Homeಮುಖಪುಟ'ಆಲ್ ಐಸ್ ಆನ್ ರಫಾ': ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

- Advertisement -
- Advertisement -

ಇಸ್ರೇಲ್‌ ರಫಾ ಮೇಲಿನ ಆಕ್ರಮಣದ ಮಧ್ಯೆ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸದ್ದು ಮಾಡಿದೆ. ಭಾರತೀಯ ಸೆಲೆಬ್ರಿಟಿಗಳು ಹೆಚ್ಚಾಗಿ ಈ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಟ ದುಲ್ಕರ್ ಸಲ್ಮಾನ್, ಸಮಂತಾ ರುತ್ ಪ್ರಭು, ಟೊವಿನೋ ಥಾಮಸ್, ಕೀರ್ತಿ ಸುರೇಶ್, ಮಾಧುರಿ ದೀಕ್ಷಿತ್, ವರುಣ್ ಧವನ್, ವಿಜಯ್ ವರ್ಮಾ ಮತ್ತು ಇತರ ಹಲವು ಸೆಲೆಬ್ರಿಟಿಗಳು ರಫಾ ಮೇಲಿನ ಇಸ್ರೇಲ್‌ ಬಾಂಬ್ ದಾಳಿಯನ್ನು ಖಂಡಿಸಿ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

‘ಆಲ್ ಐಸ್ ಆನ್ ರಫಾ’ ಎಂಬ AI- ರಚಿತವಾದ ಚಿತ್ರದ ಪೋಸ್ಟ್‌ನ್ನು ಇನ್ಸ್ಟಾಗ್ರಾಂವೊಂದರಲ್ಲೇ  33 ದಶಲಕ್ಷಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ. ಚಿತ್ರವು ರಫಾದಲ್ಲಿನ ಪರಿಸ್ಥಿತಿಯನ್ನು ಪ್ರತಿನಿಧಿಸುತ್ತದೆ, ಅಲ್ಲಿನ ನಿರಾಶ್ರಿತ ಜನರನ್ನು ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಮತ್ತು ಮಿಲಿಟರಿ ಪಡೆಗಳು ಸುತ್ತುವರಿದಿರುವುದನ್ನು ಪ್ರತಿಬಿಂಬಿಸುತ್ತದೆ.

‘ಆಲ್ ಐಸ್ ಆನ್ ರಾಫಾ’ ಎಂಬ ಪದವು ಫೆಬ್ರವರಿ 2024ರಲ್ಲಿ ಆಕ್ರಮಿತ ಪ್ಯಾಲೇಸ್ತೀನ್‌ ಪ್ರಾಂತ್ಯಗಳ WHOನ ಕಚೇರಿಯ ನಿರ್ದೇಶಕ ಡಾ ರಿಕ್ ಪೀಪರ್‌ಕಾರ್ನ್ ಮೊದಲು ಬಳಕೆ ಮಾಡಿದ್ದಾರೆ. ‘ರಫಾದ ಮೇಲೆ ಎಲ್ಲರ ಕಣ್ಣುಗಳು’ ಎಂಬುವುದು ಗಾಝಾದ ರಫಾದಲ್ಲಿ ನಡೆಯುತ್ತಿರುವ ನರಮೇಧವನ್ನು ಉಲ್ಲೇಖಿಸುವ ಪದಗುಚ್ಛವಾಗಿದೆ. ಇಸ್ರೇಲ್‌ ರಫಾ ಮೇಲೆ ದಾಳಿ ನಡೆಸಿದರೆ ಅದು ಮಹಾ ದುರಂತ ಎಂದು ಡಾ. ಪೀಪರ್‌ಕಾರ್ನ್‌ ಹೇಳಿದ್ದಾರೆ. ರಾಫಾದಿಂದ WHOನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೀಪರ್‌ಕಾರ್ನ್ ‘ಎಲ್ಲಾ ಕಣ್ಣುಗಳು ರಫಾ ಮೇಲೆ ಇವೆ” ಎಂದು ಹೇಳಿದ್ದಾರೆ.

