Homeಮುಖಪುಟಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

ಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

- Advertisement -
- Advertisement -

ಭಾರತದಲ್ಲಿ ಹೆಚ್ಚುತ್ತಿರುವ ಆದಾಯ ಮತ್ತು ಸಂಪತ್ತು ಅಸಮಾನತೆಯನ್ನು ಅತ್ಯಂತ ಶ್ರೀಮಂತರಿಗೆ ಸಮಗ್ರ ಮತ್ತು ಪ್ರಗತಿಪರ ಸಂಪತ್ತು ತೆರಿಗೆಯನ್ನು ವಿಧಿಸುವ ಮೂಲಕ ನಿವಾರಿಸಬಹುದು ಎಂದು ‘World Inequality Lab’ (ಡಬ್ಲ್ಯುಐಎಲ್) ಶುಕ್ರವಾರ ಪ್ರಕಟಿಸಿರುವ ವರದಿಯು ಸಲಹೆ ನೀಡಿದೆ.

ವರದಿಯು ಮಾ.19ರಂದು ಪ್ರಕಟಗೊಂಡಿದ್ದ ಡಬ್ಲ್ಯುಐಎಲ್‌ನ ‘ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ 1922-2023: ಬಿಲಿಯನೇರ್ ರಾಜ್‌ನ ಹೆಚ್ಚಳ’ ಅಧ್ಯಯನದ ಮುಂದುವರೆದ ಭಾಗವಾಗಿದೆ.
ಅರ್ಥಶಾಸ್ತ್ರಜ್ಞರಾದ ನಿತಿನ್ ಕುಮಾರ್ ಭಾರ್ತಿ,‌ ಲುಕಾಸ್ ಚಾನ್ಸೆಲ್, ಥಾಮಸ್ ಪಿಕೆಟಿ ಮತ್ತು ಅನ್ಮೋಲ್ ಸೋಮಾಂಚಿ ಅವರು ಬರೆದಿದ್ದ ಅಧ್ಯಯನ ವರದಿಯು ಭಾರತದ ಜನಸಂಖ್ಯೆಯ ಶೇ.1ರಷ್ಟು ಅತ್ಯಂತ ಶ್ರೀಮಂತರ ಆದಾಯ ಮತ್ತು ಸಂಪತ್ತಿನ ಪಾಲು ದೇಶದ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಎನ್ನುವುದನ್ನು ತೋರಿಸಿತ್ತು.

ಭಾರತದ ಜನಸಂಖ್ಯೆಯ ಶೇ. 1ರಷ್ಟಿರುವ ಅತೀ ಶ್ರೀಮಂತರು 2022-23ರಲ್ಲಿ ದೇಶದ ಆದಾಯದ ಶೇ. 22.6ರಷ್ಟು ಮತ್ತು ಸಂಪತ್ತಿನ ಶೇ. 40.1ರಷ್ಟು ಹೊಂದಿದ್ದಾರೆ ಎಂದಿದ್ದ ಅಧ್ಯಯನವು, 2014-15 ಮತ್ತು 2022-23ರ ನಡುವೆ ಉನ್ನತ ಮಟ್ಟದ ಅಸಮಾನತೆಯ ಏರಿಕೆಯು ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಎದ್ದು ಕಾಣುತ್ತಿದೆ ಹೇಳಿದೆ.

ತಮ್ಮ ಅಧ್ಯಯನದಲ್ಲಿ ಕಂಡು ಕೊಂಡಿದ್ದ ಅಂಶಗಳನ್ನು ಆಧರಿಸಿ ಅದೇ ಲೇಖಕರು ಈಗ ತಮ್ಮ ನೂತನ ವರದಿಯಲ್ಲಿ ‘ಕೋಟ್ಯಧಿಪತಿ ತೆರಿಗೆ’ಯನ್ನು ಪ್ರಸ್ತಾಪಿಸಿದ್ದಾರೆ. 2022-23ರಲ್ಲಿ 10 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಸಂಪತ್ತನ್ನು ಹೊಂದಿದವರಿಗೆ ಮಾತ್ರ ಈ ತೆರಿಗೆಯನ್ನು ವಿಧಿಸುವಂತೆಯೂ ಅವರು ಪ್ರಸ್ತಾಪಿಸಿದ್ದಾರೆ.

“ನಮ್ಮ ಇತ್ತೀಚಿನ ಅಂದಾಜಿನ ಪ್ರಕಾರ, ದೇಶದ ಜನಸಂಖ್ಯೆ ಕೇವಲ 0.04 ಶೇ. ವಯಸ್ಕರು ಮಾತ್ರ ಈ ಮಿತಿಗಿಂತ ಮೇಲೆ ಇದ್ದಾರೆ” ಎಂದು ವರದಿ ಹೇಳಿದೆ.

