Homeದಲಿತ್ ಫೈಲ್ಸ್ಸಹೋದರ, ಚಿಕ್ಕಪ್ಪ ಹತ್ಯೆಗೀಡಾದ ಬಳಿಕ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು...

ಸಹೋದರ, ಚಿಕ್ಕಪ್ಪ ಹತ್ಯೆಗೀಡಾದ ಬಳಿಕ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಮೃತ್ಯು: ಸಾವಿನ ಸುತ್ತ ಹಲವು ಅನುಮಾನ!

- Advertisement -
- Advertisement -

ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನಿಂದ ಬಿದ್ದು ದಲಿತ ಯುವತಿ ಸಾವನ್ನಪ್ಪಿದ ಘಟನೆ ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದ್ದು, ಸಾವಿನ ಸುತ್ತ ಹಲವು ರೀತಿಯ ಅನುಮಾನ ವ್ಯಕ್ತವಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಯುವತಿಯ ಸಹೋದರನನ್ನು ಥಳಿಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಂಜನಾ ಅಹಿರ್ವಾರ್ ಮೃತ ಯುವತಿ. ಈಕೆ, ಭಾನುವಾರ (ಮೇ 26) ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಹಲ್ಲೆಗೀಡಾಗಿ ಸಾವನ್ನಪ್ಪಿದ ಚಿಕ್ಕಪ್ಪನ ಶವವನ್ನು ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದಳು. ಮಾರ್ಗಮಧ್ಯೆ ಆಂಬ್ಯುಲೆನ್ಸ್‌ನಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾಳೆ ಎಂದು ವರದಿ ಹೇಳಿದೆ.

ಮೃತಳ ಸಹೋದರನನ್ನು ಹೊಡೆದು ಸಾಯಿಸಲಾಗಿತ್ತು!

ಕಿರುಕುಳ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳುವಂತೆ ಒತ್ತಡ ಹೇರುತ್ತಿದ್ದ ಕೆಲವರು ತನ್ನ ಸಹೋದರನನ್ನು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಅಂಜನಾ ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಅಂಜನಾ ಅವರ ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಅವರನ್ನು ಕೆಲವರು ಹೊಡೆದು ಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚಿಕ್ಕಪ್ಪನಿಗೂ ಥಳಿಸಿ ಹತ್ಯೆ

ಸಾಗರ್ ಜಿಲ್ಲೆಯ ಖುರೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವತಿಯ ಚಿಕ್ಕಪ್ಪ 24 ವರ್ಷದ ರಾಜೇಂದ್ರ ಅಹಿರ್ವಾರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಸಿನ್ಹಾ ತಿಳಿಸಿದ್ದಾರೆ.

ತನಗೆ ಕಿರುಕುಳ ನೀಡುತ್ತಿದ್ದ ಕೆಲವರು ಆಗಸ್ಟ್ 24, 2023ರಂದು ತನ್ನ ಸಹೋದರ ನಿತಿನ್ ಅಹಿರ್ವಾರ್ ಅಲಿಯಾಸ್ ಲಾಲು ಅವರನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಅಂಜನಾ ಆರೋಪಿಸಿದ್ದರು. ಘಟನೆ ಬೆಳಕಿಗೆ ಬಂದ ನಂತರ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಬರೋಡಿಯಾ ನೊನಾಗಿರ್ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದರು.

ಮೃತ ಅಂಜನಾ ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯ ನಂತರ ಅವರ ಗ್ರಾಮಕ್ಕೆ ಕೊಂಡೊಯ್ಯುತ್ತಿದ್ದರು. ಈ ವೇಳೆ ಆಂಬ್ಯುಲೆನ್ಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ನಡೆಯುವಾಗ ಅಂಬ್ಯುಲೆನ್ಸ್ ಚಾಲಕ ಮತ್ತು ರಾಜೇಂದ್ರ ಅಹಿರ್ವಾರ್ ಅವರ ಕುಟುಂಬದ ಸದಸ್ಯರು ಮೃತದೇಹದ ಜೊತೆಗಿದ್ದರು ಎಂದು ಎಸಿಪಿ ಸಿನ್ಹಾ ಹೇಳಿದ್ದಾರೆ.

