Homeಕರ್ನಾಟಕಕೊಡೆ ಹಿಡಿದು ಬಸ್‌ ಚಲಾಯಿಸಿದ NWKSRTC ಚಾಲಕ : ಪರ-ವಿರೋಧ ಚರ್ಚೆ

ಕೊಡೆ ಹಿಡಿದು ಬಸ್‌ ಚಲಾಯಿಸಿದ NWKSRTC ಚಾಲಕ : ಪರ-ವಿರೋಧ ಚರ್ಚೆ

ಚಾಲಕ ಕೊಡೆ ಹಿಡಿದು ಬಸ್‌ ಓಡಿಸಿ ವಿಡಿಯೋ ಮಾಡಿರುವುದು ಮನೋರಂಜನೆಯ ಉದ್ದೇಶಕ್ಕೆ ಎಂದು ಸಚಿವರು ಹೇಳಿದರೆ, ಇತ್ತ ವಿಡಿಯೋದ ಕೆಲ ಅಂಶಗಳು ಮತ್ತು ಮಾಧ್ಯಮ ವರದಿ ವ್ಯತಿರಿಕ್ತವಾಗಿ ಕಾಣುತ್ತಿದೆ.

- Advertisement -
- Advertisement -

ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯುಕೆಆರ್‌ಟಿಸಿ)ದ ಚಾಲಕ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ ವಿಡಿಯೋವೊಂದು ಮೇ 24, 2024ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಡಿಯೋ ಆಧರಿಸಿ ಕನ್ನಡದ ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು “ಕೊಡೆ ಹಿಡಿದು ಬಸ್‌ ಓಡಿಸಿದ ಕೆಎಸ್‌ಆರ್‌ಟಿಸಿ ಡ್ರೈವರ್“, “ಛೇ..! ಬಸ್‌ ಒಳಗೆ ಛತ್ರಿ” “ಛತ್ರಿ ಹಿಡಿದು ಸಾರಿಗೆ ಬಸ್ ಓಡಿಸಿದ ಚಾಲಕ! ಬಸ್ ರಿಪೇರಿಗೂ ದುಡ್ಡಿಲ್ವಾ? ಜನರ ಪ್ರಶ್ನೆ” ಇತ್ಯಾದಿ ಶೀರ್ಷಿಕೆಗಳೊಂದಿಗೆ ಸುದ್ದಿ ಪ್ರಕಟಿಸಿತ್ತು.

ರಾಜ್ಯ ಬಿಜೆಪಿ ಮತ್ತು ಅದರ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಡಾ.ಸಿಎನ್ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವರು ವಿಡಿಯೋ ಹಂಚಿಕೊಂಡು ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಮೇ 24, 2024ರಂದು ಎಕ್ಸ್ ಮೂಲಕ ಪ್ರತಿಕ್ರಿಯೆ ಕೊಟ್ಟಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, “ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ಚಾಲನೆ ಮಾಡುವ ವಿಡಿಯೋ (ಮನರಂಜನೆಗಾಗಿ ಮಾಡಿದ‌ ವಿಡಿಯೋ ಕುರಿತು) ಬಿಜೆಪಿಯವರು ಟ್ವೀಟ್ ಮಾಡಿ ಮಾಡಿ ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿರುವುದಕ್ಕೆ ಹಾಗೂ ಅವರ ಈ ಸಂತೋಷಕ್ಕೆ ಕಡಿವಾಣ ಹಾಕಬೇಕಾಗಿದೆಯಲ್ಲ‌ ಎಂಬ ನೋವಿನೊಂದಿಗೆ ಈ ವಿವರಣೆ ನೀಡಲಾಗುತ್ತಿದೆ.

