Homeಫ್ಯಾಕ್ಟ್‌ಚೆಕ್FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು...

FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ರಾಜ್ಯಸಭಾ ಸಂಸದ ಮತ್ತು ವಕೀಲ ಮಜೀದ್ ಮೆಮನ್ 26/11ರ ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ.

ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರು ಮೆಮನ್ ಅವರನ್ನು ರಾಜ್ಯಸಭೆ ಸಂಸದರನ್ನಾಗಿಸಿದರೆ, ಕಸಬ್‌ಗೆ ಗಲ್ಲು ಶಿಕ್ಷೆ ಕೊಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಉಜ್ವಲ್ ನಿಕಮ್‌ಗೆ ಬಿಜೆಪಿ ಲೋಕಸಭೆ ಟಿಕೆಟ್ ನೀಡಿದೆ ಎಂದೂ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ಸಂದೇಶದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ವಕೀಲ ಉಜ್ವಲ್ ನಿಕಮ್ ಅವರಿಗೆ ಮುಂಬೈ ನಾರ್ತ್ ಸೆಂಟ್ರಲ್‌ನಿಂದ ಬಿಜೆಪಿ ಲೋಕಸಭೆಯ ಟಿಕೆಟ್‌ ನೀಡಿರುವುದು ಖಚಿತವಾಗಿದೆ. ವಕೀಲ ಉಜ್ವಲ್ ನಿಕಮ್ ಅವರು ಮುಂಬೈ 26/11 ಭಯೋತ್ಪಾದಕ ದಾಳಿಯ ವಿಚಾರಣೆಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಷ್ಟ್ರವ್ಯಾಪಿ ಮನ್ನಣೆ ಗಳಿಸಿದ್ದರು. ಅಜ್ಮಲ್ ಕಸಬ್‌ ವಿರುದ್ಧ ಮತ್ತು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದರು.

ಆದರೆ, ‘ಮಜೀದ್ ಮೆಮನ್’ ಅವರು ಕಸಬ್‌ ಪರ ವಾದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಹುಡುಕಿದಾಗ, ಮಜೀದ್ ಮೆಮನ್ ಅವರು ಅಜ್ಮಲ್ ಕಸಬ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಹೇಳುವ ಯಾವುದೇ ಸುದ್ದಿ ವರದಿಗಳು ಲಭ್ಯವಾಗಿಲ್ಲ.

ನಾವು ಮತ್ತಷ್ಟು ಮಾಹಿತಿ ಹುಡುಕಿದಾಗ, 26/11ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಅಜ್ಮಲ್ ಕಸಬ್ ಪರ ವಾದಿಸಲು ಯಾವುದೇ ವಕೀಲರು ಮುಂದೆ ಬಂದಿರಲಿಲ್ಲ. ಈ ಕಾರಣಕ್ಕೆ, ಪ್ರತಿ ಆರೋಪಿಯೂ ನ್ಯಾಯಯುತ ವಿಚಾರಣೆಗೆ ಒಳಗಾಗುವ ಹಕ್ಕಿದೆ ಮತ್ತು ಆರೋಪಿಯನ್ನು ಕನೂನಾತ್ಮಕ ವಕಾಲತ್ತು ವಹಿಸದಿರಲು ಅಸಾಧ್ಯ ಎಂಬ ಕಾರಣಕ್ಕಾಗಿ ಕೆಲ ವಕೀಲರನ್ನು ಕೋರ್ಟ್ ನೇಮಿಸಿತ್ತು. ಹೀಗೆ, ಕಸಬ್‌ನ ರಕ್ಷಣಾ ವಕೀಲರಾಗಿ ಅಬ್ಬಾಸ್ ಕಾಜ್ಮಿ ಅವರು ನೇಮಕಗೊಂಡರು. ಆದರೆ, ಕಾಜ್ಮಿ ಅವರು ಕಸಬ್‌ ಪರ ವಕಾಲತ್ತು ವಹಿಸಲು ನಿರಾಕರಿಸಿದ ಕಾರಣ, ಅಸಹಕಾರಕ್ಕಾಗಿ ಅವರನ್ನು ತೆಗೆದು ಹಾಕಲಾತ್ತು.

