Homeಫ್ಯಾಕ್ಟ್‌ಚೆಕ್FACT CHECK : ಹಳೆಯ ವಿಡಿಯೋವನ್ನು ಕಾಂಗ್ರೆಸ್‌ ಜಾಹೀರಾತು ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಹಳೆಯ ವಿಡಿಯೋವನ್ನು ಕಾಂಗ್ರೆಸ್‌ ಜಾಹೀರಾತು ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಈ ಬಾರಿಯ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿದೆ. ಈ ಪೈಕಿ ಮಹಿಳೆಯರಿಗೆ ಮಾಸಿಕ 8,500 ರೂಪಾಯಿ ಸಹಾಯಧನ ಕೊಡುವ ‘ಮಹಾಲಕ್ಷಿ’ ಯೋಜನೆಯೂ ಒಂದು.

ಮಹಾಲಕ್ಷಿ ಯೋಜನೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿ ಚುನಾವಣಾ ಭಾಷಣದಲ್ಲೂ ಪ್ರಸ್ತಾಪಿಸುತ್ತಿದ್ದಾರೆ. ಮಹಿಳೆಯರು ವಿಶೇಷವಾಗಿ ಗೃಹಿಣಿಯರು, ಕುಟುಂಬದ ಜವಬ್ದಾರಿಯನ್ನು ಹೊತ್ತ ತಾಯಂದಿರು ಬಹಳ ಕಷ್ಟಪಡುತ್ತಿದ್ದಾರೆ. ಅವರಿಗೆ ಸಹಾಯ ಮಾಡುವ ಸಲುವಾಗಿ ಈ ಗ್ಯಾರಂಟಿ ಜಾರಿಗೊಳಿಸುತ್ತೇವೆ ಎನ್ನುತ್ತಿದ್ದಾರೆ.

ಕಾಂಗ್ರೆಸ್ ತನ್ನ ಐದು ಗ್ಯಾರಂಟಿಗಳು ಸೇರಿದಂತೆ ಚುನಾವಣಾ ಭರವಸೆಗಳ ಕುರಿತು ಆಗಾಗ ವಿಡಿಯೋ ಹಂಚಿಕೊಳ್ಳುತ್ತಿರುತ್ತದೆ. ಇತ್ತೀಚೆಗೆ ‘ಮಹಾಲಕ್ಷಿ’ ಯೋಜನೆಯದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ವಿಡಿಯೋದಲ್ಲಿ ತಾಯಿಯೊಬ್ಬಳು ಮಗುವಿಗೆ ಹಾಲುಣಿಸುತ್ತಿರುವಾಗ ಆಕೆಯ ಕೈಯಿಂದ ಹಾಲಿನ ಬಾಟಲಿ ಕೆಳಗೆ ಬೀಳುವುದು. ಆಕೆಯ ಪಕ್ಕ ಇದ್ದ ಮಹಿಳೆಯರು ಅದನ್ನು ಎತ್ತಿ ಕೊಡದೆ ಸುಮ್ಮನೆ ಕೂರುವುದು. ಆಗ ಸ್ವಚ್ಚತಾ ಸಿಬ್ಬಂದಿಯಾಗಿರುವ ಮಹಿಳೆಯೊಬ್ಬರು ಬಂದು ಬಾಟಲಿ ಎತ್ತಿ ಕೊಡುವ ದೃಶ್ಯವಿದೆ.

