Homeಮುಖಪುಟಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

ಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ಆದಾಯ ಮತ್ತು ಸಂಪತ್ತು ಅಸಮಾನತೆಯನ್ನು ಅತ್ಯಂತ ಶ್ರೀಮಂತರಿಗೆ ಸಮಗ್ರ ಮತ್ತು ಪ್ರಗತಿಪರ ಸಂಪತ್ತು ತೆರಿಗೆಯನ್ನು ವಿಧಿಸುವ ಮೂಲಕ ನಿವಾರಿಸಬಹುದು ಎಂದು ‘World Inequality Lab’ (ಡಬ್ಲ್ಯುಐಎಲ್) ಶುಕ್ರವಾರ ಪ್ರಕಟಿಸಿರುವ ವರದಿಯು ಸಲಹೆ ನೀಡಿದೆ.

ವರದಿಯು ಮಾ.19ರಂದು ಪ್ರಕಟಗೊಂಡಿದ್ದ ಡಬ್ಲ್ಯುಐಎಲ್‌ನ ‘ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ 1922-2023: ಬಿಲಿಯನೇರ್ ರಾಜ್‌ನ ಹೆಚ್ಚಳ’ ಅಧ್ಯಯನದ ಮುಂದುವರೆದ ಭಾಗವಾಗಿದೆ.
ಅರ್ಥಶಾಸ್ತ್ರಜ್ಞರಾದ ನಿತಿನ್ ಕುಮಾರ್ ಭಾರ್ತಿ,‌ ಲುಕಾಸ್ ಚಾನ್ಸೆಲ್, ಥಾಮಸ್ ಪಿಕೆಟಿ ಮತ್ತು ಅನ್ಮೋಲ್ ಸೋಮಾಂಚಿ ಅವರು ಬರೆದಿದ್ದ ಅಧ್ಯಯನ ವರದಿಯು ಭಾರತದ ಜನಸಂಖ್ಯೆಯ ಶೇ.1ರಷ್ಟು ಅತ್ಯಂತ ಶ್ರೀಮಂತರ ಆದಾಯ ಮತ್ತು ಸಂಪತ್ತಿನ ಪಾಲು ದೇಶದ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಎನ್ನುವುದನ್ನು ತೋರಿಸಿತ್ತು.

ಭಾರತದ ಜನಸಂಖ್ಯೆಯ ಶೇ. 1ರಷ್ಟಿರುವ ಅತೀ ಶ್ರೀಮಂತರು 2022-23ರಲ್ಲಿ ದೇಶದ ಆದಾಯದ ಶೇ. 22.6ರಷ್ಟು ಮತ್ತು ಸಂಪತ್ತಿನ ಶೇ. 40.1ರಷ್ಟು ಹೊಂದಿದ್ದಾರೆ ಎಂದಿದ್ದ ಅಧ್ಯಯನವು, 2014-15 ಮತ್ತು 2022-23ರ ನಡುವೆ ಉನ್ನತ ಮಟ್ಟದ ಅಸಮಾನತೆಯ ಏರಿಕೆಯು ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಎದ್ದು ಕಾಣುತ್ತಿದೆ ಹೇಳಿದೆ.

ತಮ್ಮ ಅಧ್ಯಯನದಲ್ಲಿ ಕಂಡು ಕೊಂಡಿದ್ದ ಅಂಶಗಳನ್ನು ಆಧರಿಸಿ ಅದೇ ಲೇಖಕರು ಈಗ ತಮ್ಮ ನೂತನ ವರದಿಯಲ್ಲಿ ‘ಕೋಟ್ಯಧಿಪತಿ ತೆರಿಗೆ’ಯನ್ನು ಪ್ರಸ್ತಾಪಿಸಿದ್ದಾರೆ. 2022-23ರಲ್ಲಿ 10 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಸಂಪತ್ತನ್ನು ಹೊಂದಿದವರಿಗೆ ಮಾತ್ರ ಈ ತೆರಿಗೆಯನ್ನು ವಿಧಿಸುವಂತೆಯೂ ಅವರು ಪ್ರಸ್ತಾಪಿಸಿದ್ದಾರೆ.

“ನಮ್ಮ ಇತ್ತೀಚಿನ ಅಂದಾಜಿನ ಪ್ರಕಾರ, ದೇಶದ ಜನಸಂಖ್ಯೆ ಕೇವಲ 0.04 ಶೇ. ವಯಸ್ಕರು ಮಾತ್ರ ಈ ಮಿತಿಗಿಂತ ಮೇಲೆ ಇದ್ದಾರೆ” ಎಂದು ವರದಿ ಹೇಳಿದೆ.