ಲೇಖಕರು ತೆರಿಗೆ ಪ್ಯಾಕೇಜ್‌ನ ಮೂರು ಪರ್ಯಾಯ ರೂಪಗಳನ್ನು ಪ್ರಸ್ತಾಪಿಸಿದ್ದಾರೆ

  • 10 ಕೋಟಿರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ಶೇ.2ರಷ್ಟು ವಾರ್ಷಿಕ ತೆರಿಗೆ ಮತ್ತು 10 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದನ್ನು ಪ್ರಸ್ತಾವಿಸಲಾಗಿದೆ. ನಮ್ಮ ಅಂದಾಜಿನಂತೆ ಇದೊಂದೇ ಜಿಡಿಪಿಯ ಶೇ.2.7ರಷ್ಟು ಆದಾಯವನ್ನು ಸೃಷ್ಟಿಸುತ್ತದೆ ಎಂದು ವರದಿಯು ಹೇಳಿದೆ.
  • 100 ಕೋಟಿ ರೂ.ಗೂ ಹೆಚ್ಚಿನ ನಿವ್ವಳ ಮೌಲ್ಯವನ್ನು ಹೊಂದಿರುವ ವ್ಯಕ್ತಿಗಳಿಗೆ ತೆರಿಗೆ ಶೇ.4ಕ್ಕೆ ಏರಿಕೆ ಮತ್ತು 10 ಕೋಟಿ ರೂ.ಗಳಿಂದ 100 ಕೋಟಿ ರೂ.ವರೆಗಿನ ಮೌಲ್ಯದ ಆಸ್ತಿಗಳ ಮೇಲೆ ಶೇ.33ರಷ್ಟು ಪಿತ್ರಾರ್ಜಿತ ತೆರಿಗೆಯನ್ನು ವಿಧಿಸುವುದು. 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳಿಗೆ ಪಿತ್ರಾರ್ಜಿತ ತೆರಿಗೆಯನ್ನು ಶೇ.45ಕ್ಕೆ ಹೆಚ್ಚಿಸುವುದು. ವರದಿಯ ಪ್ರಕಾರ ಈ ತೆರಿಗೆಯಿಂದ ಆದಾಯವು ಭಾರತದ ಜಿಡಿಪಿಯ ಶೇ.4.6ರಷ್ಟಾಗುತ್ತದೆ.
  • ಇಲ್ಲಿ ಸಂಪತ್ತಿನ ಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ, ಸಂಪತ್ತು ತೆರಿಗೆಯನ್ನು ಶೇ.3ರಿಂದ ಶೇ.5ರವರೆಗೆ ಮತ್ತು ಪಿತ್ರಾರ್ಜಿತ ತೆರಿಗೆಯನ್ನು ಶೇ.45ರಿಂದ ಶೇ.55ರವರೆಗೆ ಹೆಚ್ಚಿಸುವುದನ್ನು ಪ್ರಸ್ತಾಪಿಸಲಾಗಿದೆ. ಇದರಿಂದ ತೆರಿಗೆ ಆದಾಯವು ಜಿಡಿಪಿಯ ಶೇ.6.1ಕ್ಕೆ ಹೆಚ್ಚಬಹುದು ಎಂದು ಲೇಖಕರು ವರದಿಯಲ್ಲಿ ಹೇಳಿದ್ದಾರೆ.

ಹೀಗೆ, ಸಂಗ್ರಹವಾಗುವ ಆದಾಯವನ್ನು ಬಡವರಿಗೆ ನೇರ ನಗದು ವರ್ಗಾವಣೆ, ಆರೋಗ್ಯ, ಶಿಕ್ಷಣ ಮತ್ತು ಇತರ ಸಾಮಾಜಿಕ ಕ್ಷೇತ್ರಗಳಲ್ಲಿ “ಮರು-ವಿತರಣಾ ನೀತಿಗಳಲ್ಲಿ” ಹೂಡಿಕೆ ಮಾಡಬಹುದು.

ಸರ್ಕಾರಿ ವೆಚ್ಚಗಳ ಅಂದಾಜುಗಳೊಂದಿಗೆ ಸಂಭಾವ್ಯ ತೆರಿಗೆ ಆದಾಯದ ನಮ್ಮ ಅಂದಾಜುಗಳನ್ನು ಒಟ್ಟುಗೂಡಿಸಿ, ಇಲ್ಲಿ ಪ್ರಸ್ತಾಪಿಸಲಾದ ರೀತಿಯ ಸಂಪತ್ತು ತೆರಿಗೆ ಪ್ಯಾಕೇಜ್‌ಗಳು ಸಾಮಾಜಿಕ ವಲಯದ ವೆಚ್ಚವನ್ನು ವಿಸ್ತರಿಸಲು ಗಮನಾರ್ಹವಾದ ಹಣಕಾಸಿನ ಸ್ಥಳವನ್ನು ಸೃಷ್ಟಿಸುತ್ತವೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ವರದಿ ಹೇಳಿದೆ.

Courtesy: scroll.in

ಇದನ್ನೂ ಓದಿ : ಅದಾನಿ ಕಲ್ಲಿದ್ದಲು ವಿವಾದ: 21 ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಸಿಜೆಐ ಡಿವೈ ಚಂದ್ರಚೂಡ್‌ಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...