Homeಮುಖಪುಟಹಳೆಯ ಹೇಳಿಕೆ ಉಲ್ಲೇಖಿಸಿದ ಕರಣ್ ಥಾಪರ್: ಸಿಟ್ಟಾದ ಪ್ರಶಾಂತ್ ಕಿಶೋರ್

ಹಳೆಯ ಹೇಳಿಕೆ ಉಲ್ಲೇಖಿಸಿದ ಕರಣ್ ಥಾಪರ್: ಸಿಟ್ಟಾದ ಪ್ರಶಾಂತ್ ಕಿಶೋರ್

ಹಿಮಾಚಲದಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದಿದ್ದನ್ನು ನೆನಪಿಸಿದ್ದಕ್ಕೆ ತಬ್ಬಿಬ್ಬಾದ ಚುನಾವಣಾ ತಂತ್ರಜ್ಞ

- Advertisement -
- Advertisement -

‘ದಿ ವೈರ್’ ಗಾಗಿ ಕರಣ್ ಥಾಪರ್ ನಡೆಸಿದ ಸಂದರ್ಶನದಲ್ಲಿ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಚುನಾವಣಾ ಫಲಿತಾಂಶಗಳ ಕುರಿತ ತನ್ನ ಹಳೆಯ ಭವಿಷ್ಯವಾಣಿಗಳ ಬಗ್ಗೆ ಉಲ್ಲೇಖಿಸಿದ್ದಕ್ಕೆ ತೀವ್ರ ಸಿಟ್ಟಾದ ಘಟನೆ ನಡೆದಿದೆ.

ಕರಣ್ ಥಾಪರ್ ಅವರು ಪ್ರಶಾಂತ್ ಕಿಶೋರ್ ಅವರ ಈ ಹಿಂದಿನ ಎಕ್ಸ್‌ ಪೋಸ್ಟ್‌ ಒಂದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆದರೆ, ಪ್ರಶಾಂತ್ ಕಿಶೋರ್ ಮಾತ್ರ ತಾನು ಆ ರೀತಿ ಹೇಳಿಕೆ ನೀಡೇ ಇಲ್ಲ ಎಂದು ವಾದಿಸಿದ್ದಾರೆ. ಈ ವಿಚಾರ ಇಂಟರ್‌ನೆಟ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮೇ 2022ರಲ್ಲಿ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ಪ್ರಶಾಂತ್ ಕಿಶೋರ್ ಈ ಹಿಂದೆ ಭವಿಷ್ಯ ನುಡಿದಿದ್ದರು. ಆದರೆ, ಕಾಂಗ್ರೆಸ್ ಗೆಲುವು ದಾಖಲಿಸಿತ್ತು. ಈ ವಿಚಾರವನ್ನು ಕರಣ್ ಥಾಪರ್ ನೆನಪಿಸಿದಾಗ ಕಿಶೋರ್ ಅವರು ಕಾಂಗ್ರೆಸ್ ಬಗ್ಗೆ ಈ ಹಿಂದೆ ಹೇಳಿದ್ದನ್ನೆಲ್ಲಾ ನಿರಾಕರಿಸಿದ್ದಾರೆ. ಏರುದನಿಯಲ್ಲಿ ಥಾಪರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಮತ್ತು ತಬ್ಬಿಬ್ಬಾಗಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300 ಸ್ಥಾನಗಳನ್ನು ಗೆಲ್ಲಬಹುದು ಮತ್ತು ಕಾಂಗ್ರೆಸ್ 100 ಸ್ಥಾನಗಳನ್ನು ಕೂಡಾ ಗೆಲ್ಲುವುದು ಕಷ್ಟ ಎಂದು ಸಂದರ್ಶನದಲ್ಲಿ ಕಿಶೋರ್ ಭವಿಷ್ಯ ನುಡಿದಿದ್ದಾರೆ. ಈ ವೇಳೆ ಪ್ರಶಾಂತ್ ಕಿಶೋರ್ ಅವರ ಈ ಹಿಂದಿನ ಭವಿಷ್ಯಗಳು ಸುಳ್ಳಾಗಿರುವುದನ್ನು ಥಾಪರ್ ಉಲ್ಲೇಖಿಸಿದ್ದಾರೆ.

