Homeಮುಖಪುಟಪ್ಯಾಲೆಸ್ತೀನ್ ಒಂದು ರಾಷ್ಟ್ರವೆಂದು ಮಾನ್ಯ ಮಾಡಿದ ನಾರ್ವೆ, ಸ್ಪೇನ್, ಐರ್ಲೆಂಡ್

ಪ್ಯಾಲೆಸ್ತೀನ್ ಒಂದು ರಾಷ್ಟ್ರವೆಂದು ಮಾನ್ಯ ಮಾಡಿದ ನಾರ್ವೆ, ಸ್ಪೇನ್, ಐರ್ಲೆಂಡ್

ಐತಿಹಾಸಿಕ ನಿರ್ಧಾರದ ಬೆನ್ನಲ್ಲೇ ನಾರ್ವೆ, ಐರ್ಲೆಂಡ್‌ನಿಂದ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡ ಇಸ್ರೇಲ್

- Advertisement -
- Advertisement -

ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ದೇಶಗಳು ಪ್ಯಾಲೆಸ್ತೀನ್ ಅನ್ನು ‘ಪ್ರತ್ಯೇಖ ರಾಷ್ಟ್ರ’ ಎಂದು ಘೋಷಿಗಳು ನಿರ್ಧರಿಸಿವೆ. ಮೇ 28ರಿಂದ ಅಧಿಕೃತ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ.

ಇದು ಇಸ್ರೇಲ್ ವಿರುದ್ದ ಅಥವಾ ಹಮಾಸ್ ಪರವಾದ ನಿರ್ಧಾರವಲ್ಲ. ಇದು ‘ಶಾಂತಿಯ ಪರ’ವಾದ ನಿರ್ಧಾರ ಎಂದು ಸ್ಪೇನ್‌ ಹೇಳಿದೆ.

“ದ್ವಿರಾಷ್ಟ್ರ ಪರಿಹಾರ ಇಸ್ರೇಲ್‌ನ ಹಿತಾಸಕ್ತಿಯಲ್ಲಿದೆ” ಎಂದು ನಾರ್ವೆಯ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಬುಧವಾರ ಹೇಳಿದ್ದಾರೆ. ಮೇ 28ರಿಂದ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ಸಿಗಲಿದೆ. ದ್ವಿರಾಷ್ಟ್ರ ಪರಿಹಾರವಲ್ಲದೆ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸದು ಎಂದಿದ್ದಾರೆ.

ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಖ ರಾಷ್ಟ್ರ ಎಂದು ಘೋಷಿಸುವುದು ಕ್ರೂರ ಆಕ್ರಮಣದಲ್ಲಿ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜನರನ್ನು ಬೆಂಬಲಿಸುವ ಕ್ರಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾರ್ವೆಯ ನಿರ್ಧಾರದ ಬೆನ್ನಲ್ಲೇ ಐರ್ಲೆಂಡ್ ಪ್ರಧಾನಿ ಸೈಮನ್ ಹ್ಯಾರಿಸ್ ಅವರು ತಮ್ಮ ದೇಶ ಕೂಡ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲಿದೆ ಎಂದಿದ್ದಾರೆ.

“ಇಂದು ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ದೇಶವೆಂದು ಗುರುತಿಸಲು ನಿರ್ಧರಿಸಿದ್ದೇವೆ. ನಾವು ಪ್ರತಿಯೊಬ್ಬರೂ ಈ ನಿರ್ಧಾರವನ್ನು ಜಾರಿಗೆ ತರಲು ಅಗತ್ಯವಿರುವ ಎಲ್ಲಾ ರಾಷ್ಟ್ರೀಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹ್ಯಾರಿಸ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಝ್ ಅವರು, ನಮ್ಮ ದೇಶದ ಮಂತ್ರಿ ಮಂಡಲ (ಸರ್ಕಾರ) ಮೇ 28ರಿಂದ ಜಾರಿಗೆ ಬರುವಂತೆ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಸ್ಪ್ಯಾನಿಷ್ ಸಂಸತ್ತಿನಲ್ಲಿ ಮಾತನಾಡಿದ ಸ್ಯಾಂಚೆಝ್, “ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾದಲ್ಲಿ ವಿನಾಶಕಾರಿ ಆಕ್ರಮಣ ನಡೆಸುವ ಮೂಲಕ ದ್ವಿರಾಷ್ಟ್ರ ಪರಿಹಾರವನ್ನು ಅಪಾಯದಲ್ಲಿರಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಮಾಲ್ಟಾ ಮತ್ತು ಸ್ಲೊವೇನಿಯಾ ಕೂಡ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ದೇಶವೆಂದು ಘೋಷಿಸುವ ಸಾಧ್ಯತೆ ಇದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐರ್ಲೆಂಡ್, ಸ್ಪೇನ್ ಮತ್ತು ನಾರ್ವೆಯ ನಾಯಕರು ಇತರ ರಾಷ್ಟ್ರಗಳು ಕೂಡ ತಮ್ಮಂತೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿದ್ದಾರೆ.

