Homeದಲಿತ್ ಫೈಲ್ಸ್ಸಹೋದರ, ಚಿಕ್ಕಪ್ಪ ಹತ್ಯೆಗೀಡಾದ ಬಳಿಕ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು...

ಸಹೋದರ, ಚಿಕ್ಕಪ್ಪ ಹತ್ಯೆಗೀಡಾದ ಬಳಿಕ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು ಅನುಮಾನ!

- Advertisement -
- Advertisement -

ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಸಾವನ್ನಪ್ಪಿದ ಘಟನೆ ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದ್ದು, ಸಾವಿನ ಸುತ್ತ ಹಲವು ರೀತಿಯ ಅನುಮಾನ ವ್ಯಕ್ತವಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಯುವತಿಯ ಸಹೋದರನನ್ನು ಥಳಿಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಂಜನಾ ಅಹಿರ್ವಾರ್ ಮೃತ ಯುವತಿ. ಈಕೆ, ಭಾನುವಾರ (ಮೇ 26) ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಹಲ್ಲೆಗೀಡಾಗಿ ಸಾವನ್ನಪ್ಪಿದ ಚಿಕ್ಕಪ್ಪನ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದಳು. ಮಾರ್ಗಮಧ್ಯೆ ಆಂಬ್ಯುಲೆನ್ಸ್‌ನಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾಳೆ ಎಂದು ವರದಿ ಹೇಳಿದೆ.

ಮೃತಳ ಸಹೋದರನನ್ನು ಹೊಡೆದು ಸಾಯಿಸಲಾಗಿತ್ತು!

ಕಿರುಕುಳ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದ ಕೆಲವರು ತನ್ನ ಸಹೋದರನನ್ನು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಅಂಜನಾ ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಅಂಜನಾ ಅವರ ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಅವರನ್ನು ಕೆಲವರು ಹೊಡೆದು ಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚಿಕ್ಕಪ್ಪನಿಗೂ ಥಳಿಸಿ ಹತ್ಯೆ

ಸಾಗರ್ ಜಿಲ್ಲೆಯ ಖುರೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವತಿಯ ಚಿಕ್ಕಪ್ಪ 24 ವರ್ಷದ ರಾಜೇಂದ್ರ ಅಹಿರ್ವಾರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಸಿನ್ಹಾ ತಿಳಿಸಿದ್ದಾರೆ.

ತನಗೆ ಕಿರುಕುಳ ನೀಡುತ್ತಿದ್ದ ಕೆಲವರು ಆಗಸ್ಟ್ 24, 2023ರಂದು ತನ್ನ ಸಹೋದರ ನಿತಿನ್ ಅಹಿರ್ವಾರ್ ಅಲಿಯಾಸ್ ಲಾಲು ಅವರನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಅಂಜನಾ ಆರೋಪಿಸಿದ್ದರು. ಘಟನೆ ಬೆಳಕಿಗೆ ಬಂದ ನಂತರ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಬರೋಡಿಯಾ ನೊನಾಗಿರ್ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದರು.

ಮೃತ ಅಂಜನಾ ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯ ನಂತರ ಅವರ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ ಆಂಬ್ಯುಲೆನ್ಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ನಡೆಯುವಾಗ ಅಂಬ್ಯುಲೆನ್ಸ್ ಚಾಲಕ ಮತ್ತು ರಾಜೇಂದ್ರ ಅಹಿರ್ವಾರ್ ಅವರ ಕುಟುಂಬದ ಸದಸ್ಯರು ಮೃತದೇಹದ ಜೊತೆಗಿದ್ದರು ಎಂದು ಎಸಿಪಿ ಸಿನ್ಹಾ ಹೇಳಿದ್ದಾರೆ.

