Homeಮುಖಪುಟ'ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ' ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

‘ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ’ ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

- Advertisement -
- Advertisement -

‘ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ, ಈ ರೀತಿಯ ಶಕ್ತಿಯು ಜೈವಿಕ ದೇಹದಿಂದ ಬರಲು ಸಾಧ್ಯವಿಲ್ಲ, ದೇವರು ಮಾತ್ರ ಅಂತಹ ಶಕ್ತಿಯನ್ನು ನೀಡಬಲ್ಲನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ನೀಡಿದ್ದು, ಇದೀಗ ಅಪಹಾಸ್ಯಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಗಂಗಾನದಿಯ ದಡದಲ್ಲಿ ಮೃತದೇಹಗಳು ಜಮಾಯಿಸುತ್ತಿದ್ದಾಗ, ‘ದೇವರ ದೂತರು’ ತಮ್ಮ ಮೊಬೈಲ್ ಫೋನ್‌ನ ಪ್ಲ್ಯಾಶ್‌ಲೈಟನ್ನು ಆನ್ ಮಾಡಲು ಜನರಿಗೆ ಹೇಳಿದ್ದಾರೆ ಎಂದು ಕೋವಿಡ್‌ ಮೊದಲ ಹಂತದ ಲಾಕ್‌ಡೌನ್‌ ವೇಳೆ ಪ್ರಧಾನಿ ಮೋದಿ ದೀಪಗಳು ಅಥವಾ ಟಾರ್ಚ್‌ಗಳನ್ನು ಬೆಳಗಿಸಲು ನಾಗರಿಕರಿಗೆ ಸೂಚಿಸಿದ್ದನ್ನು ನೆನಪಿಸಿಕೊಂಡಿದ್ದಾರೆ.

ಯಾರಾದರೂ ನಿಮ್ಮ ಬಳಿಗೆ ಬಂದು ಅಂತಹ ಮಾತುಗಳನ್ನು ಹೇಳಿದರೆ, ನೀವು ಏನು ಹೇಳುತ್ತೀರಿ? ನೀನು ನನ್ನನ್ನು ಕ್ಷಮಿಸು ಸಹೋದರ, ನೀನು ನಿನ್ನ ಕೆಲಸ ಮಾಡು, ನನ್ನ ಕೆಲಸ ಮಾಡಲು ನನಗೆ ಬಿಡು ಎಂದು ಹೇಳುತ್ತೀರಿ. ಆದರೆ ಅವರ ಭಕ್ತರು ಪ್ರಧಾನಿಯನ್ನು ಹೊಗಳುತ್ತಾರೆ ಮತ್ತು ಅವರು ದೇವರಿಂದ ಕಳುಹಿಸಲ್ಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಪ್ಪಾಳೆ ತಟ್ಟುವಂತೆ ಅವರು ಜನರಿಗೆ ಹೇಳಿದ್ದಾರೆ. ಜನರು ಆಸ್ಪತ್ರೆಗಳ ಹೊರಗೆ ಕೊನೆಯುಸಿರೆಳೆದಾಗ, ಪ್ರಧಾನಿ ಇರಲಿಲ್ಲ. ಪ್ರಧಾನಿ ಅಲ್ಲ, ಆದರೆ ದೇವರಿಂದ ಕಳುಹಿಸಲ್ಪಟ್ಟವರು, ಜನರಿಗೆ ಮೊಬೈಲ್ ಫೋನ್ ಪ್ಲ್ಯಾಶ್‌ಲೈಟ್‌ ಆನ್ ಮಾಡಲು ಕೇಳುತ್ತಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಪ್ರಧಾನಿ ಮೋದಿ, ನನ್ನ ತಾಯಿ ಬದುಕಿರುವವರೆಗೂ ನಾನು ಜೈವಿಕವಾಗಿ ಹುಟ್ಟಿದ್ದೇನೆ ಎಂದು ಭಾವಿಸುತ್ತಿದ್ದೆ. ಆಕೆಯ ನಿಧನದ ನಂತರ, ನನ್ನ ಅನುಭವಗಳನ್ನು ನೋಡಿದಾಗ, ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ. ಈ ಶಕ್ತಿ ನನ್ನ ದೇಹದ್ದಲ್ಲ. ಅದನ್ನು ದೇವರು ನನಗೆ ಕೊಟ್ಟಿದ್ದಾನೆ. ಅದಕ್ಕಾಗಿಯೇ ದೇವರು ನನಗೆ ಸಾಮರ್ಥ್ಯ, ಶಕ್ತಿ, ಶುದ್ಧ ಹೃದಯ ಮತ್ತು ಇದನ್ನು ಮಾಡಲು ಸ್ಫೂರ್ತಿ ನೀಡಿದ್ದಾನೆ. ನಾನು ದೇವರು ಕಳುಹಿಸಿದ ಸಾಧನವಲ್ಲದೆ ಬೇರೇನೂ ಅಲ್ಲ ಎಂದು ಹೇಳಿದ್ದರು.