ರಾಯಭಾರಿಗಳನ್ನು ವಾಪಸ್ ಕರೆಸಿದ ಇಸ್ರೇಲ್ :

ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲು ನಿರ್ಧರಿಸಿದ ಬೆನ್ನಲ್ಲೇ ಇಸ್ರೇಲ್ ಐರ್ಲೆಂಡ್ ಮತ್ತು ನಾರ್ವೆಯಿಂದ ತನ್ನ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

“ಐರ್ಲೆಂಡ್ ಮತ್ತು ನಾರ್ವೆಯ ನಿರ್ಧಾರ ನೋಡಿ ಇಸ್ರೇಲ್ ಸುಮ್ಮನೆ ಕೂರುವುದಿಲ್ಲ ಎಂದು ತೀಕ್ಷ್ಣವಾದ ಸಂದೇಶವನ್ನು ನೀಡಲು ಬಯಸುತ್ತೇನೆ. ಸ್ವೇನ್‌ನಿಂದ ಕೂಡ ರಾಯಭಾರಿಯನ್ನು ವಾಪಸ್ ಕರೆಸಿಕೊಳ್ಳುತ್ತೇವೆ” ಎಂದು ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡುವುದು ‘ಭಯೋತ್ಪಾದನೆಗೆ ನೀಡುವ ಬಹುಮಾನ’. ಇದು ಗಾಝಾದಲ್ಲಿ ನಡೆಯುತ್ತಿರುವ ಯುದ್ಧವನ್ನು ಸಂಧಾನದ ಮೂಲಕ ಕೊನೆಗೊಳಿಸುವ ಪ್ರಯತ್ನಕ್ಕೆ ಅಡ್ಡಿಯಾಗಲಿದೆ ಎಂದು ಕಾಟ್ಜ್ ವಿರೋಧ ವ್ಯಕ್ತಪಡಿಸಿದ್ದಾರೆ.

ಮೂರು ರಾಷ್ಟ್ರಗಳ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ‘ಪ್ಯಾಲೆಸ್ಟೀನಿಯನ್ ಲಿಬರೇಶನ್ ಆರ್ಗನೈಸೇಶನ್ (ಪಿಎಲ್‌ಒ) ನ ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹುಸೇನ್ ಅಲ್-ಶೇಖ್ ” ಸಂಕಟ, ನೋವು, ಉದ್ಯೋಗ, ವರ್ಣಭೇದ ನೀತಿ, ಕೊಲೆ, ದಬ್ಬಾಳಿಕೆ, ನಿಂದನೆ ಮತ್ತು ವಿನಾಶಕ್ಕೆ ಒಳಗಾದ ಪ್ಯಾಲೆಸ್ತೀನ್ ಜನರ ಪ್ರತ್ಯೇಕ ರಾಷ್ಟ್ರ ಹೋರಾಟದ ಸುದೀರ್ಘ ದಶಕಗಳ ನಂತರ ಸತ್ಯ ಮತ್ತು ನ್ಯಾಯದ ವಿಚಾರದಲ್ಲಿ ಜಗತ್ತು ಜಯಗಳಿಸುವ ಐತಿಹಾಸಿಕ ಕ್ಷಣವಾಗಿದೆ ಇದು” ಎಂದಿದ್ದಾರೆ.

ಹಮಾಸ್ ಮೂರು ಯುರೋಪಿಯನ್ ರಾಷ್ಟ್ರಗಳ ನಿರ್ಧಾರವನ್ನು “ಪ್ರಮುಖ ಹೆಜ್ಜೆ” ಎಂದು ಕರೆದಿದೆ.

ಇದನ್ನೂ ಓದಿ : ವಿಧಿ 370 ರದ್ದತಿ ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...