ಹಳೆಯ ಪ್ರಕರಣವನ್ನು ಇತ್ಯರ್ಥಪಡಿಸಲು ಒತ್ತಾಯಿಸಿ ರಾಜೇಂದ್ರ ಅಹಿರ್ವಾರ್ ಅವರನ್ನು ಕೊಲೆ ಮಾಡಲಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಎಸಿಪಿ, ತನಿಖೆಯಿಂದ ಎಲ್ಲಾ ಸತ್ಯಗಳು ಬಹಿರಂಗಗೊಳ್ಳಲಿವೆ ಎಂದು ಹೇಳಿದ್ದಾರೆ.

ರಾಜೇಂದ್ರ ಅಹಿರ್ವಾರ್ ಮೇಲೆ ಐವರು ದಾಳಿ ನಡೆಸಿದ್ದಾರೆ ಎಂದ ಕಾಂಗ್ರೆಸ್ ರಾಜ್ಯಾಧ್ಯಕ್ಷ

ಘಟನೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತೇಂದ್ರ ಪಟ್ವಾರಿ, “ರಾಜೇಂದ್ರ ಅಹಿರ್ವಾರ್ ಮೇಲೆ ಹಳೆಯ ಪ್ರಕರಣವನ್ನು ಇತ್ಯರ್ಥಕ್ಕೆ ಒತ್ತಾಯಿಸಿ ಐವರು ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ. ಬಾಲಕಿ ಅಂಜನಾ ಅಂಬ್ಯುಲೆನ್ಸ್‌ನಿಂದ ಬೀಳುವಾಗ ಅದರಲ್ಲಿ ಚಾಲಕ, ಅಂಜನಾ ಅಹಿರ್ವಾರ್ ಮತ್ತು ರಾಜೇಂದ್ರ ಅವರ ಪೋಷಕರು ಇದ್ದರು ಎಂದು ತಿಳಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಬರೋಡಿಯಾ ನೊನಾಗಿರ್‌ನಲ್ಲಿ ಅಂಜನಾಳ ಸಹೋದರನನ್ನು ಸಾರ್ವಜನಿಕವಾಗಿ ಹತ್ಯೆ ಮಾಡಲಾಗಿತ್ತು. ಆಕೆಯ ಕುಟುಂಬ ಇನ್ನೂ ನ್ಯಾಯಕ್ಕಾಗಿ ಕಾಯುತ್ತಿದೆ ಎಂದಿರುವ ಜಿತೇಂದ್ರ ಪಟ್ವಾರಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅವರೇ ಗೃಹ ಇಲಾಖೆ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ ಎಂದಿದ್ದಾರೆ.

ಮಧ್ಯಪ್ರದೇಶದಲ್ಲಿ ದಲಿತನಾಗಿರುವುದು ಈಗ ಅಪರಾಧವಾಗಿದೆಯೇ? ಬುಡಕಟ್ಟು ಜನಾಂಗದ ದೌರ್ಜನ್ಯದಲ್ಲಿ ಮೊದಲ ಸ್ಥಾನದಲ್ಲಿರುವ ರಾಜ್ಯ, ದಲಿತ ದೌರ್ಜನ್ಯದಲ್ಲೂ ಉದಾಹರಣೆಯಾಗಬೇಕೆ? ಎಂದು ಪ್ರಶ್ನಿಸಿದ್ದಾರೆ.

ಖುರೈ ಬೈಪಾಸ್‌ನಲ್ಲಿ ಅಂಬ್ಯುಲೆನ್ಸ್‌ನಿಂದ ಬಿದ್ದು ಅಂಜನಾ ಅಹಿರ್ವಾರ್ ಸಾವು

ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಹತ್ಯೆಗೀಡಾದ ಖುರೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಅಂಜನಾ ಅಂಬ್ಯುಲೆನ್ಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ. ಅಂಜನಾಳದ್ದು ಆಕಸ್ಮಿಕ ಸಾವ? ಇಲ್ಲ ಆಕೆಯನ್ನೂ ಹತ್ಯೆ ಮಾಡಲಾಗಿದೆಯಾ? ಎಂಬುವುದು ತನಿಖೆಯಿಂದ ಬಯಲಾಗಬೇಕಿದೆ.

ಇದನ್ನೂ ಓದಿ : ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...