ಮುಂದುವರಿದು, ಮಗುವಿನ ಹಾಲುಣಿಸುತ್ತಿದ್ದ ತಾಯಿ ಮತ್ತು ಸ್ವಚ್ಚತಾ ಸಿಬ್ಬಂದಿ ಮಹಿಳೆ ನಡುವೆ ನಡೆಯುವ ಸಂಭಾಷಣೆ ವಿಡಿಯೋದಲ್ಲಿ ಇದೆ. ಹಾಲುಣಿಸುತ್ತಿದ್ದ ತಾಯಿ ಸ್ವಚ್ಚತಾ ಸಿಬ್ಬಂದಿ ಮಹಿಳೆಗೆ “ನಿಮಗೆ ಎಷ್ಟು ಮಕ್ಕಳು, ನೀವು ಮನೆ ಮತ್ತು ಮಕ್ಕಳು ಎರಡೂ ಕೆಲಸವನ್ನು ಹೇಗೆ ನಿಭಾಯಿಸುವಿರಿ?” ಎಂದು ಪ್ರಶ್ನಿಸುತ್ತಾರೆ. ಆಗ ಮಹಿಳೆ ಉತ್ತರಿಸುತ್ತಾ, “10 ಗಂಟೆ ಪಾಳಿಯಲ್ಲಿ ಕಚೇರಿ ಕೆಲಸ ಮುಗಿಸಿ ಮನೆಗೆ ಹೋದ ಮೇಲೆ ತಾಯಿಯ “ಎನ್ನುತ್ತಾರೆ. ಆಗ ಅಲ್ಲೇ ಕುಳಿತಿದ್ದ ಮತ್ತೊಬ್ಬ ಮಹಿಳೆ, “ಎರಡೆರಡು ಕೆಲಸಗಳನ್ನು ಮಾಡುವುದರಲ್ಲೇ ನಿನ್ನ ಆಯಸ್ಸು ಮುಗಿಯುತ್ತದೆ” ಎಂದು ಹೇಳುವುದನ್ನು ನೋಡಬಹುದು.

ವಿಡಿಯೋದಲ್ಲಿ ಮಹಿಳೆಯರ ಸಂಭಾಷಣೆ ಮುಗಿದ ಬಳಿಕ, ರಾಹುಲ್ ಗಾಂಧಿಯವರು ಮಹಾಲಕ್ಷಿ ಯೋಜನೆ ಕುರಿತು ಮಾತನಾಡಿರುವ ದೃಶ್ಯವಿದೆ. ಅನೇಕ ಕಾಂಗ್ರೆಸ್ ಮುಖಂಡರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಈ ವಿಡಿಯೋ ಕುರಿತು ಅನುಮಾನ ವ್ಯಕ್ತವಾದ ಕಾರಣ, ನಾವು ಇದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಇದು ಕಾಂಗ್ರೆಸ್‌ನ ಮಹಾಲಕ್ಷಿ ಯೋಜನೆ ಕುರಿತ ವಿಡಿಯೋ ಅಲ್ಲ. ಎಡಿಟೆಡ್ ವಿಡಿಯೋ ಎಂಬ ಸತ್ಯ ಗೊತ್ತಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಬಳಸಿ ನಾವು ಸರ್ಚ್ ಮಾಡಿದಾಗ, ಪ್ರೆಗಾ ನ್ಯೂಸ್ ಯೂಟ್ಯೂಬ್ ಚಾನೆಲ್‌ನಲ್ಲಿ 19 ಫೆಬ್ರವರಿ 2022 ರಂದು ಅಪ್ಲೋಡ್ ಮಾಡಲಾದ ಮೂಲ ವಿಡಿಯೋ ದೊರೆತಿದೆ.

ಮೂಲ ವಿಡಿಯೋದಲ್ಲೂ ವೈರಲ್ ವಿಡಿಯೋದಲ್ಲಿರುವ ದೃಶ್ಯಗಳೇ ಇದ್ದು, ಕೊನೆಯಲ್ಲಿ ಮಾತ್ರ ಮಹಿಳಾ ದಿನಾಚರಣೆಯ ಸಂದೇಶ ಸಾರುವ ಸನ್ನಿವೇಶವಿದೆ. ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರೆಗಾ ನ್ಯೂಸ್ ಸಿದ್ದಪಡಿಸಿದ ವಿಶೇಷ ವಿಡಿಯೋವನ್ನು ಕಟ್‌ ಮಾಡಿ, ಅದಕ್ಕೆ ರಾಹುಲ್ ಗಾಂಧಿಯ ವಿಡಿಯೋ ಎಡಿಟ್ ಮಾಡಿ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...