Homeಮುಖಪುಟಮಧ್ಯ ಪ್ರದೇಶ: ಧ್ವನಿ ಬದಲಿಸುವ ಆ್ಯಪ್‌ನಿಂದ ಶಿಕ್ಷಕಿಯಂತೆ ಮಾತನಾಡಿ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಮಧ್ಯ ಪ್ರದೇಶ: ಧ್ವನಿ ಬದಲಿಸುವ ಆ್ಯಪ್‌ನಿಂದ ಶಿಕ್ಷಕಿಯಂತೆ ಮಾತನಾಡಿ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಸಂತ್ರಸ್ತೆಯರ ಪೈಕಿ ಬಹುತೇಕರು ಬುಡಕಟ್ಟು ಸಮುದಾಯದವರು ಎಂದು ವರದಿಗಳು ಹೇಳಿವೆ. 

- Advertisement -
- Advertisement -

ವ್ಯಕ್ತಿಯೊಬ್ಬ ಧ್ವನಿ ಬದಲಾಯಿಸುವ ಆ್ಯಪ್ ಬಳಸಿ, ಶಿಕ್ಷಕಿಯಂತೆ ಬಿಂಬಿಸಿಕೊಂಡು ಏಳು ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯರ ಪೈಕಿ ಬಹುತೇಕರು ಬುಡಕಟ್ಟು ಸಮುದಾಯದವರು ಎಂದು ವರದಿಗಳು ಹೇಳಿವೆ.

ಪ್ರಕರಣ ಸಂಬಂಧ ಪೊಲೀಸರು 30 ವರ್ಷದ ಕಾರ್ಮಿಕ ಬ್ರಜೇಶ್ ಪ್ರಜಾಪತಿ ಮತ್ತು ಆತನ ಮೂವರು ಸಹಚರರನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಆದೇಶದ ಮೇರೆಗೆ ರಚಿಸಲಾದ ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ.

ಐವರು ಸಂತ್ರಸ್ತೆಯರನ್ನು ಒಳಗೊಂಡ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಪೈಕಿ ನಾಲ್ವರು ಅತ್ಯಾಚಾರಕ್ಕೊಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿಯರಲ್ಲಿ ಒಬ್ಬಳು ಅಪ್ರಾಪ್ತೆ ಎಂದು ಸಿಧಿಯ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ಹೇಳಿದ್ದಾರೆ.

ಸಿಧಿಯ ಮಜೌಲಿ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್‌ಗಳಾದ 376 (2) (ಎನ್‌), 354,506,342,366, ಮತ್ತು 294ರ ಅಡಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಸಂಬಂಧಿಸಿದ ಪ್ರಕರಣದಲ್ಲಿ 2012ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 3/4 ಅನ್ನು ಅನ್ವಯಿಸಲಾಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ನಾಲ್ವರು ಬುಡಕಟ್ಟು ವಿದ್ಯಾರ್ಥಿನಿಯರಲ್ಲದೆ, ಇತರ ಮೂವರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಎಸ್‌ಐಟಿಯ ಭಾಗವಾಗಿರುವ ಮಜೌಲಿ ಪೊಲೀಸ್ ಠಾಣೆಯ ಉಸ್ತುವಾರಿ ದೀಪಕ್ ಬಾಘೇಲ್ ಹೇಳಿದ್ದಾರೆ.

ಬ್ರಜೇಶ್ ಪ್ರಜಾಪತಿ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದು, ಸಂದೀಪ್ ಪ್ರಜಾಪತಿ, ರಾಹುಲ್ ಪ್ರಜಾಪತಿ, ಮತ್ತು ಲವ್ಕುಶ್ ಪ್ರಜಾಪತಿ ಆತನಿಗೆ ಸಹಾಯ ಮಾಡಿದ್ದಾರೆ ಎಂದು ಎಸ್‌ಐಟಿಯ ನೇತೃತ್ವ ವಹಿಸಿರುವ ಡಿಎಸ್‌ಪಿ ರೋಶ್ನಿ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಅತ್ಯಾಚಾರದ ಬಳಿಕ ಆರೋಪಿಗಳು ವಿದ್ಯಾರ್ಥಿನಿಯರಿಂದ ಮೊಬೈಲ್ ಫೋನ್ ಸೇರಿದಂತೆ ಇತರೆ ಬೆಲೆಬಾಳುವ ವಸ್ತುಗಳನ್ನು ಕಿತ್ತುಕೊಂಡು ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 16 ಮೊಬೈಲ್ ಫೋನ್‌ಗಳು ಮತ್ತು ಹಲವಾರು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಠಾಕೂರ್ ಹೇಳಿದ್ದಾರೆ.

