Homeಮುಖಪುಟತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಮೂನೆ 17ಸಿ ಅಡಿ ಮತದಾನದ ಅಂಕಿ ಅಂಶ ಪ್ರಕಟಿಸಲು 'ಸಮಯ ಬೇಕು' ಎಂದು ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ಅದರೆ, ಅದರ ಕೈಪಿಡಿ ಮತ್ತು ಮಾಜಿ ಚು. ಆಯುಕ್ತರ ಹೇಳಿಕೆಗಳು ಮತದಾನದ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ ಎಂಬುವುದನ್ನು ಸೂಚಿಸುತ್ತದೆ.

- Advertisement -
- Advertisement -

ನಮೂನೆ 17ಸಿ ಅಡಿ ಮತಗಟ್ಟೆಗಳಲ್ಲಿ ಚಲಾವಣೆಯಾದ ಮತಗಳ ಅಂಕಿ ಅಂಶಗಳನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದನ್ನು ಮಾಡಲು ಸಮಯ ಹಿಡಿಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ಮೇ 17ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಸಮಯ ಹಿಡಿಯುತ್ತದೆ’ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ, ಆಯೋಗ, “ಮತದಾನದ ಕೊನೆಯಲ್ಲಿ ಮತಗಟ್ಟೆಯ ಚುನಾವಣಾಧಿಕಾರಿ ‘ಕ್ಲೋಸ್ ಬಟನ್’ ಒತ್ತಿದ ತಕ್ಷಣ, ಇವಿಎಂನ ನಿಯಂತ್ರಣ ಘಟಕವು ಒಟ್ಟು ಚಲಾವಣೆಯಾದ ಮತಗಳ ಸಂಖ್ಯೆಯನ್ನು ತೋರಿಸುತ್ತದೆ. ಈ ಅಂಕಿ ಅಂಶವನ್ನು ನಮೂನೆ 17ಸಿ ಯ ಭಾಗ 1ರ ಐಟಂ 6ರಲ್ಲಿ ತಕ್ಷಣ ದಾಖಲಿಸಬೇಕು” ಎಂದು ಪ್ರತಿ ಮತಗಟ್ಟೆಯ ಚುನಾವಣಾಧಿಕಾರಿ ಅಥವಾ ಕ್ಷೇತ್ರದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಾಗಿ ನೀಡಿರುವ ಕೈಪಿಡಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ.

ಈ ನಿರ್ದೇಶನವು “ಒಂದು ಮತಗಟ್ಟೆಯಲ್ಲಿ ಮತದಾನ ಕೊನೆಗೊಂಡ ಬಳಿಕ, ಒಂದು ಬಟನ್ ಒತ್ತಿದ್ದರೆ ಚಲಾವಣೆಯಾದ ಒಟ್ಟು ಮತಗಳ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸುತ್ತದೆ. ಹೀಗಿರುವಾಗ ಅಂಕಿ ಅಂಶಗಳನ್ನು ನೀಡಲು ಚುನಾವಣಾ ಆಯೋಗ ಏಕೆ ವಿಳಂಬ ಮಾಡುತ್ತಿದೆ? ಅಂಕಿ ಅಂಶ ಒದಗಿಸಲು ಸಮಯ ಬೇಕು ಎಂದು ಸುಪ್ರಿಂ ಕೋರ್ಟ್‌ಗೆ ಏಕೆ ಸುಳ್ಳು ಹೇಳಿದೆ? ಎಂಬ ಪ್ರಶ್ನೆ ಉದ್ಬವಿಸಿದೆ.

ಚುನಾವಣಾ ಆಯೋಗ ಮತದಾನದ ಅಂಕಿ ಅಂಶಗಳನ್ನು ವಿಳಂಬವಾಗಿ ಪ್ರಕಟಿಸುತ್ತಿರುವುದರ ಬಗ್ಗೆ ಇತ್ತೀಚೆಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ ಖುರೈಶಿಯವರು ಅಸಮಧಾನ ವ್ಯಕ್ತಪಡಿಸಿದ್ದರು.

ಮತದಾನದ ಮಾಹಿತಿ ವಿಳಂಬಕ್ಕೆ ಯಾವುದೇ ಕಾರಣಗಳಿಲ್ಲ. ಡೇಟಾವು ನೈಜ ಸಮಯದಲ್ಲಿ ಸಿಸ್ಟಮ್‌ನಲ್ಲಿ ಲಭ್ಯವಾಗುತ್ತದೆ. ಮತದಾನ ಮುಗಿದ ಐದು ನಿಮಿಷಗಳಲ್ಲಿ ಎಲ್ಲಾ ಮಾಹಿತಿ ದೊರೆಯುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಡೇಟಾವನ್ನು ಅಂತಿಮಗೊಳಿಸಲು ಏಕೆ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ ಎಂಬುವುದಕ್ಕೆ ಚುನಾವಣಾ ಆಯೋಗ ಉತ್ತರ ನೀಡಬೇಕು ಎಂದು ಖುರೈಶಿ ಆಗ್ರಹಿಸಿದ್ದರು.

