Homeಕರ್ನಾಟಕಕೊಡೆ ಹಿಡಿದು ಬಸ್‌ ಚಲಾಯಿಸಿದ NWKSRTC ಚಾಲಕ : ಪರ-ವಿರೋಧ ಚರ್ಚೆ

ಕೊಡೆ ಹಿಡಿದು ಬಸ್‌ ಚಲಾಯಿಸಿದ NWKSRTC ಚಾಲಕ : ಪರ-ವಿರೋಧ ಚರ್ಚೆ

ಚಾಲಕ ಕೊಡೆ ಹಿಡಿದು ಬಸ್‌ ಓಡಿಸಿ ವಿಡಿಯೋ ಮಾಡಿರುವುದು ಮನೋರಂಜನೆಯ ಉದ್ದೇಶಕ್ಕೆ ಎಂದು ಸಚಿವರು ಹೇಳಿದರೆ, ಇತ್ತ ವಿಡಿಯೋದ ಕೆಲ ಅಂಶಗಳು ಮತ್ತು ಮಾಧ್ಯಮ ವರದಿ ವ್ಯತಿರಿಕ್ತವಾಗಿ ಕಾಣುತ್ತಿದೆ.

- Advertisement -
- Advertisement -

ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯುಕೆಆರ್‌ಟಿಸಿ)ದ ಚಾಲಕ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ ವಿಡಿಯೋವೊಂದು ಮೇ 24, 2024ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಡಿಯೋ ಆಧರಿಸಿ ಕನ್ನಡದ ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು “ಕೊಡೆ ಹಿಡಿದು ಬಸ್‌ ಓಡಿಸಿದ ಕೆಎಸ್‌ಆರ್‌ಟಿಸಿ ಡ್ರೈವರ್“, “ಛೇ..! ಬಸ್‌ ಒಳಗೆ ಛತ್ರಿ” “ಛತ್ರಿ ಹಿಡಿದು ಸಾರಿಗೆ ಬಸ್ ಓಡಿಸಿದ ಚಾಲಕ! ಬಸ್ ರಿಪೇರಿಗೂ ದುಡ್ಡಿಲ್ವಾ? ಜನರ ಪ್ರಶ್ನೆ” ಇತ್ಯಾದಿ ಶೀರ್ಷಿಕೆಗಳೊಂದಿಗೆ ಸುದ್ದಿ ಪ್ರಕಟಿಸಿತ್ತು.

ರಾಜ್ಯ ಬಿಜೆಪಿ ಮತ್ತು ಅದರ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಡಾ.ಸಿಎನ್ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವರು ವಿಡಿಯೋ ಹಂಚಿಕೊಂಡು ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಮೇ 24, 2024ರಂದು ಎಕ್ಸ್ ಮೂಲಕ ಪ್ರತಿಕ್ರಿಯೆ ಕೊಟ್ಟಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, “ಮಳೆ ಬರುತ್ತಿರುವಾಗ ಸಂಸ್ಥೆಯ ವಾಹನದ ಚಾಲಕರು ಕೊಡೆ ಹಿಡಿದುಕೊಂಡು ಚಾಲನೆ ಮಾಡುವ ವಿಡಿಯೋ (ಮನರಂಜನೆಗಾಗಿ ಮಾಡಿದ‌ ವಿಡಿಯೋ ಕುರಿತು) ಬಿಜೆಪಿಯವರು ಟ್ವೀಟ್ ಮಾಡಿ ಮಾಡಿ ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿರುವುದಕ್ಕೆ ಹಾಗೂ ಅವರ ಈ ಸಂತೋಷಕ್ಕೆ ಕಡಿವಾಣ ಹಾಕಬೇಕಾಗಿದೆಯಲ್ಲ‌ ಎಂಬ ನೋವಿನೊಂದಿಗೆ ಈ ವಿವರಣೆ ನೀಡಲಾಗುತ್ತಿದೆ.

