Homeಮುಖಪುಟವೈದ್ಯೆಗೆ ಕಿರುಕುಳ ನೀಡಿದ ಆರೋಪಿಯ ಬಂಧನಕ್ಕೆ ಏಮ್ಸ್‌ ಆಸ್ಪತ್ರೆಯ ವಾರ್ಡ್‌ನೊಳಗೆ ಕಾರು ನುಗ್ಗಿಸಿದ ಪೊಲೀಸರು

ವೈದ್ಯೆಗೆ ಕಿರುಕುಳ ನೀಡಿದ ಆರೋಪಿಯ ಬಂಧನಕ್ಕೆ ಏಮ್ಸ್‌ ಆಸ್ಪತ್ರೆಯ ವಾರ್ಡ್‌ನೊಳಗೆ ಕಾರು ನುಗ್ಗಿಸಿದ ಪೊಲೀಸರು

- Advertisement -
- Advertisement -

ವೈದ್ಯೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಬಂಧಿಸಲು ಪೊಲೀಸರು ಏಮ್ಸ್‌ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನೊಳಗೆ ಕಾರನ್ನು ನುಗ್ಗಿಸಿ ಭಂಡತನ ಮೆರೆದಿರುವ ಘಟನೆ ಉತ್ತರಖಂಡ ರಾಜ್ಯದ ರಿಷಿಕೇಶದಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್‌ ಆಗಿದೆ. ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನರ್ಸಿಂಗ್ ಅಧಿಕಾರಿಯನ್ನು ಬಂಧಿಸಲು ಪೊಲೀಸರು ಈ ರೀತಿ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಆಸ್ಪತ್ರೆಯ ಒಳಗೆ ಪೊಲೀಸರು ಇದ್ದ ಕಾರು ಬರುತ್ತಿರುವುದು, ಎರಡೂ ಬದಿಗಳಲ್ಲಿ ರೋಗಿಗಳು ಬೆಡ್‌ ಮೇಲೆ ಮಲಗಿರುವುದು ಕಂಡು ಬಂದಿದೆ. ಅಲ್ಲಿದ್ದ ಸೆಕ್ಯೂರಿಟಿಗಳು ಸೇರಿ ಹಲವರು ಕಾರು ಆಸ್ಪತ್ರೆಯ ಒಳಗೆ ಸರಾಗವಾಗಿ ಬರಲು ಅನುವು ಮಾಡಿಕೊಡುತ್ತಿರುವುದು, ರೋಗಿಗಳು ಮಲಗಿರುವ ಬೆಡ್‌ಗಳನ್ನು, ಸ್ಟ್ರೆಚರ್‌ಗಳನ್ನು ತಳ್ಳುತ್ತಿರುವುದು ಕಂಡು ಬಂದಿದೆ.

ನರ್ಸಿಂಗ್ ಅಧಿಕಾರಿ ಸತೀಶ್ ಕುಮಾರ್ ಆಪರೇಷನ್ ಥಿಯೇಟರ್‌ನಲ್ಲಿ ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ರಿಷಿಕೇಶ್ ಪೊಲೀಸ್ ಅಧಿಕಾರಿ ಶಂಕರ್ ಸಿಂಗ್ ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿ ಸಂತ್ರಸ್ತ ವೈದ್ಯೆ ಅಪರಾಧಿಯನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಡೀನ್ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿರುವುದನ್ನು ಕಂಡ ಪೊಲೀಸರು ಸತೀಶ್ ಕುಮಾರ್‌ಗೆ ಬಂಧಿಸಲು ಆಸ್ಪತ್ರೆಯ ಒಳಗೆ ಕಾರು ಚಲಾಯಿಸಿದ್ದಾರೆ ಎನ್ನಲಾಗಿದೆ.

ಮತ್ತೊಂದು ವೀಡಿಯೊದಲ್ಲಿ, ಆರೋಪಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿರುವಾಗ ಪ್ರತಿಭಟಿಸುವ ವೈದ್ಯರನ್ನು ಪೊಲೀಸ್ ಅಧಿಕಾರಿಗಳ ಗುಂಪು ಸುತ್ತುವರಿದಿರುವುದನ್ನು ಕಾಣಬಹುದು. ಸತೀಶ್‌ಕುಮಾರ್‌ ಮಾಡಿರುವ ತಪ್ಪಿಗೆ ಕೇವಲ ಅಮಾನತು ಸಾಕಾಗುವುದಿಲ್ಲ ಅವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕು ಎಂದು ಘೋಷಣೆ ಕೂಗಿದ್ದಾರೆ.

ಏಮ್ಸ್ ರಿಷಿಕೇಶದಲ್ಲಿ ತುರ್ತು ಸೇವೆಗಳು ಇನ್ನೂ ಕಾರ್ಯನಿರ್ವಹಿಸುತ್ತಿದೆ, ಮಂಗಳವಾರದಿಂದ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಕಳೆದ 72 ಗಂಟೆಗಳಿಂದ ಎಫ್‌ಐಆರ್ ದಾಖಲಾಗಿಲ್ಲ ಮತ್ತು ಆರೋಪಿ ಆರಾಮವಾಗಿ ತಿರುಗಾಡುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದರು.

ಈ ವಿಷಯವನ್ನು ಗಮನಿಸಿ ಉತ್ತರಾಖಂಡ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕುಸುಮ್ ಕಂಡ್ವಾಲ್ ಅವರು ಏಮ್ಸ್ ಆಡಳಿತವನ್ನು ಭೇಟಿ ಮಾಡಿ, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು. ಘಟನೆಯ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸುವಂತೆಯೂ ಅವರು ಒತ್ತಾಯಿಸಿದ್ದಾರೆ.

ಇದನ್ನು ಓದಿ: ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...