Homeಕರ್ನಾಟಕದ್ವೇಷ ಭಾಷಣ: ಪ್ರಧಾನಿ ಮೋದಿ ವಿರುದ್ದ ಬೆಂಗಳೂರಿನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು

ದ್ವೇಷ ಭಾಷಣ: ಪ್ರಧಾನಿ ಮೋದಿ ವಿರುದ್ದ ಬೆಂಗಳೂರಿನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು

- Advertisement -
- Advertisement -

ಮುಸ್ಲಿಮರನ್ನು ‘ನುಸುಳುಕೋರರು’ ಎಂದು ಕರೆದಿದಲ್ಲದೆ, ಕಾಂಗೆಸ್‌ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ” ಎಂದು ಪ್ರಚೋದನಾಕಾರಿ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ.

ಬೆಂಗಳೂರಿನ ಹೆಬ್ಬಾಳದ ನಿವಾಸಿ 32 ವರ್ಷದ ಝಿಯಾವುರಹ್ಮಾನ್ ನೊಮಾನಿ ಮೇ 23ರಂದು ಖಾಸಗಿ ದೂರು ಸಲ್ಲಿಸಿದ್ದು,”ಪ್ರಧಾನಿಯ ಭಾಷಣವು ಮುಸ್ಲಿಮರನ್ನು ನಿಂದಿಸುವಂತಿದೆ. ಈ ದೇಶದ ಸಂಪತ್ತನ್ನು ಲೂಟಿ ಹೊಡೆದ ನುಸುಳುಕೋರರಿಗೆ ಇಲ್ಲಿರುವ ಮುಸ್ಲಿಮರನ್ನು ಹೋಲಿಕೆ ಮಾಡುವಂತೆ ಉಳಿದ ಜನರನ್ನು ಪ್ರೇರೇಪಿಸುವಂತಿದೆ. ಹಾಗಾಗಿ, ಸಮಾಜದಲ್ಲಿ ದ್ವೇಷ ಹರಡಿದ, ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ಮೋದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

ಏಪ್ರಿಲ್ 21, 2024ರಂದು ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ, ಸಮಾಜ ಮತ್ತು ಧರ್ಮಗಳ ನಡುವೆ ದ್ವೇಷ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ಹಾಗೂ ಕ್ರಿಮಿನಲ್‌ ಪ್ರಚೋದನೆ ನೀಡುವ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳಾದ 153ಎ, 153ಬಿ, 295ಎ, 503, 504, 505(2) ಅಡಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಕರಣ ದಾಖಲಿಸಲು ಅಮೃತಹಳ್ಳಿ ಠಾಣಾ ಪೊಲೀಸರಿಗೆ ನಿರ್ದೇಶಿಸುವಂತೆ ಖಾಸಗಿ ದೂರಿನಲ್ಲಿ ಮನವಿ ಮಾಡಲಾಗಿದೆ.

ಪ್ರಧಾನಿ ಮೋದಿಯವರ ದ್ವೇಷ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲಾ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಕಂಡಿದ್ದು, ಇದು ಪ್ರಕರಣದಲ್ಲಿ ಸಾಕ್ಷಿಯಾಗಿರುವ ಆರ್‌ ಕಲೀಮುಲ್ಲಾ ಅವರ ಗಮನಕ್ಕೂ ಬಂದಿದೆ. ಹೀಗಾಗಿ, ಏಪ್ರಿಲ್‌ 26ರಂದು ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಅಮೃತಹಳ್ಳಿ ಪೊಲೀಸರು ಇದು ಭಾರತೀಯ ಚುನಾವಣಾ ಆಯೋಗದ ವ್ಯಾಪ್ತಿಗೆ ಒಳಪಡುವುದರಿಂದ ಎಫ್‌ಐಆರ್‌ ದಾಖಲಿಸಲಾಗದು ಎಂದು ಹಿಂಬರಹ ನೀಡಿದ್ದರು. ಇದಾದ ಬಳಿಕ ಏಪ್ರಿಲ್‌ 27ರಂದು ದೂರುದಾರ ನೊಮಾನಿ ಈಮೇಲ್‌ ಮೂಲಕ ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ಅಲ್ಲಿಂದಲೂ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆ ಮೇ 23ರಂದು ನ್ಯಾಯಾಲಯದ ಮೆಟ್ಟಿಲೇರಲಾಗಿದೆ ಎಂದು ಖಾಸಗಿ ದೂರಿನಲ್ಲಿ ವಿವರಿಸಲಾಗಿದೆ. ಪ್ರಕರಣದ ವಿಚಾರಣೆ ಮೇ 28ಕ್ಕೆ ನಿಗದಿಯಾಗಿದೆ.

ಏಪ್ರಿಲ್ 21ರಂದು ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದ್ದ ಬಿಜೆಪಿಯ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ, “ನಮ್ಮ ತಾಯಂದಿರು, ಸಹೋದರಿಯರ ಬಂಗಾರದ ಲೆಕ್ಕ ಹಾಕುವುದಾಗಿ, ಅದರ ಬಗ್ಗೆ ಮಾಹಿತಿ ಪಡೆಯುವುದಾಗಿ, ನಂತರ ಸಂಪತ್ತನ್ನು ಮರು ಹಂಚಿಕೆ ಮಾಡುವುದಾಗಿ ಕಾಂಗ್ರೆಸ್‌ ಪ್ರಣಾಳಿಕೆ ಹೇಳುತ್ತದೆ. ಅದನ್ನು ಯಾರಿಗೆ ಹಂಚುತ್ತಾರೆ? ಮುಸ್ಲಿಮರು ದೇಶದ ಸಂಪತ್ತಿನ ಮೊದಲ ಹಕ್ಕುದಾರರು ಎಂದು ಮನಮೋಹನ್‌ ಸಿಂಗ್‌ ಸರ್ಕಾರ ಹೇಳಿತ್ತು. ಅದರ ಅರ್ಥ, ಹೆಚ್ಚು ಮಕ್ಕಳಿರುವವರಿಗೆ ನಿಮ್ಮ ಸಂಪತ್ತು ಹಂಚಿಕೆಯಾಗುತ್ತದೆ. ನುಸುಳುಕೋರರಿಗೆ ನಿಮ್ಮ ಸಂಪತ್ತು ಹಂಚಿಕೆಯಾಗುತ್ತದೆ. ನೀವು ಕಷ್ಟದಿಂದ ಸಂಪಾದಿಸಿದ ಹಣ ನುಸುಳುಕೋರರ ಪಾಲಾಗಬೇಕೆ? ಅದಕ್ಕೆ ನಿಮ್ಮ ಒಪ್ಪಿಗೆ ಇದೆಯೇ? ಎಂದಿದ್ದರು.

ಇದನ್ನೂ ಓದಿ : ಒಬಿಸಿ ಪಟ್ಟಿಯಿಂದ 14 ಮುಸ್ಲಿಂ ಗುಂಪುಗಳನ್ನು ಕೈಬಿಡಲು ರಾಜಸ್ಥಾನ ಸರ್ಕಾರ ಚಿಂತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...