“ಕೆಲವರಿಗೆ ಕಣ್ಣಿರುತ್ತದೆ. ಆದರೆ,‌ ನೋಡಲು ಸಾಧ್ಯವಾಗದ ಸ್ಥಿತಿ. ತಲೆ ಇರುತ್ತದೆ ಬುದ್ದಿಯನ್ನು ಸರಿಯಾಗಿ‌ ಉಪಯೋಗಿಸಲಾಗದ ಪರಿಸ್ಥಿತಿ. ಇವೆಲ್ಲವೂ ಅನ್ವಯಿಸುವುದು ಬಸನಗೌಡ ಪಾಟೀಲ್ ಯತ್ನಾಳ್, ಆರ್‌. ಅಶೋಕ್ ಮತ್ತು ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರಿಗೆ. ಬಿಜೆಪಿಯವರು ಕಣ್ಣು, ತಲೆ ಯಾವುದೂ ಸರಿಯಾಗಿ ಕನೆಕ್ಟ್ ಆಗದೆ‌ ಇರೋ ಪಂಡಿತ ಪುತ್ರರು ಎಂಬುವುದನ್ನು ಬಿಡಿಸಿ ಹೇಳಬೇಕಿಲ್ಲ. ಈ ವಿಡಿಯೋ‌ ನೋಡಿದರೆ ಚಾಲಕ ಹಿಡಿದಿರುವ ಕೊಡೆ ಮೇಲೆ ಒಂದೇ‌ ಒಂದು ಹನಿ‌ ನೀರು‌ ಕಾಣುತ್ತಿಲ್ಲ. ಅದನ್ನು ನೋಡುವ, ಯೋಚಿಸುವ ವ್ಯವಧಾನ, ಬುದ್ದಿಯಾದರೂ ಬೇಡವೇ ಇವರಿಗೆ ?”

“ಬಿಜೆಪಿ‌ ಅವಧಿಯಲ್ಲಿ‌ ರಾಜ್ಯದ ಸಾರಿಗೆ ಸಂಸ್ಥೆಗಳನ್ನು ರೂ.5,900 ಕೋಟಿ ಸಾಲದ ಸುಳಿಯಲ್ಲಿ ಮುಳುಗಿಸಿ ಹೋಗಿರುವ ಕೀರ್ತಿವಂತರು ಇವರು. ಅವರ ಅವಧಿಯಲ್ಲಿ ಹೊಸ‌ ಬಸ್ಸುಗಳ ಸೇರ್ಪಡೆಯಾಗಿಲ್ಲ. ಡಕೋಟ ಬಸ್ಸುಗಳನ್ನು‌ ಕಲ್ಪಿಸಿರುವ ಸಾಧನೆ ಅವರದ್ದೇ. ನೇಮಕಾತಿಯಂತೂ ಮರೀಚಿಕೆಯೇ‌ ಸರಿ. ನಮ್ಮ ಅವಧಿಯಲ್ಲಿ‌ ಹೊರಡಿಸಿದ್ದ ನೇಮಕಾತಿ ಪ್ರಕಟಣೆಗೂ ತಡೆ ನೀಡಿದ್ದ ಕೀರ್ತಿ ಬಿಜೆಪಿ‌ ಅವರಿಗೆ ಸಲ್ಲಬೇಕು. ನಮ್ಮ‌ ಸರ್ಕಾರ ಬಂದೊಡನೆ 5,800 ಹೊಸ‌ ಬಸ್ಸುಗಳ ಸೇರ್ಪಡೆಗೆ ಚಾಲನೆ ನೀಡಿದೆ.”

“ಬಿಜೆಪಿ ಅವಧಿಯಲ್ಲಿ ತಡೆ‌ ಹಿಡಿಯಲಾಗಿದ್ದ ನೇಮಕಾತಿಗೆ ಚಾಲನೆ‌ ನೀಡಲಾಗಿದೆ. 13,999 ಹುದ್ದೆಗಳು ಖಾಲಿಯಿದ್ದು, ತಾಂತ್ರಿಕ‌ ಸಿಬ್ಬಂದಿ ಹಾಗೂ ಚಾಲಕ ನಿರ್ವಾಹಕರಿಗೆ ನೇಮಕಾತಿ‌ ಪತ್ರವನ್ನು ವಿತರಿಸಲಾಗಿದೆ. ಇತರೆ ನೇಮಕಾತಿ ಪ್ರಕ್ರಿಯೆಗಳು ಜಾರಿಯಲ್ಲಿವೆ.”

