Homeಕರ್ನಾಟಕದ್ವೇಷ ಭಾಷಣ: ಪ್ರಧಾನಿ ಮೋದಿ ವಿರುದ್ದ ಬೆಂಗಳೂರಿನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು

ದ್ವೇಷ ಭಾಷಣ: ಪ್ರಧಾನಿ ಮೋದಿ ವಿರುದ್ದ ಬೆಂಗಳೂರಿನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು

- Advertisement -
- Advertisement -

ಮುಸ್ಲಿಮರನ್ನು ‘ನುಸುಳುಕೋರರು’ ಎಂದು ಕರೆದಿದಲ್ಲದೆ, ಕಾಂಗೆಸ್‌ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ” ಎಂದು ಪ್ರಚೋದನಾಕಾರಿ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ.

ಬೆಂಗಳೂರಿನ ಹೆಬ್ಬಾಳದ ನಿವಾಸಿ 32 ವರ್ಷದ ಝಿಯಾವುರಹ್ಮಾನ್ ನೊಮಾನಿ ಮೇ 23ರಂದು ಖಾಸಗಿ ದೂರು ಸಲ್ಲಿಸಿದ್ದು,”ಪ್ರಧಾನಿಯ ಭಾಷಣವು ಮುಸ್ಲಿಮರನ್ನು ನಿಂದಿಸುವಂತಿದೆ. ಈ ದೇಶದ ಸಂಪತ್ತನ್ನು ಲೂಟಿ ಹೊಡೆದ ನುಸುಳುಕೋರರಿಗೆ ಇಲ್ಲಿರುವ ಮುಸ್ಲಿಮರನ್ನು ಹೋಲಿಕೆ ಮಾಡುವಂತೆ ಉಳಿದ ಜನರನ್ನು ಪ್ರೇರೇಪಿಸುವಂತಿದೆ. ಹಾಗಾಗಿ, ಸಮಾಜದಲ್ಲಿ ದ್ವೇಷ ಹರಡಿದ, ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ಮೋದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

ಏಪ್ರಿಲ್ 21, 2024ರಂದು ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ, ಸಮಾಜ ಮತ್ತು ಧರ್ಮಗಳ ನಡುವೆ ದ್ವೇಷ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ಹಾಗೂ ಕ್ರಿಮಿನಲ್‌ ಪ್ರಚೋದನೆ ನೀಡುವ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳಾದ 153ಎ, 153ಬಿ, 295ಎ, 503, 504, 505(2) ಅಡಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಕರಣ ದಾಖಲಿಸಲು ಅಮೃತಹಳ್ಳಿ ಠಾಣಾ ಪೊಲೀಸರಿಗೆ ನಿರ್ದೇಶಿಸುವಂತೆ ಖಾಸಗಿ ದೂರಿನಲ್ಲಿ ಮನವಿ ಮಾಡಲಾಗಿದೆ.

ಪ್ರಧಾನಿ ಮೋದಿಯವರ ದ್ವೇಷ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲಾ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಕಂಡಿದ್ದು, ಇದು ಪ್ರಕರಣದಲ್ಲಿ ಸಾಕ್ಷಿಯಾಗಿರುವ ಆರ್‌ ಕಲೀಮುಲ್ಲಾ ಅವರ ಗಮನಕ್ಕೂ ಬಂದಿದೆ. ಹೀಗಾಗಿ, ಏಪ್ರಿಲ್‌ 26ರಂದು ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಅಮೃತಹಳ್ಳಿ ಪೊಲೀಸರು ಇದು ಭಾರತೀಯ ಚುನಾವಣಾ ಆಯೋಗದ ವ್ಯಾಪ್ತಿಗೆ ಒಳಪಡುವುದರಿಂದ ಎಫ್‌ಐಆರ್‌ ದಾಖಲಿಸಲಾಗದು ಎಂದು ಹಿಂಬರಹ ನೀಡಿದ್ದರು. ಇದಾದ ಬಳಿಕ ಏಪ್ರಿಲ್‌ 27ರಂದು ದೂರುದಾರ ನೊಮಾನಿ ಈಮೇಲ್‌ ಮೂಲಕ ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ಅಲ್ಲಿಂದಲೂ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆ ಮೇ 23ರಂದು ನ್ಯಾಯಾಲಯದ ಮೆಟ್ಟಿಲೇರಲಾಗಿದೆ ಎಂದು ಖಾಸಗಿ ದೂರಿನಲ್ಲಿ ವಿವರಿಸಲಾಗಿದೆ. ಪ್ರಕರಣದ ವಿಚಾರಣೆ ಮೇ 28ಕ್ಕೆ ನಿಗದಿಯಾಗಿದೆ.

ಏಪ್ರಿಲ್ 21ರಂದು ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದ್ದ ಬಿಜೆಪಿಯ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದ ಪ್ರಧಾನಿ ಮೋದಿ, “ನಮ್ಮ ತಾಯಂದಿರು, ಸಹೋದರಿಯರ ಬಂಗಾರದ ಲೆಕ್ಕ ಹಾಕುವುದಾಗಿ, ಅದರ ಬಗ್ಗೆ ಮಾಹಿತಿ ಪಡೆಯುವುದಾಗಿ, ನಂತರ ಸಂಪತ್ತನ್ನು ಮರು ಹಂಚಿಕೆ ಮಾಡುವುದಾಗಿ ಕಾಂಗ್ರೆಸ್‌ ಪ್ರಣಾಳಿಕೆ ಹೇಳುತ್ತದೆ. ಅದನ್ನು ಯಾರಿಗೆ ಹಂಚುತ್ತಾರೆ? ಮುಸ್ಲಿಮರು ದೇಶದ ಸಂಪತ್ತಿನ ಮೊದಲ ಹಕ್ಕುದಾರರು ಎಂದು ಮನಮೋಹನ್‌ ಸಿಂಗ್‌ ಸರ್ಕಾರ ಹೇಳಿತ್ತು. ಅದರ ಅರ್ಥ, ಹೆಚ್ಚು ಮಕ್ಕಳಿರುವವರಿಗೆ ನಿಮ್ಮ ಸಂಪತ್ತು ಹಂಚಿಕೆಯಾಗುತ್ತದೆ. ನುಸುಳುಕೋರರಿಗೆ ನಿಮ್ಮ ಸಂಪತ್ತು ಹಂಚಿಕೆಯಾಗುತ್ತದೆ. ನೀವು ಕಷ್ಟದಿಂದ ಸಂಪಾದಿಸಿದ ಹಣ ನುಸುಳುಕೋರರ ಪಾಲಾಗಬೇಕೆ? ಅದಕ್ಕೆ ನಿಮ್ಮ ಒಪ್ಪಿಗೆ ಇದೆಯೇ? ಎಂದಿದ್ದರು.

ಇದನ್ನೂ ಓದಿ : ಒಬಿಸಿ ಪಟ್ಟಿಯಿಂದ 14 ಮುಸ್ಲಿಂ ಗುಂಪುಗಳನ್ನು ಕೈಬಿಡಲು ರಾಜಸ್ಥಾನ ಸರ್ಕಾರ ಚಿಂತನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...