Homeಫ್ಯಾಕ್ಟ್‌ಚೆಕ್FACT CHECK : ಹಳೆಯ ವಿಡಿಯೋವನ್ನು ಕಾಂಗ್ರೆಸ್‌ ಜಾಹೀರಾತು ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಹಳೆಯ ವಿಡಿಯೋವನ್ನು ಕಾಂಗ್ರೆಸ್‌ ಜಾಹೀರಾತು ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಈ ಬಾರಿಯ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಪೈಕಿ ಮಹಿಳೆಯರಿಗೆ ಮಾಸಿಕ 8,500 ರೂಪಾಯಿ ಸಹಾಯಧನ ಕೊಡುವ ‘ಮಹಾಲಕ್ಷಿ’ ಯೋಜನೆಯೂ ಒಂದು.

ಮಹಾಲಕ್ಷಿ ಯೋಜನೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿ ಚುನಾವಣಾ ಭಾಷಣದಲ್ಲೂ ಪ್ರಸ್ತಾಪಿಸುತ್ತಿದ್ದಾರೆ. ಮಹಿಳೆಯರು ವಿಶೇಷವಾಗಿ ಗೃಹಿಣಿಯರು, ಕುಟುಂಬದ ಜವಬ್ದಾರಿಯನ್ನು ಹೊತ್ತ ತಾಯಂದಿರು ಬಹಳ ಕಷ್ಟಪಡುತ್ತಿದ್ದಾರೆ. ಅವರಿಗೆ ಸಹಾಯ ಮಾಡುವ ಸಲುವಾಗಿ ಈ ಗ್ಯಾರಂಟಿ ಜಾರಿಗೊಳಿಸುತ್ತೇವೆ ಎನ್ನುತ್ತಿದ್ದಾರೆ.

ಕಾಂಗ್ರೆಸ್ ತನ್ನ ಐದು ಗ್ಯಾರಂಟಿಗಳು ಸೇರಿದಂತೆ ಚುನಾವಣಾ ಭರವಸೆಗಳ ಕುರಿತು ಆಗಾಗ ವಿಡಿಯೋ ಹಂಚಿಕೊಳ್ಳುತ್ತಿರುತ್ತದೆ. ಇತ್ತೀಚೆಗೆ ‘ಮಹಾಲಕ್ಷಿ’ ಯೋಜನೆಯದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ವಿಡಿಯೋದಲ್ಲಿ ತಾಯಿಯೊಬ್ಬಳು ಮಗುವಿಗೆ ಹಾಲುಣಿಸುತ್ತಿರುವಾಗ ಆಕೆಯ ಕೈಯಿಂದ ಹಾಲಿನ ಬಾಟಲಿ ಕೆಳಗೆ ಬೀಳುವುದು. ಆಕೆಯ ಪಕ್ಕ ಇದ್ದ ಮಹಿಳೆಯರು ಅದನ್ನು ಎತ್ತಿ ಕೊಡದೆ ಸುಮ್ಮನೆ ಕೂರುವುದು. ಆಗ ಸ್ವಚ್ಚತಾ ಸಿಬ್ಬಂದಿಯಾಗಿರುವ ಮಹಿಳೆಯೊಬ್ಬರು ಬಂದು ಬಾಟಲಿ ಎತ್ತಿ ಕೊಡುವ ದೃಶ್ಯವಿದೆ.