“ಚುನಾವಣಾ ಆಯೋಗವು ಈ ಅಂತರ ಅಥವಾ ಸಮನ್ವಯದ ಕೊರತೆ ಏಕೆ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು. ಏಕೆ ಈ ರೀತಿ ನಡೆಯುತ್ತಿದೆ ಎಂದು ಆಯೋಗವು ವಿವರಿಸಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಜನರ ಮನಸ್ಸಿನಲ್ಲಿ ಉದ್ಭವಿಸುವ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ” ಎಂದು ಖುರೈಶಿ ದೈನಿಕ್ ಭಾಸ್ಕರ್‌ಗೆ ಹೇಳಿದ್ದರು.

ಬುಧವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ನಮೂನೆ 17ಸಿ ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲು ನಮಗೆ ಯಾವುದೇ ಕಾನೂನು ಆದೇಶವಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ. ಆಯೋಗವು ಮತದಾನದ ಅಂಕಿ ಅಂಶಗಳ ಮಾಹಿತಿಯನ್ನು ಅಪ್ಲಿಕೇಶನ್, ವೆಬ್‌ಸೈಟ್ ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಬಿಡುಗಡೆ ಮಾಡುತ್ತಿರುವುದು “ಸ್ವಯಂಪ್ರೇರಿತ” ಎಂದಿದೆ.

ಆದರೆ, “1961ರ ಚುನಾವಣಾ ನಡವಳಿಕೆಯ ನಿಯಮಗಳ ಸೆಕ್ಷನ್ 93ರ ಪ್ರಕಾರ ಆಯೋಗವು ಮುಚ್ಚಿಡಬೇಕಾದ ಚುನಾವಣಾ ಸಂಬಂಧಿತ ದಾಖಲೆಗಳಲ್ಲಿ ನಮೂನೆ 17 ಸಿ ಒಳಗೊಂಡಿಲ್ಲ” ಎಂದು ಪಾರದರ್ಶಕ ಹಕ್ಕುಗಳ ಕಾರ್ಯಕರ್ತೆ ಅಂಜಲಿ ಭಾರದ್ವಾಜ್ ತಿಳಿಸಿದ್ದಾರೆ.

“1961ರ ಚುನಾವಣಾ ನಡವಳಿಕೆಯ ನಿಯಮಗಳ ಪ್ರಕಾರ, ಮತಪತ್ರಗಳು (ಬಳಸಿದ ಅಥವಾ ಬಳಸದ), ಬಳಸಿದ ಮತಪತ್ರಗಳ ಕೌಂಟರ್‌ಫಾಯಿಲ್‌ಗಳು, ಮುದ್ರಿತ ಪೇಪರ್‌ ಸ್ಲಿಪ್‌ಗಳು (ನಿಯಮ 57 ಸಿ), ಮತದಾರರ ಪಟ್ಟಿಯ ಗುರುತು ಮಾಡಿದ ನಕಲು ಮತ್ತು ಕೆಲವು ಇತರ ದಾಖಲೆಗಳನ್ನು ಯಾವುದೇ ಪ್ರಾಧಿಕಾರದ ಮುಂದೆ ತೆರೆಯಬಾರದು, ಪರಿಶೀಲಿಸಬಾರದು ಮತ್ತು ಸಲ್ಲಿಸಬಾರದು ಎಂದಿದೆ. ಆದರೆ, ಈ ಪೈಕಿ ನಮೂನೆ 17ಸಿ ಒಳಗೊಂಡಿಲ್ಲ. ಆದ್ದರಿಂದ ನಮೂನೆ 17 ಸಿ ಅಡಿ ಮತದಾನದ ಅಂಕಿ ಅಂಶಗಳನ್ನು ಬಹಿರಂಗೊಳಿಸಬಹುದು”  ಎಂದಿದ್ದಾರೆ.

“ಇನ್ನು ಇವೆಲ್ಲದರ ಹೊರತಾಗಿ, ನಮ್ಮ ದೇಶದಲ್ಲಿ ಜನರಿಗೆ ‘ಮಾಹಿತಿಯ ಹಕ್ಕಿದೆ’ ಎಂಬುವುದನ್ನು ಚುನಾವಣಾ ಆಯೋಗ ಮರೆತಂತಿದೆ. ವಾಸ್ತವವಾಗಿ ಚುನಾವಣಾ ನಿಯಮಗಳ ನಡವಳಿಕೆಯ ನಿಯಮ 93 ಜನರು ನಮೂನೆ 17ಸಿ ಸೇರಿದಂತೆ ಚುನಾವಣಾ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಲು ಮತ್ತು ಪಡೆಯಲು ಅನುಮತಿಸುತ್ತದೆ. ಬಹುಶಃ ನಾವು ಆರ್‌ಟಿಐ ಕಾಯ್ದೆಯ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸುವ ಅಭಿಯಾನ ನಡೆಸುವ ಅಗತ್ಯವಿದೆ” ಎಂದು ಭಾರದ್ವಾಜ್ ಹೇಳಿದ್ದಾರೆ.

Courtesy : thewire.in

ಇದನ್ನೂ ಓದಿ : ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...