Homeಫ್ಯಾಕ್ಟ್‌ಚೆಕ್FACT CHECK : ಹಳೆಯ ವಿಡಿಯೋವನ್ನು ಕಾಂಗ್ರೆಸ್‌ ಜಾಹೀರಾತು ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಹಳೆಯ ವಿಡಿಯೋವನ್ನು ಕಾಂಗ್ರೆಸ್‌ ಜಾಹೀರಾತು ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಈ ಬಾರಿಯ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಪೈಕಿ ಮಹಿಳೆಯರಿಗೆ ಮಾಸಿಕ 8,500 ರೂಪಾಯಿ ಸಹಾಯಧನ ಕೊಡುವ ‘ಮಹಾಲಕ್ಷಿ’ ಯೋಜನೆಯೂ ಒಂದು.

ಮಹಾಲಕ್ಷಿ ಯೋಜನೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿ ಚುನಾವಣಾ ಭಾಷಣದಲ್ಲೂ ಪ್ರಸ್ತಾಪಿಸುತ್ತಿದ್ದಾರೆ. ಮಹಿಳೆಯರು ವಿಶೇಷವಾಗಿ ಗೃಹಿಣಿಯರು, ಕುಟುಂಬದ ಜವಬ್ದಾರಿಯನ್ನು ಹೊತ್ತ ತಾಯಂದಿರು ಬಹಳ ಕಷ್ಟಪಡುತ್ತಿದ್ದಾರೆ. ಅವರಿಗೆ ಸಹಾಯ ಮಾಡುವ ಸಲುವಾಗಿ ಈ ಗ್ಯಾರಂಟಿ ಜಾರಿಗೊಳಿಸುತ್ತೇವೆ ಎನ್ನುತ್ತಿದ್ದಾರೆ.

ಕಾಂಗ್ರೆಸ್ ತನ್ನ ಐದು ಗ್ಯಾರಂಟಿಗಳು ಸೇರಿದಂತೆ ಚುನಾವಣಾ ಭರವಸೆಗಳ ಕುರಿತು ಆಗಾಗ ವಿಡಿಯೋ ಹಂಚಿಕೊಳ್ಳುತ್ತಿರುತ್ತದೆ. ಇತ್ತೀಚೆಗೆ ‘ಮಹಾಲಕ್ಷಿ’ ಯೋಜನೆಯದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ವಿಡಿಯೋದಲ್ಲಿ ತಾಯಿಯೊಬ್ಬಳು ಮಗುವಿಗೆ ಹಾಲುಣಿಸುತ್ತಿರುವಾಗ ಆಕೆಯ ಕೈಯಿಂದ ಹಾಲಿನ ಬಾಟಲಿ ಕೆಳಗೆ ಬೀಳುವುದು. ಆಕೆಯ ಪಕ್ಕ ಇದ್ದ ಮಹಿಳೆಯರು ಅದನ್ನು ಎತ್ತಿ ಕೊಡದೆ ಸುಮ್ಮನೆ ಕೂರುವುದು. ಆಗ ಸ್ವಚ್ಚತಾ ಸಿಬ್ಬಂದಿಯಾಗಿರುವ ಮಹಿಳೆಯೊಬ್ಬರು ಬಂದು ಬಾಟಲಿ ಎತ್ತಿ ಕೊಡುವ ದೃಶ್ಯವಿದೆ.

