Homeಮುಖಪುಟಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

ಜಾತಿ, ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಬಿಜೆಪಿ, ಕಾಂಗ್ರೆಸ್‌ಗೆ ಚು.ಆಯೋಗ ಸೂಚನೆ

- Advertisement -
- Advertisement -

ಜಾತಿ, ಸಮುದಾಯ ಧರ್ಮದ ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಮಾಡಬೇಡಿ, ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಚು.ಆಯೋಗ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಖಡಕ್‌ ಸೂಚನೆಯನ್ನು ನೀಡಿದೆ.

ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ‘ಸ್ಟಾರ್ ಪ್ರಚಾರಕರ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆ’ ಆರೋಪದ ಮೇಲೆ ನೋಟಿಸ್ ಜಾರಿ ಮಾಡಿದ ಸುಮಾರು ಒಂದು ತಿಂಗಳ ನಂತರ, ಭಾರತೀಯ ಚುನಾವಣಾ ಆಯೋಗವು ಇಂದು ಬಿಜೆಪಿ ಸ್ಟಾರ್ ಪ್ರಚಾರಕರಿಗೆ ಕೋಮುವಾದಿ ಭಾಷಣ ಮಾಡದಂತೆ ಸೂಚಿಸಿದೆ. ವಿರೋಧ ಪಕ್ಷದವರು ‘ಸಂವಿಧಾನವನ್ನು ರದ್ದುಗೊಳಿಸಬಹುದು’ ಎಂದು ಹೇಳುವುದನ್ನು ನಿಲ್ಲಿಸಬೇಕು ಎಂದು ಹೇಳಿದೆ. ಈ ಮೊದಲು ನೀಡಿದ್ದ ನೊಟೀಸ್‌ಗೆ ಸಂಬಂಧಿಸಿ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷದ ಅಧ್ಯಕ್ಷರುಗಳು ತಮ್ಮ ಸ್ಟಾರ್‌ ಪ್ರಚಾರಕರನ್ನು ಸಮರ್ಥಿಸಿಕೊಂಡಿದ್ದರು.

ಜಾತಿ, ಸಮುದಾಯ, ಭಾಷೆ ಮತ್ತು ಧಾರ್ಮಿಕ ನೆಲೆಯಲ್ಲಿ ಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಮತ್ತು  ಭಾರತದ ಸಾಮಾಜಿಕ-ಸಾಂಸ್ಕೃತಿಕ ನೆಲೆಗಟ್ಟನ್ನು ಚುನಾವಣೆಗಾಗಿ ಬಲಿಪಶು ಮಾಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗವು ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಹೇಳಿದೆ.

ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ವಿರೋಧ ಪಕ್ಷದ ಆರೋಪದ ಹಿನ್ನೆಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಈ ಮೊದಲು ಇದೇ ರೀತಿಯ ಸೂಚನೆಗಳನ್ನು ನೀಡಿತ್ತು. ಪಕ್ಷದ ಸ್ಟಾರ್ ಪ್ರಚಾರಕರಿಗೆ ಧಾರ್ಮಿಕ ಮತ್ತು ಕೋಮು ಪ್ರಚೋದಿಸುವ ಪ್ರಚಾರದಿಂದ ದೂರವಿರುವಂತೆ ಸೂಚಿಸಿತ್ತು. ಇದಲ್ಲದೆ ಚುನಾವಣಾ ಆಯೋಗವು ರಕ್ಷಣಾ ಪಡೆಗಳನ್ನು ರಾಜಕೀಯಗೊಳಿಸದಂತೆ ಮತ್ತು ಸಶಸ್ತ್ರ ಪಡೆಗಳ ಸಾಮಾಜಿಕ-ಆರ್ಥಿಕ ಸಂಯೋಜನೆಯ ಬಗ್ಗೆ ಸಂಭಾವ್ಯ ವಿಭಜಕ ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್‌ಗೆ ಸೂಚಿಸಿದೆ. ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ‘ಸಂವಿಧಾನವನ್ನು ರದ್ದುಗೊಳಿಸಬಹುದು’ ಎಂಬ ತಪ್ಪು ಅಭಿಪ್ರಾಯವನ್ನು ನೀಡುವ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವಂತೆ ಕಾಂಗ್ರೆಸ್‌ಗೆ ಚುನಾವಣಾ ಆಯೋಗ ಆಗ್ರಹಿಸಿದೆ.

ತಮ್ಮ ಪಕ್ಷದ ಸ್ಟಾರ್ ಪ್ರಚಾರಕರು ತಮ್ಮ ಭಾಷಣವನ್ನು ಸರಿಪಡಿಸಲು, ಭಾಷಣ, ಹೇಳಿಕೆಗಳಲ್ಲಿ ಸಜ್ಜನಿಕೆಯನ್ನು ಕಾಪಾಡಿಕೊಳ್ಳಲು ಔಪಚಾರಿಕ ಟಿಪ್ಪಣಿಗಳನ್ನು ನೀಡುವಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಿಗೆ ಚು. ಆಯೋಗವು ಆಗ್ರಹಿಸಿದೆ.

ಇದನ್ನು ಓದಿ: ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...