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕನ್ಹಯ್ಯಾ ಕುಮಾರ್ ಅವರಿಗೆ ವ್ಯಾಪಕವಾದ ವಿಷಯಗಳ ಬಗ್ಗೆ ಸಾಕಷ್ಟು ಜ್ಞಾನವಿದೆ. ಆದರೆ ಅವನು ಒಂದು ದಿನ ಬಂದು ನನ್ನಲ್ಲಿ ತಾನು ಜೈವಿಕನಲ್ಲ ಮತ್ತು ದೇವರಿಂದ ಕಳುಹಿಸಲ್ಪಟ್ಟವನು ಎಂದು ನನ್ನಲ್ಲಿ ಹೇಳಿದರೆ, ನಾನು ಅದನ್ನು ಯಾರಿಗೂ ಹೇಳಬೇಡಿ ಅಥವಾ ಇದನ್ನು ಜೋರಾಗಿ ಹೇಳಬೇಡಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಆದರೆ ಪ್ರಧಾನಿ ತಾನು ಜೈವಿಕ ಅಲ್ಲ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಬೇರೆ ಎಲ್ಲಾ ಜನರು ಜೈವಿಕರು ಮತ್ತು ನಾನು ಮಾತ್ರ ಅಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎ ರಾಜಾ, ಪೆರಿಯಾರ್ ‘ದೇವರು ಅಸ್ತಿತ್ವದಲ್ಲಿಲ್ಲ’ ಎಂದು ಏಕೆ ಹೇಳಿದರು ಎಂಬುವುದು ಈಗ ಅನೇಕರಿಗೆ ಅರ್ಥವಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ ಲೋಕಸಭಾ ಅಭ್ಯರ್ಥಿ ಮಹುವಾ ಮೊಯಿತ್ರಾ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅವರು ರಾಮನ ಬದಲಿಗೆ ದೇವಸ್ಥಾನಗಳಲ್ಲಿ ನರೇಂದ್ರ ಮೋದಿಯವರ ವಿಗ್ರಹಗಳನ್ನು ಪ್ರತಿಷ್ಠಾಪಿಸಬೇಕಿತ್ತು. ನರೇಂದ್ರ ಮೋದಿ ಮಾತನಾಡುವ ಕ್ಲಿಪ್‌ನ್ನು ನೋಡಿದೆ, ಅವರು ನಿಜವಾಗಿಯೂ ಮಾನವನಲ್ಲ, ದೈವಿಕವಾಗಿ ಹುಟ್ಟಿದ್ದಾರೆ, ನಮ್ಮೆಲ್ಲರನ್ನು ಉದ್ಧಾರ ಮಾಡಲು ಭೂಮಿಗೆ ಕಳುಹಿಸಲಾಗಿದೆ ಎಂದು ಅವರು ನಂಬುತ್ತಾರೆ. ರಾಮಲಲ್ಲಾ ಯಾಕೆ? ಬಿಜೆಪಿಯವರು ಎಲ್ಲ ದೇವಾಲಯಗಳಲ್ಲಿ ನಮೋ ಲಲ್ಲಾಗಳನ್ನು ಪ್ರತಿಷ್ಠಾಪಿಸಬೇಕಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...