“ಕೆಲವರಿಗೆ ಕಣ್ಣಿರುತ್ತದೆ. ಆದರೆ,‌ ನೋಡಲು ಸಾಧ್ಯವಾಗದ ಸ್ಥಿತಿ. ತಲೆ ಇರುತ್ತದೆ ಬುದ್ದಿಯನ್ನು ಸರಿಯಾಗಿ‌ ಉಪಯೋಗಿಸಲಾಗದ ಪರಿಸ್ಥಿತಿ. ಇವೆಲ್ಲವೂ ಅನ್ವಯಿಸುವುದು ಬಸನಗೌಡ ಪಾಟೀಲ್ ಯತ್ನಾಳ್, ಆರ್‌. ಅಶೋಕ್ ಮತ್ತು ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರಿಗೆ. ಬಿಜೆಪಿಯವರು ಕಣ್ಣು, ತಲೆ ಯಾವುದೂ ಸರಿಯಾಗಿ ಕನೆಕ್ಟ್ ಆಗದೆ‌ ಇರೋ ಪಂಡಿತ ಪುತ್ರರು ಎಂಬುವುದನ್ನು ಬಿಡಿಸಿ ಹೇಳಬೇಕಿಲ್ಲ. ಈ ವಿಡಿಯೋ‌ ನೋಡಿದರೆ ಚಾಲಕ ಹಿಡಿದಿರುವ ಕೊಡೆ ಮೇಲೆ ಒಂದೇ‌ ಒಂದು ಹನಿ‌ ನೀರು‌ ಕಾಣುತ್ತಿಲ್ಲ. ಅದನ್ನು ನೋಡುವ, ಯೋಚಿಸುವ ವ್ಯವಧಾನ, ಬುದ್ದಿಯಾದರೂ ಬೇಡವೇ ಇವರಿಗೆ ?”

“ಬಿಜೆಪಿ‌ ಅವಧಿಯಲ್ಲಿ‌ ರಾಜ್ಯದ ಸಾರಿಗೆ ಸಂಸ್ಥೆಗಳನ್ನು ರೂ.5,900 ಕೋಟಿ ಸಾಲದ ಸುಳಿಯಲ್ಲಿ ಮುಳುಗಿಸಿ ಹೋಗಿರುವ ಕೀರ್ತಿವಂತರು ಇವರು. ಅವರ ಅವಧಿಯಲ್ಲಿ ಹೊಸ‌ ಬಸ್ಸುಗಳ ಸೇರ್ಪಡೆಯಾಗಿಲ್ಲ. ಡಕೋಟ ಬಸ್ಸುಗಳನ್ನು‌ ಕಲ್ಪಿಸಿರುವ ಸಾಧನೆ ಅವರದ್ದೇ. ನೇಮಕಾತಿಯಂತೂ ಮರೀಚಿಕೆಯೇ‌ ಸರಿ. ನಮ್ಮ ಅವಧಿಯಲ್ಲಿ‌ ಹೊರಡಿಸಿದ್ದ ನೇಮಕಾತಿ ಪ್ರಕಟಣೆಗೂ ತಡೆ ನೀಡಿದ್ದ ಕೀರ್ತಿ ಬಿಜೆಪಿ‌ ಅವರಿಗೆ ಸಲ್ಲಬೇಕು. ನಮ್ಮ‌ ಸರ್ಕಾರ ಬಂದೊಡನೆ 5,800 ಹೊಸ‌ ಬಸ್ಸುಗಳ ಸೇರ್ಪಡೆಗೆ ಚಾಲನೆ ನೀಡಿದೆ.”

“ಬಿಜೆಪಿ ಅವಧಿಯಲ್ಲಿ ತಡೆ‌ ಹಿಡಿಯಲಾಗಿದ್ದ ನೇಮಕಾತಿಗೆ ಚಾಲನೆ‌ ನೀಡಲಾಗಿದೆ. 13,999 ಹುದ್ದೆಗಳು ಖಾಲಿಯಿದ್ದು, ತಾಂತ್ರಿಕ‌ ಸಿಬ್ಬಂದಿ ಹಾಗೂ ಚಾಲಕ ನಿರ್ವಾಹಕರಿಗೆ ನೇಮಕಾತಿ‌ ಪತ್ರವನ್ನು ವಿತರಿಸಲಾಗಿದೆ. ಇತರೆ ನೇಮಕಾತಿ ಪ್ರಕ್ರಿಯೆಗಳು ಜಾರಿಯಲ್ಲಿವೆ.”