“ಬಿಜೆಪಿಯವರು ಸಾರಿಗೆ ಸಂಸ್ಥೆಗಳಿಗೆ ದಯಪಾಲಿಸಿದ ದುರಂತ ಕಥೆಗಳನ್ನು‌ ಮತ್ತೊಮ್ಮೆ ಮಗದೊಮ್ಮೆ ನೆನಪಿಸಲು ನಮಗೆ ಅವರೇ ಅವಕಾಶ ಮಾಡಿಕೊಡುವುದರ ಹಿಂದಿನ‌ ಉದ್ದೇಶ, ನಮ್ಮ‌ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಪ್ರಚಾರ ನೀಡುವುದು ಎಂದಾದರೆ ನಮಗೇನು‌ ಅಭ್ಯಂತರವಿಲ್ಲ.”

“ಮುಂದುವರೆದು, ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಅದರನ್ವಯ, ದಿನಾಂಕ: 23-05-2024 ರಂದು ಧಾರವಾಡ ಘಟಕದ ವಾಹನ ಸಂಖ್ಯೆ ಕೆಎ-25 ಎಫ್-1336 ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಕಾರ್ಯಾಚರಿಸುತ್ತಿರುವಾಗ ವಾಹನದಲ್ಲಿ ಚಾಲಕರಾಗಿ ಶ್ರೀ ಹನುಮಂತಪ್ಪ ಅ ಕಿಲ್ಲೇದಾರ, ಬಿ.ಸಂ-1203 D ಹಾಗೂ ನಿರ್ವಾಹಕರಾಗಿ ಶ್ರೀಮತಿ ಅನಿತಾ ಹೆಚ್. ಬಿ ಸಂ-396 ರವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದ ಆ ಸಮಯದಲ್ಲಿ ಅಂದರೆ ಸುಮಾರು 16:30 ಕ್ಕೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಖಾಲಿ ಇದ್ದುದರಿಂದ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು, ಹಿಡಿದುಕೊಂಡು ವಾಹನ ಚಾಲನೆ ಮಾಡಿರುತ್ತಾರೆ. ಇದನ್ನು ಸದರಿ ನಿರ್ವಾಹಕಿಯು ವಿಡಿಯೋ ಚಿತ್ರೀಕರಣ ಮಾಡಿರುತ್ತಾರೆ.”

“ಆ ಸಮಯದಲ್ಲಿ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಾಗಲಿ ಸೋರಿಕೆ (Roof Leakage)ಇರಲಿಲ್ಲ . ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲು ಆಗಿರುವುದಿಲ್ಲ. ಸದರಿ ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿ ಮೇಲ್ಚಾವಣಿಯು ಸೋರದೆ ಇರುವುದನ್ನು ಖಚಿತಪಡಿಸಿಕೊಂಡಿರುತ್ತಾರೆ.”

“ಈ ರೀತಿಯ ಬೇಜಾವಬ್ದಾರಿತನದಿಂದ ವರ್ತಿಸಿ, ಸಂಸ್ಥೆಯ ಘನತೆಗೆ ಧಕ್ಕೆ ತಂದ ಚಾಲನಾ ಸಿಬ್ಬಂದಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.” ಎಂದು ತಿಳಿಸಿದ್ದಾರೆ.

“ಬಸ್‌ ಸೋರುತ್ತಿತ್ತು, ಚಾಲಕ ಕೊಡೆ ಹಿಡಿದು ಚಾಲನೆ ಮಾಡಿದ್ದಾರೆ” ಎಂದು ಸುದ್ದಿ ಪ್ರಕಟಿಸಿದ್ದ ಅದೇ ಮಾಧ್ಯಮಗಳು, ಸಾರಿಗೆ ಸಚಿವರ ಹೇಳಿಕೆ ಅನುಸರಿಸಿ ರೀಲ್ಸ್ ಮಾಡಿ ಕೆಲಸ ಕಳೆದುಕೊಂಡ ಚಾಲಕ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿವೆ.