ಹಳೆಯ ಪ್ರಕರಣವನ್ನು ಇತ್ಯರ್ಥಪಡಿಸಲು ಒತ್ತಾಯಿಸಿ ರಾಜೇಂದ್ರ ಅಹಿರ್ವಾರ್ ಅವರನ್ನು ಕೊಲೆ ಮಾಡಲಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಎಸಿಪಿ, ತನಿಖೆಯಿಂದ ಎಲ್ಲಾ ಸತ್ಯಗಳು ಬಹಿರಂಗಗೊಳ್ಳಲಿವೆ ಎಂದು ಹೇಳಿದ್ದಾರೆ.

ರಾಜೇಂದ್ರ ಅಹಿರ್ವಾರ್ ಮೇಲೆ ಐವರು ದಾಳಿ ನಡೆಸಿದ್ದಾರೆ ಎಂದ ಕಾಂಗ್ರೆಸ್ ರಾಜ್ಯಾಧ್ಯಕ್ಷ

ಘಟನೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿತೇಂದ್ರ ಪಟ್ವಾರಿ, “ರಾಜೇಂದ್ರ ಅಹಿರ್ವಾರ್ ಮೇಲೆ ಹಳೆಯ ಪ್ರಕರಣವನ್ನು ಇತ್ಯರ್ಥಕ್ಕೆ ಒತ್ತಾಯಿಸಿ ಐವರು ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ. ಬಾಲಕಿ ಅಂಜನಾ ಅಂಬ್ಯುಲೆನ್ಸ್‌ನಿಂದ ಬೀಳುವಾಗ ಅದರಲ್ಲಿ ಚಾಲಕ, ಅಂಜನಾ ಅಹಿರ್ವಾರ್ ಮತ್ತು ರಾಜೇಂದ್ರ ಅವರ ಪೋಷಕರು ಇದ್ದರು ಎಂದು ತಿಳಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಬರೋಡಿಯಾ ನೊನಾಗಿರ್‌ನಲ್ಲಿ ಅಂಜನಾಳ ಸಹೋದರನನ್ನು ಸಾರ್ವಜನಿಕವಾಗಿ ಹತ್ಯೆ ಮಾಡಲಾಗಿತ್ತು. ಆಕೆಯ ಕುಟುಂಬ ಇನ್ನೂ ನ್ಯಾಯಕ್ಕಾಗಿ ಕಾಯುತ್ತಿದೆ ಎಂದಿರುವ ಜಿತೇಂದ್ರ ಪಟ್ವಾರಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅವರೇ ಗೃಹ ಇಲಾಖೆ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ ಎಂದಿದ್ದಾರೆ.

ಮಧ್ಯಪ್ರದೇಶದಲ್ಲಿ ದಲಿತನಾಗಿರುವುದು ಈಗ ಅಪರಾಧವಾಗಿದೆಯೇ? ಬುಡಕಟ್ಟು ಜನಾಂಗದ ದೌರ್ಜನ್ಯದಲ್ಲಿ ಮೊದಲ ಸ್ಥಾನದಲ್ಲಿರುವ ರಾಜ್ಯ, ದಲಿತ ದೌರ್ಜನ್ಯದಲ್ಲೂ ಉದಾಹರಣೆಯಾಗಬೇಕೆ? ಎಂದು ಪ್ರಶ್ನಿಸಿದ್ದಾರೆ.

ಖುರೈ ಬೈಪಾಸ್‌ನಲ್ಲಿ ಅಂಬ್ಯುಲೆನ್ಸ್‌ನಿಂದ ಬಿದ್ದು ಅಂಜನಾ ಅಹಿರ್ವಾರ್ ಸಾವು

ಚಿಕ್ಕಪ್ಪ ರಾಜೇಂದ್ರ ಅಹಿರ್ವಾರ್ ಹತ್ಯೆಗೀಡಾದ ಖುರೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಅಂಜನಾ ಅಂಬ್ಯುಲೆನ್ಸ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ. ಅಂಜನಾಳದ್ದು ಆಕಸ್ಮಿಕ ಸಾವ? ಇಲ್ಲ ಆಕೆಯನ್ನೂ ಹತ್ಯೆ ಮಾಡಲಾಗಿದೆಯಾ? ಎಂಬುವುದು ತನಿಖೆಯಿಂದ ಬಯಲಾಗಬೇಕಿದೆ.

ಇದನ್ನೂ ಓದಿ : ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...