Homeಮುಖಪುಟಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

- Advertisement -
- Advertisement -

ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ದಾಖಲಾದ ಮತಗಳ ದಾಖಲೆಯನ್ನು ಒಳಗೊಂಡಿರುವ ನಮೂನೆ 17ಸಿ ಯನ್ನು ಅಭ್ಯರ್ಥಿಗಳು ಅಥವಾ ಅವರ ಏಜೆಂಟರಿಗೆ ಮಾತ್ರ ನೀಡಬಹುದು ಹೊರತು ಅದನ್ನು ಸಾರ್ವಜನಿಕಗೊಳಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಸುಪ್ರೀಂಕೋರ್ಟ್‌ಗೆ ಹೇಳಿದೆ.

ಸಂಪೂರ್ಣ ಮತದಾರರ ಸಂಖ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಡೆಸುತ್ತಿದೆ. ಮೊದಲ ಎರಡು ಹಂತದ ಮತದಾನದ ಡೇಟಾವನ್ನು ಪ್ರಕಟಿಸಲು ವಿಳಂಬವಾದ ನಂತರ ಈ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ 2024ರ ಸಾರ್ವತ್ರಿಕ ಚುನಾವಣೆಯ ಪ್ರತಿ ಹಂತದ ಮತದಾನದ ನಂತರ ಎಲ್ಲಾ ಮತಗಟ್ಟೆಗಳ ಫಾರ್ಮ್ 17Cಯ ಸ್ಕ್ಯಾನ್ ಮಾಡಿದ ಸ್ಪಷ್ಟವಾದ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಮೂಲಕ ಚುನಾವಣಾ ಆಯೋಗ ಮತದಾನದ ಪ್ರಮಾಣೀಕೃತ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು. ಆದರೆ ಚುನಾವಣಾ ಆಯೋಗ, ಅಭ್ಯರ್ಥಿ ಅಥವಾ ಏಜೆಂಟ್‌ಗಳನ್ನು ಹೊರತುಪಡಿಸಿ ಯಾವುದೇ ವ್ಯಕ್ತಿಗೆ ನಮೂನೆ 17Cನ್ನು ಒದಗಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಹೇಳಿದೆ.

ಉತ್ತರಪ್ರದೇಶದ ರಾಂಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಕೀಲ ಮೆಹಮೂದ್ ಪ್ರಾಚಾ ಚುನಾವಣಾಧಿಕಾರಿ ತಮ್ಮ ಕ್ಷೇತ್ರದ ಫಾರ್ಮ್ 17ಸಿ ನೀಡಲು ನಿರಾಕರಿಸಿದ ನಂತರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಏಪ್ರಿಲ್ 19ರಂದು ರಾಂಪುರದಲ್ಲಿ ಮತದಾನ ನಡೆದಿತ್ತು.

ಚುನಾವಣಾ ಆಯೋಗವು ತನ್ನ ಪ್ರತಿಕ್ರಿಯೆಯಲ್ಲಿ ನಮೂನೆ 17Cನ್ನು ಬಹಿರಂಗಪಡಿಸುವುದರಿಂದ ಮತದಾರರಲ್ಲಿ ಒಟ್ಟು ಮತಗಳ ಬಗ್ಗೆ ಗೊಂದಲ ಉಂಟಾಗಬಹುದು ಎಂದು ಹೇಳಿದೆ. ಒಟ್ಟು ಅಂಕಿ-ಅಂಶವನ್ನು ಲೆಕ್ಕಹಾಕಲು ಮತಗಳನ್ನು ಎಣಿಸಲಾಗುತ್ತದೆಯಾದರೂ, ಅಂಚೆ ಮತಪತ್ರಗಳ ಮೂಲಕ ಚಲಾಯಿಸಲಾದ ಮತಗಳನ್ನು ಫಾರ್ಮ್ ಒಳಗೊಂಡಿರುವುದಿಲ್ಲ ಎಂದು ಅದು ವಾದಿಸಿದೆ. ಆದರೆ ಅಂತಹ ವ್ಯತ್ಯಾಸವನ್ನು ಮತದಾರರು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ, ಚುನಾವಣಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಲು ಪ್ರೇರೇಪಿತ ಹಿತಾಸಕ್ತಿ ಹೊಂದಿರುವ ವ್ಯಕ್ತಿಗಳು ಇದನ್ನು ಬಳಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗವು ಹೇಳಿದೆ.

ಚುನಾವಣಾ ಆಯೋಗ ಮತ್ತು ಅದರ ಸಿಬ್ಬಂದಿ ಚುನಾವಣೆಗೆ ಸಂಬಂಧಿಸಿದ ಭೌತಿಕ ವಸ್ತುಗಳಾದ ಫಾರ್ಮ್‌ಗಳು ಎನ್ವಲಪ್‌ಗಳು, ಸೀಲ್‌ಗಳು, ಇವಿಎಂಗಳು ಮುಂತಾದ ವಿಚಾರಗಳಿಗೆ ಸಂಬಂಧಿಸಿ ಆದ್ಯತೆಯ ಮೇಲೆ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಯಾವುದೇ ಫಾರ್ಮ್‌ ಸ್ಕ್ಯಾನ್‌ ಮಾಡಿ ಒದಗಿಸುವ ಹೆಚ್ಚುವರಿ ಜವಾಬ್ದಾರಿ ನೀಡಿದಲ್ಲಿ ಮತ ಎಣಿಕೆಗಿಂತ ನಮ್ಮ ಇತರ ಆದ್ಯತೆಯ ವಿಷಯಗಳು ಅಪಾಯದಲ್ಲಿರಬಹುದು. ಆ್ಯಪ್‌ನಲ್ಲಿನ ಮತದಾರರ ಮತದಾನದ ಅಂಕಿ-ಅಂಶಗಳನ್ನು ಪೂರಕ ಮಾಹಿತಿ ಎಂದು ಅರ್ಜಿದಾರರು ಪ್ರಶಂಸಿಸಲು ವಿಫಲರಾಗಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಮನವಿಯು, ಚುನಾವಣಾ ಆಯೋಗದ ವಿರುದ್ಧ ಎಲ್ಲಾ ಸಂಭವನೀಯ ತಪ್ಪುದಾರಿಗೆಳೆಯುವ ಆರೋಪಗಳ ಮೂಲಕ ಅನುಮಾನಗಳನ್ನು ಹುಟ್ಟುಹಾಕಲು ಮಾಡಿದ ದುರುದ್ದೇಶಪೂರಿತ ಅಭಿಯಾನದ ಭಾಗವಾಗಿದೆ ಎಂದು ಚುನಾವಣಾ ಆಯೋಗವು ಆರೋಪಿಸಿದೆ.

ಇದನ್ನು ಓದಿ: ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...