“ಕಾಂಗ್ರೆಸ್ ಹಿಮಾಚಲದಲ್ಲಿ ಸೋಲುತ್ತದೆ ಎಂದು ನಾನು ಹೇಳಿದ ವಿಡಿಯೋ ತೋರಿಸಬೇಕು, ಇಲ್ಲದಿದ್ದರೆ ನೀವು ಕ್ಷಮೆ ಯಾಚಿಸಬೇಕು ” ಎಂದು ಕರಣ್ ಥಾಪರ್ ಮುಂದೆ ಪ್ರಶಾಂತ್ ಪಟ್ಟು ಹಿಡಿದಿದ್ದಾರೆ. ಅದಕ್ಕೆ ಮಾಧ್ಯಮಗಳಲ್ಲಿ ಬಂದಿರುವ ಅವರ ಹೇಳಿಕೆಗಳನ್ನು ಕರಣ್ ಥಾಪರ್ ಉಲ್ಲೇಖಿಸಲು ಮುಂದಾಗಿದ್ದಾರೆ. ಆದರೆ, ಅದಕ್ಕೆ ಆಸ್ಪದವನ್ನೇ ಕೊಡದ ಕಿಶೋರ್, “ಮಾಧ್ಯಮಗಳು ಏನು ಬೇಕಾದರೂ ಬರೆಯುತ್ತವೆ. ಅದಕ್ಕೆ ನಾನು ಜವಾಬ್ದಾರನಲ್ಲ. ನಿಮ್ಮಂತಹ ಪತ್ರಕರ್ತರು ಏನು ಬೇಕಾದರೂ ಬರೀತೀರಿ” ಎಂದು ಕರಣ್ ಥಾಪರ್ ವಿರುದ್ಧವೇ ಆರೋಪ ಮಾಡಿದ್ದಾರೆ.

ತೀವ್ರ ಕೋಪಗೊಂಡಂತೆ ಕಂಡ ಪ್ರಶಾಂತ್‌ ಕಿಶೋರ್‌ಗೆ “ನೀವು ಸಂದರ್ಶನ ಮುಂದುವರಿಸಲು ಇಚ್ಛಿಸುತ್ತೀರಾ? ಅಥವಾ ಮುಗಿಸಲು ಬಯಸುತ್ತೀರಾ?” ಎಂದು ಕರಣ್ ಥಾಪರ್ ಕೇಳಿದ್ದು, ಇನ್ನಷ್ಟು ಸಿಟ್ಟಾಗಿಸಿದೆ. “ನಿಮ್ಮಂತಹ ಒಬ್ಬರಲ್ಲ ನಾಲ್ವರನ್ನು ನಾನು ಸುಧಾರಿಸಬಲ್ಲೆ, ನನಗೆ ನಿಮ್ಮನ್ನು ಹೇಗೆ ಎದುರಿಸಬೇಕು ಎಂದು ಚೆನ್ನಾಗಿ ಗೊತ್ತಿದೆ. ನಾನೇನೂ ಎದ್ದು ಹೋಗುವುದಿಲ್ಲ. ನೀವೇ ದೊಡ್ಡ ಖಡಕ್ ಸಂದರ್ಶಕ ಎಂಬ ಭ್ರಮೆಯಲ್ಲಿರಬೇಡಿ” ಎಂದು ಕರಣ್ ಥಾಪರ್ ಮೇಲೆ ಎಗರಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ತೀವ್ರ ವಿಚಲಿತರಾದಂತೆ ಕಂಡು ಬಂದಿದ್ದು, ಪಕ್ಕದಲ್ಲಿದ್ದ ಲೋಟ ಎತ್ತಿ ನೀರನ್ನೂ ಕುಡಿದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಾಂತ್ ಕಿಶೋರ್‌ರ ಈ ಹಿಂದಿನ ಎಕ್ಸ್‌ನ ಪೋಸ್ಟ್‌ನ ಸ್ಕ್ರೀನ್‌ಶಾಟ್‌ ಮತ್ತು ಈ ಸಂದರ್ಶನದ ವಿಡಿಯೋ ವೈರಲ್ ಆಗುತ್ತಿದೆ. ಜೊತೆಗೆ ಈ ಹಿಂದೆ ಥಾಪರ್ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀರು ಕುಡಿಯುತ್ತಿರುವ ಮತ್ತು ಈಗ ಪ್ರಶಾಂತ್ ಕಿಶೋರ್ ನೀರು ಕುಡಿದ ಚಿತ್ರವನ್ನು ಹಂಚಿಕೊಂಡಿರುವ ನೆಟ್ಟಿಗರು, “ನೀರು ಉಳಿಸಿ, ಕರಣ್ ಥಾಪರ್‌ಗೆ ಸಂದರ್ಶನ ನೀಡಬೇಡಿ” ಎಂದು ಗೇಲಿ ಮಾಡಿದ್ದಾರೆ.

ಇದನ್ನೂ ಓದಿ : ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...