ಆದರೆ, vijayapatha.in ಎಂಬ ಸುದ್ದಿ ವೆಬ್‌ಸೈಟ್‌ವೊಂದು “NWKRTC:ಮಳೆ ನೀರು ಮುಖಕ್ಕೆ ರಾಚುತ್ತಿದ್ದರೂ ಬಿಡದೆ ಬಸ್ ಓಡಿಸಿದ ಅಮಾಯಕ ಚಾಲಕ, ನಿರ್ವಾಹಕರನ್ನೇ ಅಮಾನತು ಮಾಡಿ ತಮ್ಮ ತಪ್ಪು ಮುಚ್ಚಿಕೊಂಡ ಡಿಸಿ ಚೆನ್ನಗೌಡರ್!!” ಎಂಬ ಶೀರ್ಷಿಕೆಯಲ್ಲಿ ಮೇ 25, 2024ರಂದು ಸುದ್ದಿ ಪ್ರಕಟಿಸಿದೆ. ಈ ಸುದ್ದಿಯಲ್ಲಿ “ಬಸ್‌ ಮುಂದಿನ ಗಾಜಿನಿಂದ ಚಾಲಕನ ಮುಖಕ್ಕೆ ಮಳೆ ನೀರು ಹೊಡೆಯುತ್ತಿತ್ತು. ಇದರಿಂದ ಚಾಲನೆ ಮಾಡಲು ಅವರಿಗೆ ಕಷ್ಟವಾಗಿತ್ತು. ಈ ಕಾರಣಕ್ಕೆ ಕೊಡೆ ಹಿಡಿದು ಬಸ್‌ ಓಡಿಸಿದ್ದಾರೆ. ಇದಕ್ಕೆ ಯಾರನ್ನು ಅಮಾನತು ಮಾಡಬೇಕು ಎಂಬುವುದನ್ನು ಉನ್ನತ ಅಧಿಕಾರಿಗಳು ನಿರ್ಧರಿಸಬೇಕಿತ್ತು. ಆದರೆ, ಇಲ್ಲಿ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಚಾಲಕ, ನಿರ್ವಾಹಕರನ್ನು ಅಮಾನತು ಮಾಡಿ ದರ್ಪ ಮೆರೆದಿದ್ದಾರೆ ಧಾರವಾಡ ಗ್ರಾಮಾಂತರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಚನ್ನಪ್ಪಗೌಡರ್” ಎಂದು ಹೇಳಿದೆ.

ನಾನು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಚಾಲಕನ ಎಡ ಬದಿಯ ಗೇರ್ ಬಾಕ್ಸ್ ಮೇಲೆ ನೀರು ಬಿದ್ದಿರುವುದು ಮತ್ತು ಹೊರಗಡೆ ಜೋರಾಗಿ ಮಳೆ ಸುರಿಯುತ್ತಿದ್ದುದು ಸ್ಪಷ್ಟವಾಗಿ ಕಾಣುತ್ತಿದೆ. ಇನ್ನು ಚಾಲಕ ಹಿಡಿದ ಕೊಡೆ ಮೇಲೆ ನೀರು ಇದೆಯೋ..ಇಲ್ಲವೋ ಎಂಬುವುದು ಸ್ಪಷ್ಟವಾಗಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಚಾಲಕ ಕೊಡೆ ಹಿಡಿದು ಬಸ್‌ ಓಡಿಸಿ ವಿಡಿಯೋ ಮಾಡಿರುವುದು ಮನೋರಂಜನೆಯ ಉದ್ದೇಶಕ್ಕೆ ಎಂದು ಸಚಿವರು ಹೇಳಿದರೆ, ಇತ್ತ ವಿಡಿಯೋದ ಕೆಲ ಅಂಶಗಳು ಮತ್ತು ಮಾಧ್ಯಮ ವರದಿ ವ್ಯತಿರಿಕ್ತವಾಗಿ ಕಾಣುತ್ತಿದೆ. ಹಾಗಾಗಿ, ಈ ಪ್ರಕರಣ ಗೊಂದಲಮಯವಾಗಿದೆ.

ಇದನ್ನೂ ಓದಿ : ಪರಿಷತ್ ಚುನಾವಣೆ: ಐವರು ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...