ಅಬ್ಬಾಸ್ ಕಾಜ್ಮಿಯವರ ಪದಚ್ಯುತಿ ನಂತರ ಕೆ.ಪಿ ಪವಾರ್, ಅಮೀನ್ ಸೋಲ್ಕರ್ ಮತ್ತು ಫರ್ಹಾನಾ ಶಾ ಎಂಬ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಕಸಬ್‌ ಪರ ವಾದ ಮಾಡಿದ್ದರು ಮತ್ತು ವಕೀಲ ರಾಜು ರಾಮಚಂದ್ರನ್ ಅವರು ಕಸಬ್‌ನ ಮರಣದಂಡನೆಯ ವಿರುದ್ಧದ ಮೇಲ್ಮನವಿಯ ಸಂದರ್ಭದಲ್ಲಿ ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಅಜ್ಮಲ್ ಕಸಬ್‌ಗೆ ಮರಣದಂಡನೆ ಶಿಕ್ಷೆಯ ಪರವಾಗಿ ಮಾಜಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಗೋಪಾಲ್ ಸುಬ್ರಮಣಿಯಂ ಅವರ ನೇತೃತ್ವದ ವಕೀಲ ತಂಡ ವಾದಿಸಿತ್ತು.

“ಕಸಬ್‌ ಪರ ನಾನು ನ್ಯಾಯಾಲಯದಲ್ಲಿ ಏಕೆ ವಾದಿಸುವುದಿಲ್ಲ” ಎಂದು ಮಜೀದ್‌ ಮೆಮನ್‌ ಬರೆದಿರುವ ಲೇಖನವನ್ನು ದಿ ಎಕನಾಮಿಕ್ ಟೈಮ್ಸ್ ಮತ್ತು ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಸುದ್ದಿ ಸಂಸ್ಥೆಗಳು ಡಿಸೆಂಬರ್ 21, 2008 ರಂದು ಪ್ರಕಟಿಸಿದ್ದವು.

ಈ ಲೇಖನದಲ್ಲಿ, ಮೆಮನ್‌ ಅವರು ಅಜ್ಮಲ್‌ ಕಸಬ್‌ನ ತ್ವರಿತ ವಿಚಾರಣೆಗೆ ಆಗ್ರಹಿಸಿದ್ದರು. ಕಸಬ್‌ ವಿರುದ್ಧ ಇರುವ ಸಾಕಷ್ಟು ಸಾಕ್ಷ್ಯಗಳನ್ನು ಉಲ್ಲೇಖಿಸಿ ಈ ಅಪರಾಧ ಮರಣ ದಂಡನೆಗೆ ಕಾರಣವಾಗುತ್ತದೆ ಎಂದು ಒತ್ತಿ ಹೇಳಿದ್ದರು. ಅಲ್ಲದೆ, ಅಜ್ಮಲ್‌ ಕಸಬ್‌ ವಕೀಲರನ್ನು ಹೊಂದುವುದು ಅವಶ್ಯಕ. ವಕೀಲರು ಇಲ್ಲದಿರುವುದು ವಿಚಾರಣೆಯ ನ್ಯಾಯಸಮ್ಮತತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದರು. ಅದರ ಜೊತೆಗೆ ಅಜ್ಮಲ್‌ ಕಸಬ್‌ ಪರ ನಾನು ಕೋರ್ಟ್‌ನಲ್ಲಿ ವಾದ ಮಾಡಲ್ಲ. ಏಕೆಂದರೆ ಅವರ ಪ್ರಕರಣ ಸಮರ್ಥನೀಯವಲ್ಲ. ಅವನ ಅಪರಾಧವನ್ನು ನಾವೆಲ್ಲರೂ ನೋಡಿದ್ದೇವೆ ಎಂದು ತಮ್ಮ ಲೇಖನವನ್ನು ಮೆಮನ್‌ ಅಂತ್ಯಗೊಳಿಸಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಮಜೀದ್ ಮೆಮನ್ ಅವರು 26/11 ಮುಂಬೈ ದಾಳಿ ಪ್ರಕರಣದ ವಿಚಾರಣೆಯ ಯಾವುದೇ ಹಂತದಲ್ಲಿ ಆರೋಪಿ ಅಜ್ಮಲ್ ಕಸಬ್‌ನ ಕಾನೂನು ತಂಡದ ಭಾಗವಾಗಿರಲಿಲ್ಲ. ಅಬ್ಬಾಸ್ ಕಾಜ್ಮಿ, ಅಮೀನ್ ಸೋಲ್ಕರ್ ಮತ್ತು ಫರ್ಹಾನಾ ಷಾ ಮುಂತಾದ ವಕೀಲರು ವಿವಿಧ ಹಂತಗಳಲ್ಲಿ ಕಸಬ್‌ನನ್ನು ಪ್ರತಿನಿಧಿಸಿದರು. ಕಸಬ್‌ ಪರ ವಾದಿಸುವುದಿಲ್ಲ ಎಂದು ಸ್ವತಃ ಮೆಮನ್‌ ಹೇಳಿದ್ದರು. ಹಾಗಾಗಿ ಮಜೀದ್ ಮೆಮನ್ ಅಜ್ಮಲ್ ಕಸಬ್‌ನ ಪರ ವಾದಿಸಿದ್ದರು ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕನಿ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...