“ಬಿಜೆಪಿಯವರು ಸಾರಿಗೆ ಸಂಸ್ಥೆಗಳಿಗೆ ದಯಪಾಲಿಸಿದ ದುರಂತ ಕಥೆಗಳನ್ನು‌ ಮತ್ತೊಮ್ಮೆ ಮಗದೊಮ್ಮೆ ನೆನಪಿಸಲು ನಮಗೆ ಅವರೇ ಅವಕಾಶ ಮಾಡಿಕೊಡುವುದರ ಹಿಂದಿನ‌ ಉದ್ದೇಶ, ನಮ್ಮ‌ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಪ್ರಚಾರ ನೀಡುವುದು ಎಂದಾದರೆ ನಮಗೇನು‌ ಅಭ್ಯಂತರವಿಲ್ಲ.”

“ಮುಂದುವರೆದು, ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಅದರನ್ವಯ, ದಿನಾಂಕ: 23-05-2024 ರಂದು ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25 ಎಫ್-1336 ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕರಾಗಿ ಶ್ರೀ ಹನುಮಂತಪ್ಪ ಅ ಕಿಲ್ಲೇದಾರ, ಬಿ.ಸಂ-1203 D ಹಾಗೂ ನಿರ್ವಾಹಕರಾಗಿ ಶ್ರೀಮತಿ ಅನಿತಾ ಹೆಚ್. ಬಿ ಸಂ-396 ರವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದ ಆ ಸಮಯದಲ್ಲಿ ಅಂದರೆ ಸುಮಾರು 16:30 ಕ್ಕೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಇದ್ದುದರಿಂದ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು, ಹಿಡಿದುಕೊಂಡು ವಾಹನ ಚಾಲನೆ ಮಾಡಿರುತ್ತಾರೆ. ಇದನ್ನು ಸದರಿ ನಿರ್ವಾಹಕಿಯು ವಿಡಿಯೋ ಚಿತ್ರೀಕರಣ ಮಾಡಿರುತ್ತಾರೆ.”

“ಆ ಸಮಯದಲ್ಲಿ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಾಗಲಿ ಸೋರಿಕೆ (Roof Leakage)ಇರಲಿಲ್ಲ . ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲು ಆಗಿರುವುದಿಲ್ಲ. ಸದರಿ ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿ ಮೇಲ್ಚಾವಣಿಯು ಸೋರದೆ ಇರುವುದನ್ನು ಖಚಿತಪಡಿಸಿಕೊಂಡಿರುತ್ತಾರೆ.”

“ಈ ರೀತಿಯ ಬೇಜಾವಬ್ದಾರಿತನದಿಂದ ವರ್ತಿಸಿ, ಸಂಸ್ಥೆಯ ಘನತೆಗೆ ಧಕ್ಕೆ ತಂದ ಚಾಲನಾ ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.” ಎಂದು ತಿಳಿಸಿದ್ದಾರೆ.

“ಬಸ್‌ ಸೋರುತ್ತಿತ್ತು, ಚಾಲಕ ಕೊಡೆ ಹಿಡಿದು ಚಾಲನೆ ಮಾಡಿದ್ದಾರೆ” ಎಂದು ಸುದ್ದಿ ಪ್ರಕಟಿಸಿದ್ದ ಅದೇ ಮಾಧ್ಯಮಗಳು, ಸಾರಿಗೆ ಸಚಿವರ ಹೇಳಿಕೆ ಅನುಸರಿಸಿ ರೀಲ್ಸ್ ಮಾಡಿ ಕೆಲಸ ಕಳೆದುಕೊಂಡ ಚಾಲಕ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿವೆ.