ಮುಂದುವರಿದು, ಮಗುವಿನ ಹಾಲುಣಿಸುತ್ತಿದ್ದ ತಾಯಿ ಮತ್ತು ಸ್ವಚ್ಚತಾ ಸಿಬ್ಬಂದಿ ಮಹಿಳೆ ನಡುವೆ ನಡೆಯುವ ಸಂಭಾಷಣೆ ವಿಡಿಯೋದಲ್ಲಿ ಇದೆ. ಹಾಲುಣಿಸುತ್ತಿದ್ದ ತಾಯಿ ಸ್ವಚ್ಚತಾ ಸಿಬ್ಬಂದಿ ಮಹಿಳೆಗೆ “ನಿಮಗೆ ಎಷ್ಟು ಮಕ್ಕಳು, ನೀವು ಮನೆ ಮತ್ತು ಮಕ್ಕಳು ಎರಡೂ ಕೆಲಸವನ್ನು ಹೇಗೆ ನಿಭಾಯಿಸುವಿರಿ?” ಎಂದು ಪ್ರಶ್ನಿಸುತ್ತಾರೆ. ಆಗ ಮಹಿಳೆ ಉತ್ತರಿಸುತ್ತಾ, “10 ಗಂಟೆ ಪಾಳಿಯಲ್ಲಿ ಕಚೇರಿ ಕೆಲಸ ಮುಗಿಸಿ ಮನೆಗೆ ಹೋದ ಮೇಲೆ ತಾಯಿಯ “ಎನ್ನುತ್ತಾರೆ. ಆಗ ಅಲ್ಲೇ ಕುಳಿತಿದ್ದ ಮತ್ತೊಬ್ಬ ಮಹಿಳೆ, “ಎರಡೆರಡು ಕೆಲಸಗಳನ್ನು ಮಾಡುವುದರಲ್ಲೇ ನಿನ್ನ ಆಯಸ್ಸು ಮುಗಿಯುತ್ತದೆ” ಎಂದು ಹೇಳುವುದನ್ನು ನೋಡಬಹುದು.

ವಿಡಿಯೋದಲ್ಲಿ ಮಹಿಳೆಯರ ಸಂಭಾಷಣೆ ಮುಗಿದ ಬಳಿಕ, ರಾಹುಲ್ ಗಾಂಧಿಯವರು ಮಹಾಲಕ್ಷಿ ಯೋಜನೆ ಕುರಿತು ಮಾತನಾಡಿರುವ ದೃಶ್ಯವಿದೆ. ಅನೇಕ ಕಾಂಗ್ರೆಸ್ ಮುಖಂಡರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಈ ವಿಡಿಯೋ ಕುರಿತು ಅನುಮಾನ ವ್ಯಕ್ತವಾದ ಕಾರಣ, ನಾವು ಇದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಇದು ಕಾಂಗ್ರೆಸ್‌ನ ಮಹಾಲಕ್ಷಿ ಯೋಜನೆ ಕುರಿತ ವಿಡಿಯೋ ಅಲ್ಲ. ಎಡಿಟೆಡ್ ವಿಡಿಯೋ ಎಂಬ ಸತ್ಯ ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಬಳಸಿ ನಾವು ಸರ್ಚ್ ಮಾಡಿದಾಗ, ಪ್ರೆಗಾ ನ್ಯೂಸ್ ಯೂಟ್ಯೂಬ್ ಚಾನೆಲ್‌ನಲ್ಲಿ 19 ಫೆಬ್ರವರಿ 2022 ರಂದು ಅಪ್ಲೋಡ್ ಮಾಡಲಾದ ಮೂಲ ವಿಡಿಯೋ ದೊರೆತಿದೆ.

ಮೂಲ ವಿಡಿಯೋದಲ್ಲೂ ವೈರಲ್ ವಿಡಿಯೋದಲ್ಲಿರುವ ದೃಶ್ಯಗಳೇ ಇದ್ದು, ಕೊನೆಯಲ್ಲಿ ಮಾತ್ರ ಮಹಿಳಾ ದಿನಾಚರಣೆಯ ಸಂದೇಶ ಸಾರುವ ಸನ್ನಿವೇಶವಿದೆ. ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರೆಗಾ ನ್ಯೂಸ್ ಸಿದ್ದಪಡಿಸಿದ ವಿಶೇಷ ವಿಡಿಯೋವನ್ನು ಕಟ್‌ ಮಾಡಿ, ಅದಕ್ಕೆ ರಾಹುಲ್ ಗಾಂಧಿಯ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...