ಮೇ 26ರಂದು, ಇಸ್ರೇಲ್‌ ವಾಯುಪಡೆಗಳು ಇಸ್ರೇಲ್‌ನ ನಿರಾಶ್ರಿತರಿರುವ ಪ್ರದೇಶದ ಮೇಲೆ ನಡೆಸಿದ ವೈಮಾನಿಕ ದಾಳಿಗೆ ಕನಿಷ್ಠ 45 ಜನರ ಹತ್ಯೆ ನಡೆದಿದೆ. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿರುವ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ(UNRWA) ಪ್ರಕಾರ, ಜನರು ರಫಾಗೆ ಓಡಿಹೋಗುವಂತೆ ಇಸ್ರೇಲ್‌ ಮಾಡಿದೆ. ಬಾಂಬ್ ಸ್ಫೋಟಗಳು, ಆಹಾರ ಮತ್ತು ನೀರಿನ ಕೊರತೆ, ತ್ಯಾಜ್ಯದ ರಾಶಿಗಳು ಮತ್ತು ಸೂಕ್ತವಲ್ಲದ ಜೀವನ ಪರಿಸ್ಥಿತಿಗಳ ನಡುವೆ ಇದು ಸಂಭವಿಸಿದೆ. ಗಾಝಾವು “ಭೂಮಿಯ ಮೇಲಿನ ನರಕ”ವಾಗಿದೆ ಮತ್ತು “ಗಾಝಾ ಪಟ್ಟಿಯಲ್ಲಿ ಯಾವುದೇ ಸುರಕ್ಷಿತ ಸ್ಥಳವಿಲ್ಲ” ಎಂದು UNRWA ಹೇಳಿದೆ. ಯಾರೂ ಸುರಕ್ಷಿತವಾಗಿಲ್ಲ, ನಾಗರಿಕರು ಸುರಕ್ಷಿತವಾಗಿಲ್ಲ, ನೆರವು ಕಾರ್ಯಕರ್ತರು ಸುರಕ್ಷಿತವಾಗಿಲ್ಲ, ನಮಗೆ ಕದನ ವಿರಾಮ ಬೇಕು ಎಂದು ಹೇಳಿದೆ.

ಈ ಮಧ್ಯೆ ರಫಾ ಮೇಲಿನ ದಾಳಿಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು “ದುರಂತ’ ಎಂದು ಕರೆದಿದ್ದಾರೆ. ಮುಗ್ಧ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವ ನಮ್ಮ ಪ್ರಯತ್ನಗಳ ಹೊರತಾಗಿಯೂ, ನಿನ್ನೆ ರಾತ್ರಿ ಒಂದು ತಪ್ಪುಗಿ ದುರಂತ ಸಂಭವಿಸಿದೆ. ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಳೆದ ಎರಡು ವಾರಗಳಿಂದ ಇಸ್ರೇಲ್ ರಾಫಾ ಮೇಲೆ ದಾಳಿ ನಡೆಸುತ್ತಿದೆ. ರಾಫಾ ಮೇಲಿನ ದಾಳಿಯನ್ನು ಹಮಾಸ್‌ನ್ನು ಸೋಲಿಸುವ ತನ್ನ ಕಾರ್ಯತಂತ್ರದ ಭಾಗ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಮೇ 24 ರಂದು, ರಫಾದಲ್ಲಿ ಇಸ್ರೇಲ್ ತನ್ನ ಆಕ್ರಮಣಕಾರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ICJ ಆದೇಶಿಸಿದೆ. ನ್ಯಾಯಾಲಯದ ಸೂಚನೆಯ ಹೊರತಾಗಿಯೂ, ಇಸ್ರೇಲ್ ರಫಾದಲ್ಲಿ ತನ್ನ ದಾಳಿಯನ್ನು ಮುಂದುವರೆಸಿದ್ದು, ಮೇ 25ರಿಂದ 60ಕ್ಕೂ ಹೆಚ್ಚು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದೆ.

ರಫಾದಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ 900 ಕೆಜಿ ತೂಕದ 7 ಬಾಂಬ್‌ಗಳನ್ನು ಹಾಕಿದೆ. ಇಸ್ರೇಲ್‌ ಸೈನ್ಯವು “ನಿಖರವಾದ ಯುದ್ಧಸಾಮಗ್ರಿಗಳೊಂದಿಗೆ” ರಫಾವನ್ನು ಗುರಿಯಾಗಿಸಿಕೊಂಡಿದೆ. ದಾಳಿಯ ಮೊದಲು ಆ ಪ್ರದೇಶದಿಂದ ಸ್ಥಳಾಂತರವಾಗುವಂತೆ ಇಸ್ರೇಲ್‌ ಮಿಲಿಟರಿ ಪಡೆ ನಾಗರಿಕರಿಗೆ ಎಚ್ಚರಿಕೆ ನೀಡಿಲ್ಲ ಎಂದು ಗಾಝಾದ ಸರ್ಕಾರಿ ಮಾಧ್ಯಮ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...