ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿನಯ್ ಕುಮಾರ್ ಸಕ್ಸೇನಾ 2001ರಲ್ಲಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಮತ್ತು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ದೋಷಿ ಎಂದು ದೆಹಲಿಯ ನ್ಯಾಯಾಲಯ ತೀರ್ಪು ನೀಡಿದೆ.
ಸಾಕೇತ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಅವರು ಭಾರತೀಯ ದಂಡ ಸಂಹಿತೆ 1860ರ ಸೆಕ್ಷನ್ 500ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟದ ಅಪರಾಧಕ್ಕಾಗಿ ಪಾಟ್ಕರ್ ಅವರನ್ನು ದೋಷಿ ಘೋಷಿಸಿದ್ದಾರೆ.
A Delhi Court on Friday convicted Narmada Bachao Andolan leader and activist Medha Patkar in the criminal defamation case lodged against her by Vinai Kumar Saxena in 2001. VK Saxena is presently Delhi's Lieutenant Governor.
Read more: https://t.co/uGHSXitOA2#MedhaPatkar pic.twitter.com/IAJ8tiuIKL— Live Law (@LiveLawIndia) May 24, 2024
2001ರಲ್ಲಿ ಸಕ್ಸೇನಾ ಪಾಟ್ಕರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್ನ ಮುಖ್ಯಸ್ಥರಾಗಿದ್ದರು.
ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ” ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟನೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.
“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿಕೆ ಸಕ್ಸೇನಾ, ಸ್ವತಃ ಮಾಲೆಗಾಂವ್ಗೆ ಬಂದು ಎನ್ಬಿಎಯನ್ನು ಹೊಗಳಿ ರೂ. 40,000ರ ಚೆಕ್ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದರು.
ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ” ಎಂದಿದ್ದಾರೆ.
ಮೇ 30ರಂದು ಮುಂದಿನ ವಿಚಾರಣೆ ನಿಗದಿಪಡಿಸಲಾಗಿದ್ದು, ಅಂದು ನ್ಯಾಯಾಲಯ ಶಿಕ್ಷೆ ಪ್ರಕಟಿಸುವ ಸಾಧ್ಯತೆ ಇದೆ.
ಇದನ್ನೂ ಓದಿ : ಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ


