Homeಮುಖಪುಟಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

ಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ಆದಾಯ ಮತ್ತು ಸಂಪತ್ತು ಅಸಮಾನತೆಯನ್ನು ಅತ್ಯಂತ ಶ್ರೀಮಂತರಿಗೆ ಸಮಗ್ರ ಮತ್ತು ಪ್ರಗತಿಪರ ಸಂಪತ್ತು ತೆರಿಗೆಯನ್ನು ವಿಧಿಸುವ ಮೂಲಕ ನಿವಾರಿಸಬಹುದು ಎಂದು ‘World Inequality Lab’ (ಡಬ್ಲ್ಯುಐಎಲ್) ಶುಕ್ರವಾರ ಪ್ರಕಟಿಸಿರುವ ವರದಿಯು ಸಲಹೆ ನೀಡಿದೆ.

ವರದಿಯು ಮಾ.19ರಂದು ಪ್ರಕಟಗೊಂಡಿದ್ದ ಡಬ್ಲ್ಯುಐಎಲ್‌ನ ‘ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ 1922-2023: ಬಿಲಿಯನೇರ್ ರಾಜ್‌ನ ಹೆಚ್ಚಳ’ ಅಧ್ಯಯನದ ಮುಂದುವರೆದ ಭಾಗವಾಗಿದೆ.
ಅರ್ಥಶಾಸ್ತ್ರಜ್ಞರಾದ ನಿತಿನ್ ಕುಮಾರ್ ಭಾರ್ತಿ,‌ ಲುಕಾಸ್ ಚಾನ್ಸೆಲ್, ಥಾಮಸ್ ಪಿಕೆಟಿ ಮತ್ತು ಅನ್ಮೋಲ್ ಸೋಮಾಂಚಿ ಅವರು ಬರೆದಿದ್ದ ಅಧ್ಯಯನ ವರದಿಯು ಭಾರತದ ಜನಸಂಖ್ಯೆಯ ಶೇ.1ರಷ್ಟು ಅತ್ಯಂತ ಶ್ರೀಮಂತರ ಆದಾಯ ಮತ್ತು ಸಂಪತ್ತಿನ ಪಾಲು ದೇಶದ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಎನ್ನುವುದನ್ನು ತೋರಿಸಿತ್ತು.

ಭಾರತದ ಜನಸಂಖ್ಯೆಯ ಶೇ. 1ರಷ್ಟಿರುವ ಅತೀ ಶ್ರೀಮಂತರು 2022-23ರಲ್ಲಿ ದೇಶದ ಆದಾಯದ ಶೇ. 22.6ರಷ್ಟು ಮತ್ತು ಸಂಪತ್ತಿನ ಶೇ. 40.1ರಷ್ಟು ಹೊಂದಿದ್ದಾರೆ ಎಂದಿದ್ದ ಅಧ್ಯಯನವು, 2014-15 ಮತ್ತು 2022-23ರ ನಡುವೆ ಉನ್ನತ ಮಟ್ಟದ ಅಸಮಾನತೆಯ ಏರಿಕೆಯು ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಎದ್ದು ಕಾಣುತ್ತಿದೆ ಹೇಳಿದೆ.

ತಮ್ಮ ಅಧ್ಯಯನದಲ್ಲಿ ಕಂಡು ಕೊಂಡಿದ್ದ ಅಂಶಗಳನ್ನು ಆಧರಿಸಿ ಅದೇ ಲೇಖಕರು ಈಗ ತಮ್ಮ ನೂತನ ವರದಿಯಲ್ಲಿ ‘ಕೋಟ್ಯಧಿಪತಿ ತೆರಿಗೆ’ಯನ್ನು ಪ್ರಸ್ತಾಪಿಸಿದ್ದಾರೆ. 2022-23ರಲ್ಲಿ 10 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಸಂಪತ್ತನ್ನು ಹೊಂದಿದವರಿಗೆ ಮಾತ್ರ ಈ ತೆರಿಗೆಯನ್ನು ವಿಧಿಸುವಂತೆಯೂ ಅವರು ಪ್ರಸ್ತಾಪಿಸಿದ್ದಾರೆ.

“ನಮ್ಮ ಇತ್ತೀಚಿನ ಅಂದಾಜಿನ ಪ್ರಕಾರ, ದೇಶದ ಜನಸಂಖ್ಯೆ ಕೇವಲ 0.04 ಶೇ. ವಯಸ್ಕರು ಮಾತ್ರ ಈ ಮಿತಿಗಿಂತ ಮೇಲೆ ಇದ್ದಾರೆ” ಎಂದು ವರದಿ ಹೇಳಿದೆ.

