Homeಮುಖಪುಟಕೋಲ್ಕತ್ತಾದಲ್ಲಿ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಕೊಲೆ ಪ್ರಕರಣ: ಮೂವರ ಬಂಧನ

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಕೊಲೆ ಪ್ರಕರಣ: ಮೂವರ ಬಂಧನ

- Advertisement -
- Advertisement -

ಭಾರತಕ್ಕೆ ಚಿಕಿತ್ಸೆಗೆಂದು ಬಂದು ಕಳೆದ ವಾರ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅವರನ್ನು ಬುಧವಾರ ಕೋಲ್ಕತ್ತಾದಲ್ಲಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ.

ಘಟನೆ ಬಗ್ಗೆ ಢಾಕಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಂಗ್ಲಾದೇಶದ ಗೃಹ ಸಚಿವ ಅಸಾದುಜ್ಜಮಾನ್ ಖಾನ್, ಇದೊಂದು ಪೂರ್ವ ಯೋಜಿತ ಕೊಲೆ. ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲಾ ಹಂತಕರು ಬಾಂಗ್ಲಾದೇಶೀಯರು ಎಂದು ನಾವು ತಿಳಿದುಕೊಂಡಿದ್ದೇವೆ. ಈಗಾಗಲೇ ಘಟನೆಗೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹತ್ಯೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಈ ಉದ್ದೇಶದ ಬಗ್ಗೆ ನಾವು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇವೆ, ಭಾರತೀಯ ಪೊಲೀಸರು ಪ್ರಕರಣದ ತನಿಖೆಗೆ ಸಹಕರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಮೇ 12ರಂದು ಭಾರತಕ್ಕೆ ಬಂದಿದ್ದರು. ಅವರು ಮೇ 13ರಂದು ಮಧ್ಯಾಹ್ನ ವೈದ್ಯಕೀಯ ತಪಾಸಣೆಗಾಗಿ ಕೋಲ್ಕತ್ತಾ ಬಳಿಯ ಬಿಧಾನನಗರದಲ್ಲಿ ಗೆಳೆಯರ ಜೊತೆ ಹೋದಾಗ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.

ಸಂಸದರು ದೆಹಲಿಗೆ ಪ್ರಯಾಣಿಸುವುದಾಗಿ ತಿಳಿಸಿದ್ದರು. ಆದರೆ ಮೇ 13ರಿಂದ ಅವರು ಯಾರಿಗೂ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಕೋಲ್ಕತ್ತಾದ ಬಿಧಾನಗರ್‌ನಲ್ಲಿರುವ ಅವರ ಸ್ನೇಹಿತರೊಬ್ಬರು ಹೇಳಿದ್ದಾರೆ.

ಸಂಸದರ ಸ್ನೇಹಿತ ಗೋಪಾಲ್ ವಿಶ್ವಾಸ್ ಅವರಿಗೆ ಸಂಸದರ ಪುತ್ರಿ ತನ್ನ ತಂದೆಯನ್ನು ಸಂಪರ್ಕಿಸಲು ಸಾಧ್ಯವಾಗದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಸಂಪರ್ಕ ಸಿಗದ ಹಿನ್ನೆಲೆ ಕೋಲ್ಕತ್ತಾದ ಬಿಧಾನನಗರದ ಬಾರಾನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ನಾಪತ್ತೆ ದೂರು ದಾಖಲಿಸಲಾಗಿತ್ತು.

ಮೇ 16ರಂದು ಬೆಳಿಗ್ಗೆ ಅನ್ವರುಲ್ ಅಝೀಂ ಅವರು ತನ್ನ ಸಹಾಯಕನಿಗೆ ಕರೆ ಮಾಡಿದ್ದರು, ಆದರೆ ಸಂಪರ್ಕ ಸಾಧ್ಯವಾಗಲಿಲ್ಲ. ನಂತರ, ಅವರ ಪಿಎ ಅವರನ್ನು ಮರಳಿ ಕರೆ ಮಾಡಿದಾಗ ಅವರು ಉತ್ತರಿಸಲಿಲ್ಲ ಎಂದು ಮೇ 18ರಂದು ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಾಂಗ್ಲಾದೇಶದ ಸಚಿವ ಶಾಬನ್ ಮಹಮೂದ್ ಈ ಬಗ್ಗೆ ಮಾತನಾಡಿದ್ದು, ನಮ್ಮ ಗೃಹ ಸಚಿವರು ಘೋಷಿಸಿದಂತೆ, ಇದು ಸಂಭವಿಸಿದೆ ಎಂದು ನಾನು ಖಂಡಿತವಾಗಿ ನಂಬುತ್ತೇನೆ. ಆದರೆ ನಮಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಭಾರತ ಸರಕಾರದಿಂದ ಬಂದಿಲ್ಲ. ನಾವು ಕಾಯಬೇಕಾಗಿದೆ, ಆದರೆ ನಮ್ಮ ಗೃಹ ಸಚಿವರು ಈಗಾಗಲೇ ಘೋಷಿಸಿರುವುದರಿಂದ ಅವರನ್ನು ಕೊಂದಿರಬಹುದು ಅಥವಾ ಹತ್ಯೆ ಮಾಡಿರಬಹುದು ಎಂದು ನಾವು ಭಾವಿಸುತ್ತೇವೆ. ಘಟನೆಗೆ ಹಲವಾರು ಕಾರಣಗಳಿರಬಹುದು. ಆದರೆ ನಮಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

 ಇದನ್ನು ಓದಿ: ಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿ ವಿಚಾರದಲ್ಲಿ ಕೇಂದ್ರದಿಂದ ಯಾವುದೇ ಸ್ಪಂದನೆಯಿಲ್ಲ: ಗೃಹ ಸಚಿವ ಪರಮೇಶ್ವರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...