ಪ್ರಕರಣದ ವಿವರಣೆ: ಆರೋಪಿಗಳಲ್ಲಿ ಒಬ್ಬನಾದ ಲವ್ಕುಶ್ ಪ್ರಜಾಪತಿ ಎರಡು ವರ್ಷಗಳ ಹಿಂದೆಯಷ್ಟೆ ಪದವಿ ಮುಗಿಸಿದ್ದ. ಆದ್ದರಿಂದ ಆತ ವಿದ್ಯಾರ್ಥಿಗಳ ವಾಟ್ಸಾಪ್ ಗುಂಪಿನಲ್ಲಿದ್ದ. ಅಲ್ಲಿಂದ ಒಬ್ಬಳು ವಿದ್ಯಾರ್ಥಿನಿಯ ಫೋನ್ ನಂಬರ್ ಅನ್ನು ಪ್ರಮುಖ ಆರೋಪಿ ಬ್ರಜೇಶ್ ಪ್ರಜಾಪತಿಗೆ ನೀಡಿದ್ದ. ಆತ ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಿಕೊಂಡಿದ್ದ. ಬಳಿಕ ಆ ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಇತರ ವಿದ್ಯಾರ್ಥಿನಿಯರ ನಂಬರ್ ಪಡೆದುಕೊಂಡಿದ್ದ.

ಯೂಟ್ಯೂಬ್ ನೋಡಿ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಗ್ಗೆ ತಿಳಿದುಕೊಂಡಿದ್ದ ಬ್ರಜೇಶ್ ಪ್ರಜಾಪತಿ, ಆ ಆ್ಯಪ್ ಅನ್ನು ತನ್ನ ಮೊಬೈಲ್‌ನಲ್ಲಿ ಡೌನ್ಲೋಡ್‌ ಮಾಡಿಕೊಂಡಿದ್ದ. ಅದರ ಸಹಾಯದಿಂದ ಮಹಿಳೆಯರಂತೆ ಧ್ವನಿ ಬದಲಾಯಿಸಿ ವಿದ್ಯಾರ್ಥಿನಿಯರಿಗೆ ಕರೆ ಮಾಡುತ್ತಿದ್ದ. ತನ್ನನ್ನು ತಾನು ‘ರಂಜನಾ ಮೇಡಂ ಎಂದು ಹೇಳಿಕೊಂಡಿದ್ದ. 18 ವರ್ಷದ ಕಳೆದ ವಿದ್ಯಾರ್ಥಿನಿಯರಿಗೆ ಕರೆ ಮಾಡಿ ಸರ್ಕಾರದಿಂದ ಸ್ಕಾಲರ್ ಶಿಪ್ ಇದೆ ಎಂದು ತನ್ನ ಬಳಿಗೆ ಕರೆಸಿಕೊಳ್ಳುತ್ತಿದ್ದ. ತನ್ನ ಬಳಿಗೆ ಬಂದ ವಿದ್ಯಾರ್ಥಿನಿಯರಿಗೆ ತಾನು ರಂಜನಾ ಮೇಡಂ ಮಗ ಎಂದು ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಅಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ. ವಿದ್ಯಾರ್ಥಿನಿಯರ ಮುಖತಃ ಭೇಟಿಯ ವೇಳೆ ಆರೋಪಿ ಬಟ್ಟೆ ಅಥವಾ ಹೆಲ್ಮೆಟ್‌ನಿಂದ ಮುಖ ಮುಚ್ಚಿಕೊಳ್ಳುತ್ತಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ : ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗೆ ಗೃಹ ಬಂಧನ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...