Homeಮುಖಪುಟಗಾಳಿ ಹೆಚ್ಚು ಬಲವಾಗಿ ಬೀಸಿದರೆ ಎನ್‌ಡಿಎಗೆ ಬಹುಮತ ಪಡೆಯುವುದು ಕಷ್ಟ: ಯೋಗೇಂದ್ರ ಯಾದವ್

ಗಾಳಿ ಹೆಚ್ಚು ಬಲವಾಗಿ ಬೀಸಿದರೆ ಎನ್‌ಡಿಎಗೆ ಬಹುಮತ ಪಡೆಯುವುದು ಕಷ್ಟ: ಯೋಗೇಂದ್ರ ಯಾದವ್

- Advertisement -
- Advertisement -

ಪ್ರಸಿದ್ಧ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಮತ್ತು ಯುಎಸ್ ಸಮೀಕ್ಷೆ ತಜ್ಞ ಇಯಾನ್ ಬ್ರೆಮ್ಮರ್ ನಂತರ, ಮತ್ತೋರ್ವ ಚುನಾವಣಾ ವಿಶ್ಲೇಷಕ ಯೋಗೇಂದ್ರ ಯಾದವ್ ಈಗ ಭಾರತೀಯ ಜನತಾ ಪಕ್ಷವು (ಬಿಜೆಪಿ) ಮತ್ತೊಮ್ಮೆ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯ ಸಾಧಿಸುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಆದರೆ, ಬಿಜೆಪಿ 400 ಸೀಟುಗಳನ್ನು ತಪುಪುವುದು ಕಷ್ಟ ಎಂದು ಹೇಳಿದ್ದಾರೆ.

ಆದಾಗ್ಯೂ, ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಮಾಧಾನ ತರಲಿದ್ದು, ಅದರ ಸ್ಥಾನಗಳ ಸಂಖ್ಯೆ 100 ದಾಟಬಹುದು ಎಂದು ಅಂದಾಜಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಈ ಹೊಸ ವೀಡಿಯೊದಲ್ಲಿ, ಚುನಾವಣಾ ಟ್ರೆಂಡ್‌ಗಳ ಅಂತಿಮ ಮೌಲ್ಯಮಾಪನವನ್ನು ಪ್ರಸ್ತುತಪಡಿಸಲಾಗಿದೆ. 400 ಅಥವಾ 303 ಅನ್ನು ಮರೆತುಬಿಡಿ, ಬಿಜೆಪಿ 272 ಅನ್ನು ದಾಟುವುದಿಲ್ಲ. ಗಾಳಿ ಹೆಚ್ಚು ಬಲವಾಗಿ ಬೀಸಿದರೆ, ಎನ್‌ಡಿಎಗೆ ಬಹುಮತ ಸಿಗದಿರುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ.

“ಚುನಾವಣಾ ಟ್ರೆಂಡ್‌ಗಳ ಬಗ್ಗೆ ಸತ್ಯವನ್ನು ಬಹಿರಂಗಪಡಿಸುವ ನನ್ನ ಹಿಂದಿನ ವೀಡಿಯೊವನ್ನು ಒಂದು ಕೋಟಿಗೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಎಲ್ಲ ಒಪ್ಪಂದಗಳು, ಭಿನ್ನಾಭಿಪ್ರಾಯಗಳು, ಟೀಕೆಗಳು ಮತ್ತು ಪ್ರಶ್ನೆಗಳಿಗೆ ಧನ್ಯವಾದಗಳು. ಮಾಧ್ಯಮದ ಭ್ರಮೆಗಳಿಂದ ಇತರರನ್ನು ತಪ್ಪಿಸಲು ಮತ್ತು ಉಳಿಸಲು, ಈ ವೀಡಿಯೊವನ್ನು ವೀಕ್ಷಿಸಿ ಮತ್ತು ತೋರಿಸಿ” ಎಂದು ಮನವಿ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದ ಪರವಾಗಿ ತಮ್ಮ ಭವಿಷ್ಯವಾಣಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ಕಿಶೋರ್, ಯಾದವ್ ಅವರ ಸ್ಥಾನದ ಮುನ್ಸೂಚನೆಯನ್ನು ಬೆಂಬಲಿಸಿದ್ದಾರೆ. ಯಾದವ್ ಪ್ರಕಾರ, ಬಿಜೆಪಿ 240-260 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷಗಳು 34-45 ಸ್ಥಾನಗಳನ್ನು ಗೆಲ್ಲುತ್ತವೆ. ಅಂದರೆ, ಎನ್‌ಡಿಎ ಒಟ್ಟು 275 ಮತ್ತು 305 ಸ್ಥಾನಗಳ ನಡುವೆ ಇರಬಹುದು ಎಂದಿದ್ದಾರೆ.

