Homeಫ್ಯಾಕ್ಟ್‌ಚೆಕ್FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

- Advertisement -
- Advertisement -

“ನವ ಭಾರತ ವೇಗವಾಗಿ ಮುನ್ನೆಡೆಯುತ್ತಿದೆ. 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟ್‌ ಅಪ್‌ಗಳು, ಈಗ 1 ಲಕ್ಷಕ್ಕೂ ಅಧಿಕ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿವೆ. ಅದಕ್ಕೆ ದೇಶದಲ್ಲಿ ಮೋದಿಜಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಪೋಸ್ಟ್ ಕಾರ್ಟ್ ಕನ್ನಡ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಕೂಡ, “2014ರಲ್ಲಿ ದೇಶದಲ್ಲಿ ಕೇವಲ 350 ಸ್ಟಾರ್ಟ್‌ ಅಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಈ ಕುರಿತು ಎಕಾನಾಮಿಕ್ಸ್ ಟೈಮ್ಸ್ 28, ಏಪ್ರಿಲ್ 2024ರಂದು ವರದಿ ಮಾಡಿತ್ತು.

“ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಆಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದರು. ಈ ಕುರಿತು ಮೇ 20, 2024ರಂದು ಎಎನ್‌ಐ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಫ್ಯಾಕ್ಟ್‌ಚೆಕ್ : 2014ಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್‌ ಅಪ್‌ಗಳಿದ್ದದ್ದು ನಿಜವೇ? ಎಂದು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಸ್ಟ್ಯಾಟಿಸ್ಟ ಅಂಕಿ ಅಂಶಗಳ ಎಂಬ ವೆಬ್‌ಸೈಟ್‌ನಲ್ಲಿ ಭಾರತದ ಸ್ಟಾರ್ಟ್ ಅಪ್‌ಗಳ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಟ್ಯಾಟಿಸ್ಟ ಹೇಳಿದಂತೆ 2012ನೇ ವರ್ಷದಲ್ಲಿ ಭಾರತದಲ್ಲಿ 5,000 ಸ್ಟಾರ್ಟ್‌ ಅಪ್‌ಗಳು ನೋಂದಾಯಿಸಿಕೊಂಡಿದ್ದವು. 2013ರಲ್ಲಿ ಈ ಸಂಖ್ಯೆ ಕುಸಿದು 3,000 ಹೊಸ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿತ್ತು. 2014ರಲ್ಲಿ 4,500 ಮತ್ತು 2015ರಲ್ಲಿ ಬರೋಬ್ಬರಿ 8,000 ಹೊಸ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿ ಪ್ರಾರಂಭಗೊಂಡಿವೆ.

ಈ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ 2014ರಲ್ಲಿ ಅಥವಾ ಅದಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬ ಹೇಳಿಕೆ ಸುಳ್ಳು.

ಸ್ಟ್ಯಾಟಿಸ್ಟದ ಅಂಕಿ ಅಂಶಗಳ ಪ್ರಕಾರ, 2019ರ ಬಳಿಕ ದೇಶದಲ್ಲಿ ಹೊಸ ಸ್ಟಾರ್ಟ್‌ ಅಪ್‌ಗಳ ನೋಂದಣಿ ಸಂಪೂರ್ಣ ಕುಸಿದಿದೆ. 2019ರಲ್ಲಿ 3,500, 2020ರಲ್ಲಿ 1,250, 2021ರಲ್ಲಿ 1,436, 2022ರಲ್ಲಿ 652 ಮತ್ತು 2023ರಲ್ಲಿ ಕೇವಲ 489 ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ.

ಸ್ಟ್ಯಾಟಿಸ್ಟದ ಅಂಕಿ ಅಂಶಗಳು ನಂಬಲು ಅರ್ಹವಾಗಿದೆ. ಏಕೆಂದರೆ, ಈ ವೆಬ್‌ಸೈಟ್‌ನ ಅಂಕಿ ಅಂಶಗಳನ್ನು ಪ್ರಮುಖ ಕಂಪನಿಗಳಾದ ಗೂಗಲ್, ಅಡೋಬ್, ಪಿ&ಜಿ ಸ್ಯಾಮ್‌ಸಂಗ್ ಕೂಡ ಪರಿಗಣಿಸುತ್ತವೆ.

ಸದ್ಯ ಭಾರತದಲ್ಲಿ 1,12,718 ಸ್ಟಾರ್ಟ್‌ ಅಪ್‌ಗಳಿವೆ ಎಂದು ಇನ್ವೆಸ್ಟ್ ಇಂಡಿಯಾ ವರದಿ ಮಾಡಿದೆ. ಆದರೆ ಅವುಗಳಲ್ಲಿ ಶೇ.95ಗಿಂತಲೂ ಹೆಚ್ಚಿನ ಸ್ಟಾರ್ಟ್‌ ಅಪ್‌ಗಳು ವಿಫಲವಾಗಿವೆ ಎಂದು ತಜ್ಞರ ಹೇಳಿಕೆಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.
ಒಟ್ಟಾರೆಯಾಗಿ ಹೇಳುವುದಾದರೆ, ನಮಗೆ 2014ರ ಬಳಿಕ, ಅಂದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ಟಾರ್ಟ್‌ ಅಪ್‌ ಇಂಡಿಯಾ, ಡಿಜಿಟಿಲ್ ಇಂಡಿಯಾದಂತಹ ಯೋಜನೆಗಳನ್ನು ಬಳಸಿಕೊಂಡು ಅನೇಕ ಸ್ಟಾರ್ಟ್‌ ಅಪ್‌ಗಳು ಪ್ರಾರಂಭಗೊಂಡಿರುವುವುದು ನಿಜ. ಆದರೆ, ಇದೇ ರೀತಿ 2014ಕ್ಕಿಂತ ಮುನ್ನ ಕಾಂಗ್ರೆಸ್ ಸರ್ಕಾರದ ಅಧಿಕಾರವದಿಯಲ್ಲೂ ಅನೇಕ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ. 2014ರಲ್ಲಿ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳು ಮಾತ್ರ ಇತ್ತು ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...