Homeಮುಖಪುಟವೈದ್ಯೆಗೆ ಕಿರುಕುಳ ನೀಡಿದ ಆರೋಪಿಯ ಬಂಧನಕ್ಕೆ ಏಮ್ಸ್‌ ಆಸ್ಪತ್ರೆಯ ವಾರ್ಡ್‌ನೊಳಗೆ ಕಾರು ನುಗ್ಗಿಸಿದ ಪೊಲೀಸರು

ವೈದ್ಯೆಗೆ ಕಿರುಕುಳ ನೀಡಿದ ಆರೋಪಿಯ ಬಂಧನಕ್ಕೆ ಏಮ್ಸ್‌ ಆಸ್ಪತ್ರೆಯ ವಾರ್ಡ್‌ನೊಳಗೆ ಕಾರು ನುಗ್ಗಿಸಿದ ಪೊಲೀಸರು

- Advertisement -
- Advertisement -

ವೈದ್ಯೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಬಂಧಿಸಲು ಪೊಲೀಸರು ಏಮ್ಸ್‌ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನೊಳಗೆ ಕಾರನ್ನು ನುಗ್ಗಿಸಿ ಭಂಡತನ ಮೆರೆದಿರುವ ಘಟನೆ ಉತ್ತರಖಂಡ ರಾಜ್ಯದ ರಿಷಿಕೇಶದಲ್ಲಿ ನಡೆದಿದೆ.

ಘಟನೆಯ ವಿಡಿಯೋ ವೈರಲ್‌ ಆಗಿದೆ. ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನರ್ಸಿಂಗ್ ಅಧಿಕಾರಿಯನ್ನು ಬಂಧಿಸಲು ಪೊಲೀಸರು ಈ ರೀತಿ ಮಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಆಸ್ಪತ್ರೆಯ ಒಳಗೆ ಪೊಲೀಸರು ಇದ್ದ ಕಾರು ಬರುತ್ತಿರುವುದು, ಎರಡೂ ಬದಿಗಳಲ್ಲಿ ರೋಗಿಗಳು ಬೆಡ್‌ ಮೇಲೆ ಮಲಗಿರುವುದು ಕಂಡು ಬಂದಿದೆ. ಅಲ್ಲಿದ್ದ ಸೆಕ್ಯೂರಿಟಿಗಳು ಸೇರಿ ಹಲವರು ಕಾರು ಆಸ್ಪತ್ರೆಯ ಒಳಗೆ ಸರಾಗವಾಗಿ ಬರಲು ಅನುವು ಮಾಡಿಕೊಡುತ್ತಿರುವುದು, ರೋಗಿಗಳು ಮಲಗಿರುವ ಬೆಡ್‌ಗಳನ್ನು, ಸ್ಟ್ರೆಚರ್‌ಗಳನ್ನು ತಳ್ಳುತ್ತಿರುವುದು ಕಂಡು ಬಂದಿದೆ.

ನರ್ಸಿಂಗ್ ಅಧಿಕಾರಿ ಸತೀಶ್ ಕುಮಾರ್ ಆಪರೇಷನ್ ಥಿಯೇಟರ್‌ನಲ್ಲಿ ಮಹಿಳಾ ವೈದ್ಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ರಿಷಿಕೇಶ್ ಪೊಲೀಸ್ ಅಧಿಕಾರಿ ಶಂಕರ್ ಸಿಂಗ್ ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿ ಸಂತ್ರಸ್ತ ವೈದ್ಯೆ ಅಪರಾಧಿಯನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಡೀನ್ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿರುವುದನ್ನು ಕಂಡ ಪೊಲೀಸರು ಸತೀಶ್ ಕುಮಾರ್‌ಗೆ ಬಂಧಿಸಲು ಆಸ್ಪತ್ರೆಯ ಒಳಗೆ ಕಾರು ಚಲಾಯಿಸಿದ್ದಾರೆ ಎನ್ನಲಾಗಿದೆ.

ಮತ್ತೊಂದು ವೀಡಿಯೊದಲ್ಲಿ, ಆರೋಪಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿರುವಾಗ ಪ್ರತಿಭಟಿಸುವ ವೈದ್ಯರನ್ನು ಪೊಲೀಸ್ ಅಧಿಕಾರಿಗಳ ಗುಂಪು ಸುತ್ತುವರಿದಿರುವುದನ್ನು ಕಾಣಬಹುದು. ಸತೀಶ್‌ಕುಮಾರ್‌ ಮಾಡಿರುವ ತಪ್ಪಿಗೆ ಕೇವಲ ಅಮಾನತು ಸಾಕಾಗುವುದಿಲ್ಲ ಅವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕು ಎಂದು ಘೋಷಣೆ ಕೂಗಿದ್ದಾರೆ.

ಏಮ್ಸ್ ರಿಷಿಕೇಶದಲ್ಲಿ ತುರ್ತು ಸೇವೆಗಳು ಇನ್ನೂ ಕಾರ್ಯನಿರ್ವಹಿಸುತ್ತಿದೆ, ಮಂಗಳವಾರದಿಂದ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಕಳೆದ 72 ಗಂಟೆಗಳಿಂದ ಎಫ್‌ಐಆರ್ ದಾಖಲಾಗಿಲ್ಲ ಮತ್ತು ಆರೋಪಿ ಆರಾಮವಾಗಿ ತಿರುಗಾಡುತ್ತಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದ್ದರು.

ಈ ವಿಷಯವನ್ನು ಗಮನಿಸಿ ಉತ್ತರಾಖಂಡ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕುಸುಮ್ ಕಂಡ್ವಾಲ್ ಅವರು ಏಮ್ಸ್ ಆಡಳಿತವನ್ನು ಭೇಟಿ ಮಾಡಿ, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು. ಘಟನೆಯ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸುವಂತೆಯೂ ಅವರು ಒತ್ತಾಯಿಸಿದ್ದಾರೆ.

ಇದನ್ನು ಓದಿ: ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...