ಭವಿಷ್ಯ ನುಡಿದಿರುವ ಯಾದವ್, ಕಾಂಗ್ರೆಸ್ 85 ರಿಂದ 100 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಬಿಜೆಪಿ ಜಗ್ಗಾಟವನ್ನು ತನ್ನ ಹಾದಿಯಲ್ಲಿ ನಿಲ್ಲಿಸುವ ಆಶಯ ಹೊಂದಿರುವ ಇಂಡಿಯಾ ಬ್ಲಾಕ್ 120-135 ಸ್ಥಾನಗಳಿಗೆ ಇಳಿಯುವ ಸಾಧ್ಯತೆಯಿದೆ. ಎಂದು ಹೇಳಿದ್ದಾರೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದಿತ್ತು.

ಈ ವಾರ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಿಶೋರ್, ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವುದೇ ಗಮನಾರ್ಹ ಅತೃಪ್ತಿ ಇಲ್ಲದ ಕಾರಣ ಬಿಜೆಪಿ ಆರಾಮವಾಗಿ ಬಹುಮತದ ಅಂಕವನ್ನು ದಾಟುತ್ತದೆ ಎಂದು ಹೇಳಿದ್ದರು.

“ನಿರಾಶೆಗಳು, ಈಡೇರದ ಆಕಾಂಕ್ಷೆಗಳು ಇರಬಹುದು. ಆದರೆ, ವ್ಯಾಪಕ ಕೋಪದ ಬಗ್ಗೆ ನಾವು ಕೇಳಿಲ್ಲ” ಎಂದು ಪ್ರಶಾಂತ್ ಕಿಶೋರ್ ಖಾಸಗಿ ಮಾಧ್ಯಮದ ಸಂದರ್ಶನದಲ್ಲಿ ತಿಳಿಸಿದರು. ಬಿಜೆಪಿ ತನ್ನ ಮಹತ್ವಾಕಾಂಕ್ಷೆಯ ‘370 ಸ್ಥಾನ’ ಗುರಿಯನ್ನು ಸಾಧಿಸಲು ಸಾಧ್ಯವಾಗದಿರಬಹುದು ಎಂದು ಸುಳಿವು ನೀಡಿದರು.

ಬಿಜೆಪಿ 295 ರಿಂದ 315 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಮೆರಿಕದ ರಾಜಕೀಯ ವಿಜ್ಞಾನಿ ಇಯಾನ್ ಬ್ರೆಮ್ಮರ್ ವಾಹಿನಿಗೆ ತಿಳಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 303 ಲೋಕಸಭಾ ಸ್ಥಾನಗಳನ್ನು ಗೆದ್ದು, ಹಿಂದಿ ಹೃದಯ ರಾಜ್ಯಗಳಲ್ಲಿ ‘ಮೋದಿ ಅಲೆ’ಯ ಮೇಲೆ ಸವಾರಿ ಮಾಡಿತ್ತು. 370 ಸ್ಥಾನಗಳನ್ನು ಗೆಲ್ಲಬೇಕಾದರೆ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಪಕ್ಷಕ್ಕೆ ಭರ್ಜರಿ ಜಯಗಳಿಸಬೇಕಿದೆ.

ಇದನ್ನೂ ಓದಿ; ಆನಂದ ಬೋಸ್ ವಿರುದ್ಧ ಕಿರುಕುಳ ಪ್ರಕರಣ: ರಾಜಭವನದ ಸಿಬ್ಬಂದಿ ವಿರುದ್ಧದ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...