಾರಿಗೆ ಬರುವಂತೆ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಸ್ಪ್ಯಾನಿಷ್ ಸಂಸತ್ತಿನಲ್ಲಿ ಮಾತನಾಡಿದ ಸ್ಯಾಂಚೆಝ್, “ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾದಲ್ಲಿ ವಿನಾಶಕಾರಿ ಆಕ್ರಮಣ ನಡೆಸುವ ಮೂಲಕ ದ್ವಿರಾಷ್ಟ್ರ ಪರಿಹಾರವನ್ನು ಅಪಾಯದಲ್ಲಿರಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಮಾಲ್ಟಾ ಮತ್ತು ಸ್ಲೊವೇನಿಯಾ ಕೂಡ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ದೇಶವೆಂದು ಘೋಷಿಸುವ ಸಾಧ್ಯತೆ ಇದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐರ್ಲೆಂಡ್, ಸ್ಪೇನ್ ಮತ್ತು ನಾರ್ವೆಯ ನಾಯಕರು ಇತರ ರಾಷ್ಟ್ರಗಳು ಕೂಡ ತಮ್ಮಂತೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿದ್ದಾರೆ.

ರಾಯಭಾರಿಗಳನ್ನು ವಾಪಸ್ ಕರೆಸಿದ ಇಸ್ರೇಲ್ :

ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲು ನಿರ್ಧರಿಸಿದ ಬೆನ್ನಲ್ಲೇ ಇಸ್ರೇಲ್ ಐರ್ಲೆಂಡ್ ಮತ್ತು ನಾರ್ವೆಯಿಂದ ತನ್ನ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

“ಐರ್ಲೆಂಡ್ ಮತ್ತು ನಾರ್ವೆಯ ನಿರ್ಧಾರ ನೋಡಿ ಇಸ್ರೇಲ್ ಸುಮ್ಮನೆ ಕೂರುವುದಿಲ್ಲ ಎಂದು ತೀಕ್ಷ್ಣವಾದ ಸಂದೇಶವನ್ನು ನೀಡಲು ಬಯಸುತ್ತೇನೆ. ಸ್ವೇನ್‌ನಿಂದ ಕೂಡ ರಾಯಭಾರಿಯನ್ನು ವಾಪಸ್ ಕರೆಸಿಕೊಳ್ಳುತ್ತೇವೆ” ಎಂದು ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡುವುದು ‘ಭಯೋತ್ಪಾದನೆಗೆ ನೀಡುವ ಬಹುಮಾನ’. ಇದು ಗಾಝಾದಲ್ಲಿ ನಡೆಯುತ್ತಿರುವ ಯುದ್ಧವನ್ನು ಸಂಧಾನದ ಮೂಲಕ ಕೊನೆಗೊಳಿಸುವ ಪ್ರಯತ್ನಕ್ಕೆ ಅಡ್ಡಿಯಾಗಲಿದೆ ಎಂದು ಕಾಟ್ಜ್ ವಿರೋಧ ವ್ಯಕ್ತಪಡಿಸಿದ್ದಾರೆ.

ಮೂರು ರಾಷ್ಟ್ರಗಳ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ‘ಪ್ಯಾಲೆಸ್ಟೀನಿಯನ್ ಲಿಬರೇಶನ್ ಆರ್ಗನೈಸೇಶನ್ (ಪಿಎಲ್‌ಒ) ನ ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹುಸೇನ್ ಅಲ್-ಶೇಖ್ ” ಸಂಕಟ, ನೋವು, ಉದ್ಯೋಗ, ವರ್ಣಭೇದ ನೀತಿ, ಕೊಲೆ, ದಬ್ಬಾಳಿಕೆ, ನಿಂದನೆ ಮತ್ತು ವಿನಾಶಕ್ಕೆ ಒಳಗಾದ ಪ್ಯಾಲೆಸ್ತೀನ್ ಜನರ ಪ್ರತ್ಯೇಕ ರಾಷ್ಟ್ರ ಹೋರಾಟದ ಸುದೀರ್ಘ ದಶಕಗಳ ನಂತರ ಸತ್ಯ ಮತ್ತು ನ್ಯಾಯದ ವಿಚಾರದಲ್ಲಿ ಜಗತ್ತು ಜಯಗಳಿಸುವ ಐತಿಹಾಸಿಕ ಕ್ಷಣವಾಗಿದೆ ಇದು” ಎಂದಿದ್ದಾರೆ.

ಹಮಾಸ್ ಮೂರು ಯುರೋಪಿಯನ್ ರಾಷ್ಟ್ರಗಳ ನಿರ್ಧಾರವನ್ನು “ಪ್ರಮುಖ ಹೆಜ್ಜೆ” ಎಂದು ಕರೆದಿದೆ.

ಇದನ್ನೂ ಓದಿ : ವಿಧಿ 370 ರದ್ದತಿ ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...