ಲೇಖಕರು ತೆರಿಗೆ ಪ್ಯಾಕೇಜ್‌ನ ಮೂರು ಪರ್ಯಾಯ ರೂಪಗಳನ್ನು ಪ್ರಸ್ತಾಪಿಸಿದ್ದಾರೆ

  • 10 ಕೋಟಿರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ಶೇ.2ರಷ್ಟು ವಾರ್ಷಿಕ ತೆರಿಗೆ ಮತ್ತು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದನ್ನು ಪ್ರಸ್ತಾವಿಸಲಾಗಿದೆ. ನಮ್ಮ ಅಂದಾಜಿನಂತೆ ಇದೊಂದೇ ಜಿಡಿಪಿಯ ಶೇ.2.7ರಷ್ಟು ಆದಾಯವನ್ನು ಸೃಷ್ಟಿಸುತ್ತದೆ ಎಂದು ವರದಿಯು ಹೇಳಿದೆ.
  • 100 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ತೆರಿಗೆ ಶೇ.4ಕ್ಕೆ ಏರಿಕೆ ಮತ್ತು 10 ಕೋಟಿ ರೂ.ಗಳಿಂದ 100 ಕೋಟಿ ರೂ.ವರೆಗಿನ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದು. 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳಿಗೆ ಪಿತ್ರಾರ್ಜಿತ ತೆರಿಗೆಯನ್ನು ಶೇ.45ಕ್ಕೆ ಹೆಚ್ಚಿಸುವುದು. ವರದಿಯ ಪ್ರಕಾರ ಈ ತೆರಿಗೆಯಿಂದ ಆದಾಯವು ಭಾರತದ ಜಿಡಿಪಿಯ ಶೇ.4.6ರಷ್ಟಾಗುತ್ತದೆ.
  • ಇಲ್ಲಿ ಸಂಪತ್ತಿನ ಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ, ಸಂಪತ್ತು ತೆರಿಗೆಯನ್ನು ಶೇ.3ರಿಂದ ಶೇ.5ರವರೆಗೆ ಮತ್ತು ಪಿತ್ರಾರ್ಜಿತ ತೆರಿಗೆಯನ್ನು ಶೇ.45ರಿಂದ ಶೇ.55ರವರೆಗೆ ಹೆಚ್ಚಿಸುವುದನ್ನು ಪ್ರಸ್ತಾಪಿಸಲಾಗಿದೆ. ಇದರಿಂದ ತೆರಿಗೆ ಆದಾಯವು ಜಿಡಿಪಿಯ ಶೇ.6.1ಕ್ಕೆ ಹೆಚ್ಚಬಹುದು ಎಂದು ಲೇಖಕರು ವರದಿಯಲ್ಲಿ ಹೇಳಿದ್ದಾರೆ.

ಹೀಗೆ, ಸಂಗ್ರಹವಾಗುವ ಆದಾಯವನ್ನು ಬಡವರಿಗೆ ನೇರ ನಗದು ವರ್ಗಾವಣೆ, ಆರೋಗ್ಯ, ಶಿಕ್ಷಣ ಮತ್ತು ಇತರ ಸಾಮಾಜಿಕ ಕ್ಷೇತ್ರಗಳಲ್ಲಿ “ಮರು-ವಿತರಣಾ ನೀತಿಗಳಲ್ಲಿ” ಹೂಡಿಕೆ ಮಾಡಬಹುದು.

ಸರ್ಕಾರಿ ವೆಚ್ಚಗಳ ಅಂದಾಜುಗಳೊಂದಿಗೆ ಸಂಭಾವ್ಯ ತೆರಿಗೆ ಆದಾಯದ ನಮ್ಮ ಅಂದಾಜುಗಳನ್ನು ಒಟ್ಟುಗೂಡಿಸಿ, ಇಲ್ಲಿ ಪ್ರಸ್ತಾಪಿಸಲಾದ ರೀತಿಯ ಸಂಪತ್ತು ತೆರಿಗೆ ಪ್ಯಾಕೇಜ್‌ಗಳು ಸಾಮಾಜಿಕ ವಲಯದ ವೆಚ್ಚವನ್ನು ವಿಸ್ತರಿಸಲು ಗಮನಾರ್ಹವಾದ ಹಣಕಾಸಿನ ಸ್ಥಳವನ್ನು ಸೃಷ್ಟಿಸುತ್ತವೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ವರದಿ ಹೇಳಿದೆ.

Courtesy: scroll.in

ಇದನ್ನೂ ಓದಿ : ಅದಾನಿ ಕಲ್ಲಿದ್ದಲು ವಿವಾದ: 21 ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಸಿಜೆಐ ಡಿವೈ ಚಂದ್ರಚೂಡ್‌ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...