Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

- Advertisement -
- Advertisement -

ಶನಿವಾರ (ಮೇ 25) ನಡೆದ ಲೋಕಸಭೆ ಚುನಾವಣೆ- 2024ರ 6ನೇ ಹಂತದ ಮತದಾನದಲ್ಲಿ ತಮ್ಮ ಹಕ್ಕು ಚಲಾಯಿಸಿದ್ದ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಮ್ಮ ಸೆಲ್ಫಿ ಹಂಚಿಕೊಂಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯ ಸೆಲ್ಫಿಯಲ್ಲಿ, ಅವರ ಹಿಂಬದಿ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ ರೀತಿಯ ಪೈಂಟಿಂಗ್ ಒಂದು ಕಾಣಿಸಿದೆ. ಈ ಪೈಂಟಿಂಗ್ ಮುಂದಿಟ್ಟುಕೊಂಡು ಹಲವರು ರಾಹುಲ್ ಗಾಂಧಿಯನ್ನು ಧಾರ್ಮಿಕವಾಗಿ ಟೀಕಿಸಿದ್ದಾರೆ.

ಸದಾ ಸುಳ್ಳು ಪೋಸ್ಟ್‌ಗಳನ್ನು ಹಾಕುವಲ್ಲಿ ಪ್ರಸಿದ್ದಿ ಪಡೆದಿರುವ ಬಲಪಂಥೀಯ ಎಕ್ಸ್ ಬಳಕೆದಾರ MrSinha (mrsinha)ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯ ಸೆಲ್ಫಿ ಹಂಚಿಕೊಂಡು ” ಜನಿವಾರದಾರಿ ಬ್ರಾಹ್ಮಣ ರಾಹುಲ್ ಗಾಂಧಿಯ ಕೋಣೆಯಲ್ಲಿ ಏಸು ಕ್ರಿಸ್ತನ ಚಿತ್ರವಿದೆ. ಆದರೆ, ಯಾವುದೇ ಹಿಂದೂ ದೇವರುಗಳ ಚಿತ್ರಗಳಿಲ್ಲ” ಎಂದು ಬರೆದುಕೊಂಡಿದ್ದಾರೆ.

Vijay Patel(@vijaygajera) ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ ಅದೇ ಸೆಲ್ಫಿ ಹಂಚಿಕೊಂಡು ” ಬ್ರಾಹ್ಮಣ ರಾಹುಲ್ ಗಾಂಧಿಯ ಕೋಣೆಯಲ್ಲಿ ಕ್ರೈಸ್ತ ಧರ್ಮದ ಫೋಟೋ ಇದೆ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಅಸಲಿಗೆ ರಾಹುಲ್ ಗಾಂಧಿಯ ಸೆಲ್ಫಿಯಲ್ಲಿ ಹಿಂಬದಿ ಕಂಡು ಬಂದ ಚಿತ್ರ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದಲ್ಲ. ಅದು “ರಷ್ಯಾದ ವರ್ಣಚಿತ್ರಕಾರ ನಿಕೋಲಸ್ ರೋರಿಚ್ ಅವರು ರಚಿಸಿರುವ ‘ಮಡೋನಾ ಒರಿಫ್ಲಾಮಾ‘ ಎಂಬ ಶೀರ್ಷಿಕೆಯ ಚಿತ್ರವಾಗಿದೆ. ಚಿತ್ರದಲ್ಲಿರುವ ಮಹಿಳೆ ಶಾಂತಿಯ ಸಂದೇಶ ಸಾರುವ ಬ್ಯಾನರ್ ಹಿಡಿದಿದ್ದಾಳೆ”.

svdejala.blogspot.com ಎಂಬ ಬ್ಲಾಗ್ ಪೋಸ್ಟ್‌ನಲ್ಲಿ ಆಗಸ್ಟ್ 8, 2017ರಂದು ಈ ಕುರಿತು ಮಾಹಿತಿ ಪ್ರಕಟಿಸಿಲಾಗಿದೆ. ಅದರಲ್ಲಿ ಹೇಳಿರುವ ಪ್ರಕಾರ, ಈ ಚಿತ್ರವನ್ನು ನಿಕೋಲಸ್ ರೋರಿಚ್ ಅವರು 1932 ರಲ್ಲಿ ರಚಿಸಿದ್ದಾರೆ. ಚಿತ್ರದಲ್ಲಿ ಮಹಿಳೆ ಹಿಡಿದಿರುವ ಮೂರು ಚುಕ್ಕೆಗಳಿರುವ ಬ್ಯಾನರ್ ಅನ್ನು ‘ಬ್ಯಾನರ್ ಆಫ್ ಪೀಸ್’ (Banner of peace)ಎಂದು ಕರೆಯಲಾಗುತ್ತದೆ.

ಗೂಗಲ್‌ನಲ್ಲಿ ‘ಮಡೋನಾ ಒರಿಫ್ಲಾಮಾ’ (Madonna Oriflamma) ಎಂದು ಹುಡುಕಿದರೆ ಚಿತ್ರದ ಕುರಿತು ಸಾಕಷ್ಟು ಮಾಹಿತಿ ಲಭ್ಯವಿದೆ.

ವಿಕಿಆರ್ಟ್ ಪುಟದಲ್ಲಿ 2013 ರಲ್ಲಿ ಕೊನೆಯದಾಗಿ ಅಪ್ಡೇಟ್ ಮಾಡಲಾದ ಮಾಹಿತಿಯ ಪ್ರಕಾರ, ಈ ಚಿತ್ರವನ್ನು ನ್ಯೂಯಾರ್ಕ್‌ನ ನಿಕೋಲಸ್ ರೋರಿಚ್ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕಿಡಲಾಗಿದೆ ಎಂದಿದೆ.

ನಿಕೋಲಸ್ ರೋರಿಚ್ ಮ್ಯೂಸಿಯಂನ ಫೇಸ್‌ಬುಕ್ ಪುಟದಲ್ಲಿ 2021 ರಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ರಾಹುಲ್ ಗಾಂಧಿಯ ಸೆಲ್ಫಿಯಲ್ಲಿ ಹಿಂಬದಿ ಕಾಣುತ್ತಿರುವ ಚಿತ್ರ ಏಸು ಕ್ರಿಸ್ತರದ್ದೋ, ಮೇರಿ ಮಾತೆಯದ್ದೋ ಅಲ್ಲ. ಅದು ಶಾಂತಿಯ ಸಂದೇಶ ಸಾರುವ ‘ಮಡೋನಾ ಒರಿಫ್ಲಾಮಾ’ ಚಿತ್ರ ಎಂಬುವುದು ಗೊತ್ತಾಗಿದೆ. ಹಾಗಾಗಿ, ಎಕ್ಸ್ ಬಳಕೆದಾರರು ಮಾಡಿರುವ ಪ್ರತಿಪಾದನೆ ಸುಳ್ಳು.

ಇದನ್ನೂ ಓದಿ : FACT CHECK : ಭಾರತದ ತ್ರಿವರ್ಣ ಧ್ವಜದ ಮೇಲೆ ವಾಹನ ಚಲಾಯಿಸಿದ ದೃಶ್ಯ ಕೇರಳದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...