ಮುಂದುವರಿದು, ಮಗುವಿನ ಹಾಲುಣಿಸುತ್ತಿದ್ದ ತಾಯಿ ಮತ್ತು ಸ್ವಚ್ಚತಾ ಸಿಬ್ಬಂದಿ ಮಹಿಳೆ ನಡುವೆ ನಡೆಯುವ ಸಂಭಾಷಣೆ ವಿಡಿಯೋದಲ್ಲಿ ಇದೆ. ಹಾಲುಣಿಸುತ್ತಿದ್ದ ತಾಯಿ ಸ್ವಚ್ಚತಾ ಸಿಬ್ಬಂದಿ ಮಹಿಳೆಗೆ “ನಿಮಗೆ ಎಷ್ಟು ಮಕ್ಕಳು, ನೀವು ಮನೆ ಮತ್ತು ಮಕ್ಕಳು ಎರಡೂ ಕೆಲಸವನ್ನು ಹೇಗೆ ನಿಭಾಯಿಸುವಿರಿ?” ಎಂದು ಪ್ರಶ್ನಿಸುತ್ತಾರೆ. ಆಗ ಮಹಿಳೆ ಉತ್ತರಿಸುತ್ತಾ, “10 ಗಂಟೆ ಪಾಳಿಯಲ್ಲಿ ಕಚೇರಿ ಕೆಲಸ ಮುಗಿಸಿ ಮನೆಗೆ ಹೋದ ಮೇಲೆ ತಾಯಿಯ “ಎನ್ನುತ್ತಾರೆ. ಆಗ ಅಲ್ಲೇ ಕುಳಿತಿದ್ದ ಮತ್ತೊಬ್ಬ ಮಹಿಳೆ, “ಎರಡೆರಡು ಕೆಲಸಗಳನ್ನು ಮಾಡುವುದರಲ್ಲೇ ನಿನ್ನ ಆಯಸ್ಸು ಮುಗಿಯುತ್ತದೆ” ಎಂದು ಹೇಳುವುದನ್ನು ನೋಡಬಹುದು.

ವಿಡಿಯೋದಲ್ಲಿ ಮಹಿಳೆಯರ ಸಂಭಾಷಣೆ ಮುಗಿದ ಬಳಿಕ, ರಾಹುಲ್ ಗಾಂಧಿಯವರು ಮಹಾಲಕ್ಷಿ ಯೋಜನೆ ಕುರಿತು ಮಾತನಾಡಿರುವ ದೃಶ್ಯವಿದೆ. ಅನೇಕ ಕಾಂಗ್ರೆಸ್ ಮುಖಂಡರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಈ ವಿಡಿಯೋ ಕುರಿತು ಅನುಮಾನ ವ್ಯಕ್ತವಾದ ಕಾರಣ, ನಾವು ಇದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಇದು ಕಾಂಗ್ರೆಸ್‌ನ ಮಹಾಲಕ್ಷಿ ಯೋಜನೆ ಕುರಿತ ವಿಡಿಯೋ ಅಲ್ಲ. ಎಡಿಟೆಡ್ ವಿಡಿಯೋ ಎಂಬ ಸತ್ಯ ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಬಳಸಿ ನಾವು ಸರ್ಚ್ ಮಾಡಿದಾಗ, ಪ್ರೆಗಾ ನ್ಯೂಸ್ ಯೂಟ್ಯೂಬ್ ಚಾನೆಲ್‌ನಲ್ಲಿ 19 ಫೆಬ್ರವರಿ 2022 ರಂದು ಅಪ್ಲೋಡ್ ಮಾಡಲಾದ ಮೂಲ ವಿಡಿಯೋ ದೊರೆತಿದೆ.

ಮೂಲ ವಿಡಿಯೋದಲ್ಲೂ ವೈರಲ್ ವಿಡಿಯೋದಲ್ಲಿರುವ ದೃಶ್ಯಗಳೇ ಇದ್ದು, ಕೊನೆಯಲ್ಲಿ ಮಾತ್ರ ಮಹಿಳಾ ದಿನಾಚರಣೆಯ ಸಂದೇಶ ಸಾರುವ ಸನ್ನಿವೇಶವಿದೆ. ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರೆಗಾ ನ್ಯೂಸ್ ಸಿದ್ದಪಡಿಸಿದ ವಿಶೇಷ ವಿಡಿಯೋವನ್ನು ಕಟ್‌ ಮಾಡಿ, ಅದಕ್ಕೆ ರಾಹುಲ್ ಗಾಂಧಿಯ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...