ಆದರೆ, vijayapatha.in ಎಂಬ ಸುದ್ದಿ ವೆಬ್‌ಸೈಟ್‌ವೊಂದು “NWKRTC:ಮಳೆ ನೀರು ಮುಖಕ್ಕೆ ರಾಚುತ್ತಿದ್ದರೂ ಬಿಡದೆ ಬಸ್ ಓಡಿಸಿದ ಅಮಾಯಕ ಚಾಲಕ, ನಿರ್ವಾಹಕರನ್ನೇ ಅಮಾನತು ಮಾಡಿ ತಮ್ಮ ತಪ್ಪು ಮುಚ್ಚಿಕೊಂಡ ಡಿಸಿ ಚೆನ್ನಗೌಡರ್!!” ಎಂಬ ಶೀರ್ಷಿಕೆಯಲ್ಲಿ ಮೇ 25, 2024ರಂದು ಸುದ್ದಿ ಪ್ರಕಟಿಸಿದೆ. ಈ ಸುದ್ದಿಯಲ್ಲಿ “ಬಸ್‌ ಮುಂದಿನ ಗಾಜಿನಿಂದ ಚಾಲಕನ ಮುಖಕ್ಕೆ ಮಳೆ ನೀರು ಹೊಡೆಯುತ್ತಿತ್ತು. ಇದರಿಂದ ಚಾಲನೆ ಮಾಡಲು ಅವರಿಗೆ ಕಷ್ಟವಾಗಿತ್ತು. ಈ ಕಾರಣಕ್ಕೆ ಕೊಡೆ ಹಿಡಿದು ಬಸ್‌ ಓಡಿಸಿದ್ದಾರೆ. ಇದಕ್ಕೆ ಯಾರನ್ನು ಅಮಾನತು ಮಾಡಬೇಕು ಎಂಬುವುದನ್ನು ಉನ್ನತ ಅಧಿಕಾರಿಗಳು ನಿರ್ಧರಿಸಬೇಕಿತ್ತು. ಆದರೆ, ಇಲ್ಲಿ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಚಾಲಕ, ನಿರ್ವಾಹಕರನ್ನು ಅಮಾನತು ಮಾಡಿ ದರ್ಪ ಮೆರೆದಿದ್ದಾರೆ ಧಾರವಾಡ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಚನ್ನಪ್ಪಗೌಡರ್” ಎಂದು ಹೇಳಿದೆ.

ನಾನು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಚಾಲಕನ ಎಡ ಬದಿಯ ಗೇರ್ ಬಾಕ್ಸ್ ಮೇಲೆ ನೀರು ಬಿದ್ದಿರುವುದು ಮತ್ತು ಹೊರಗಡೆ ಜೋರಾಗಿ ಮಳೆ ಸುರಿಯುತ್ತಿದ್ದುದು ಸ್ಪಷ್ಟವಾಗಿ ಕಾಣುತ್ತಿದೆ. ಇನ್ನು ಚಾಲಕ ಹಿಡಿದ ಕೊಡೆ ಮೇಲೆ ನೀರು ಇದೆಯೋ..ಇಲ್ಲವೋ ಎಂಬುವುದು ಸ್ಪಷ್ಟವಾಗಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಚಾಲಕ ಕೊಡೆ ಹಿಡಿದು ಬಸ್‌ ಓಡಿಸಿ ವಿಡಿಯೋ ಮಾಡಿರುವುದು ಮನೋರಂಜನೆಯ ಉದ್ದೇಶಕ್ಕೆ ಎಂದು ಸಚಿವರು ಹೇಳಿದರೆ, ಇತ್ತ ವಿಡಿಯೋದ ಕೆಲ ಅಂಶಗಳು ಮತ್ತು ಮಾಧ್ಯಮ ವರದಿ ವ್ಯತಿರಿಕ್ತವಾಗಿ ಕಾಣುತ್ತಿದೆ. ಹಾಗಾಗಿ, ಈ ಪ್ರಕರಣ ಗೊಂದಲಮಯವಾಗಿದೆ.

ಇದನ್ನೂ ಓದಿ : ಪರಿಷತ್ ಚುನಾವಣೆ: ಐವರು ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...