ಲೇಖಕರು ತೆರಿಗೆ ಪ್ಯಾಕೇಜ್‌ನ ಮೂರು ಪರ್ಯಾಯ ರೂಪಗಳನ್ನು ಪ್ರಸ್ತಾಪಿಸಿದ್ದಾರೆ

  • 10 ಕೋಟಿರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ಶೇ.2ರಷ್ಟು ವಾರ್ಷಿಕ ತೆರಿಗೆ ಮತ್ತು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದನ್ನು ಪ್ರಸ್ತಾವಿಸಲಾಗಿದೆ. ನಮ್ಮ ಅಂದಾಜಿನಂತೆ ಇದೊಂದೇ ಜಿಡಿಪಿಯ ಶೇ.2.7ರಷ್ಟು ಆದಾಯವನ್ನು ಸೃಷ್ಟಿಸುತ್ತದೆ ಎಂದು ವರದಿಯು ಹೇಳಿದೆ.
  • 100 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ತೆರಿಗೆ ಶೇ.4ಕ್ಕೆ ಏರಿಕೆ ಮತ್ತು 10 ಕೋಟಿ ರೂ.ಗಳಿಂದ 100 ಕೋಟಿ ರೂ.ವರೆಗಿನ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದು. 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳಿಗೆ ಪಿತ್ರಾರ್ಜಿತ ತೆರಿಗೆಯನ್ನು ಶೇ.45ಕ್ಕೆ ಹೆಚ್ಚಿಸುವುದು. ವರದಿಯ ಪ್ರಕಾರ ಈ ತೆರಿಗೆಯಿಂದ ಆದಾಯವು ಭಾರತದ ಜಿಡಿಪಿಯ ಶೇ.4.6ರಷ್ಟಾಗುತ್ತದೆ.
  • ಇಲ್ಲಿ ಸಂಪತ್ತಿನ ಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ, ಸಂಪತ್ತು ತೆರಿಗೆಯನ್ನು ಶೇ.3ರಿಂದ ಶೇ.5ರವರೆಗೆ ಮತ್ತು ಪಿತ್ರಾರ್ಜಿತ ತೆರಿಗೆಯನ್ನು ಶೇ.45ರಿಂದ ಶೇ.55ರವರೆಗೆ ಹೆಚ್ಚಿಸುವುದನ್ನು ಪ್ರಸ್ತಾಪಿಸಲಾಗಿದೆ. ಇದರಿಂದ ತೆರಿಗೆ ಆದಾಯವು ಜಿಡಿಪಿಯ ಶೇ.6.1ಕ್ಕೆ ಹೆಚ್ಚಬಹುದು ಎಂದು ಲೇಖಕರು ವರದಿಯಲ್ಲಿ ಹೇಳಿದ್ದಾರೆ.

ಹೀಗೆ, ಸಂಗ್ರಹವಾಗುವ ಆದಾಯವನ್ನು ಬಡವರಿಗೆ ನೇರ ನಗದು ವರ್ಗಾವಣೆ, ಆರೋಗ್ಯ, ಶಿಕ್ಷಣ ಮತ್ತು ಇತರ ಸಾಮಾಜಿಕ ಕ್ಷೇತ್ರಗಳಲ್ಲಿ “ಮರು-ವಿತರಣಾ ನೀತಿಗಳಲ್ಲಿ” ಹೂಡಿಕೆ ಮಾಡಬಹುದು.

ಸರ್ಕಾರಿ ವೆಚ್ಚಗಳ ಅಂದಾಜುಗಳೊಂದಿಗೆ ಸಂಭಾವ್ಯ ತೆರಿಗೆ ಆದಾಯದ ನಮ್ಮ ಅಂದಾಜುಗಳನ್ನು ಒಟ್ಟುಗೂಡಿಸಿ, ಇಲ್ಲಿ ಪ್ರಸ್ತಾಪಿಸಲಾದ ರೀತಿಯ ಸಂಪತ್ತು ತೆರಿಗೆ ಪ್ಯಾಕೇಜ್‌ಗಳು ಸಾಮಾಜಿಕ ವಲಯದ ವೆಚ್ಚವನ್ನು ವಿಸ್ತರಿಸಲು ಗಮನಾರ್ಹವಾದ ಹಣಕಾಸಿನ ಸ್ಥಳವನ್ನು ಸೃಷ್ಟಿಸುತ್ತವೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ವರದಿ ಹೇಳಿದೆ.

Courtesy: scroll.in

ಇದನ್ನೂ ಓದಿ : ಅದಾನಿ ಕಲ್ಲಿದ್ದಲು ವಿವಾದ: 21 ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಸಿಜೆಐ ಡಿವೈ ಚಂದ್ರಚೂಡ್‌ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...