Homeಮುಖಪುಟ'ಆಲ್ ಐಸ್ ಆನ್ ರಫಾ': ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

- Advertisement -
- Advertisement -

ಇಸ್ರೇಲ್‌ ರಫಾ ಮೇಲಿನ ಆಕ್ರಮಣದ ಮಧ್ಯೆ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸದ್ದು ಮಾಡಿದೆ. ಭಾರತೀಯ ಸೆಲೆಬ್ರಿಟಿಗಳು ಹೆಚ್ಚಾಗಿ ಈ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಟ ದುಲ್ಕರ್ ಸಲ್ಮಾನ್, ಸಮಂತಾ ರುತ್ ಪ್ರಭು, ಟೊವಿನೋ ಥಾಮಸ್, ಕೀರ್ತಿ ಸುರೇಶ್, ಮಾಧುರಿ ದೀಕ್ಷಿತ್, ವರುಣ್ ಧವನ್, ವಿಜಯ್ ವರ್ಮಾ ಮತ್ತು ಇತರ ಹಲವು ಸೆಲೆಬ್ರಿಟಿಗಳು ರಫಾ ಮೇಲಿನ ಇಸ್ರೇಲ್‌ ಬಾಂಬ್ ದಾಳಿಯನ್ನು ಖಂಡಿಸಿ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

‘ಆಲ್ ಐಸ್ ಆನ್ ರಫಾ’ ಎಂಬ AI- ರಚಿತವಾದ ಚಿತ್ರದ ಪೋಸ್ಟ್‌ನ್ನು ಇನ್ಸ್ಟಾಗ್ರಾಂವೊಂದರಲ್ಲೇ  33 ದಶಲಕ್ಷಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ. ಚಿತ್ರವು ರಫಾದಲ್ಲಿನ ಪರಿಸ್ಥಿತಿಯನ್ನು ಪ್ರತಿನಿಧಿಸುತ್ತದೆ, ಅಲ್ಲಿನ ನಿರಾಶ್ರಿತ ಜನರನ್ನು ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಮತ್ತು ಮಿಲಿಟರಿ ಪಡೆಗಳು ಸುತ್ತುವರಿದಿರುವುದನ್ನು ಪ್ರತಿಬಿಂಬಿಸುತ್ತದೆ.

‘ಆಲ್ ಐಸ್ ಆನ್ ರಾಫಾ’ ಎಂಬ ಪದವು ಫೆಬ್ರವರಿ 2024ರಲ್ಲಿ ಆಕ್ರಮಿತ ಪ್ಯಾಲೇಸ್ತೀನ್‌ ಪ್ರಾಂತ್ಯಗಳ WHOನ ಕಚೇರಿಯ ನಿರ್ದೇಶಕ ಡಾ ರಿಕ್ ಪೀಪರ್‌ಕಾರ್ನ್ ಮೊದಲು ಬಳಕೆ ಮಾಡಿದ್ದಾರೆ. ‘ರಫಾದ ಮೇಲೆ ಎಲ್ಲರ ಕಣ್ಣುಗಳು’ ಎಂಬುವುದು ಗಾಝಾದ ರಫಾದಲ್ಲಿ ನಡೆಯುತ್ತಿರುವ ನರಮೇಧವನ್ನು ಉಲ್ಲೇಖಿಸುವ ಪದಗುಚ್ಛವಾಗಿದೆ. ಇಸ್ರೇಲ್‌ ರಫಾ ಮೇಲೆ ದಾಳಿ ನಡೆಸಿದರೆ ಅದು ಮಹಾ ದುರಂತ ಎಂದು ಡಾ. ಪೀಪರ್‌ಕಾರ್ನ್‌ ಹೇಳಿದ್ದಾರೆ. ರಾಫಾದಿಂದ WHOನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೀಪರ್‌ಕಾರ್ನ್ ‘ಎಲ್ಲಾ ಕಣ್ಣುಗಳು ರಫಾ ಮೇಲೆ ಇವೆ” ಎಂದು ಹೇಳಿದ್ದಾರೆ.

ಮೇ 26ರಂದು, ಇಸ್ರೇಲ್‌ ವಾಯುಪಡೆಗಳು ಇಸ್ರೇಲ್‌ನ ನಿರಾಶ್ರಿತರಿರುವ ಪ್ರದೇಶದ ಮೇಲೆ ನಡೆಸಿದ ವೈಮಾನಿಕ ದಾಳಿಗೆ ಕನಿಷ್ಠ 45 ಜನರ ಹತ್ಯೆ ನಡೆದಿದೆ. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿರುವ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ(UNRWA) ಪ್ರಕಾರ, ಜನರು ರಫಾಗೆ ಓಡಿಹೋಗುವಂತೆ ಇಸ್ರೇಲ್‌ ಮಾಡಿದೆ. ಬಾಂಬ್ ಸ್ಫೋಟಗಳು, ಆಹಾರ ಮತ್ತು ನೀರಿನ ಕೊರತೆ, ತ್ಯಾಜ್ಯದ ರಾಶಿಗಳು ಮತ್ತು ಸೂಕ್ತವಲ್ಲದ ಜೀವನ ಪರಿಸ್ಥಿತಿಗಳ ನಡುವೆ ಇದು ಸಂಭವಿಸಿದೆ. ಗಾಝಾವು “ಭೂಮಿಯ ಮೇಲಿನ ನರಕ”ವಾಗಿದೆ ಮತ್ತು “ಗಾಝಾ ಪಟ್ಟಿಯಲ್ಲಿ ಯಾವುದೇ ಸುರಕ್ಷಿತ ಸ್ಥಳವಿಲ್ಲ” ಎಂದು UNRWA ಹೇಳಿದೆ. ಯಾರೂ ಸುರಕ್ಷಿತವಾಗಿಲ್ಲ, ನಾಗರಿಕರು ಸುರಕ್ಷಿತವಾಗಿಲ್ಲ, ನೆರವು ಕಾರ್ಯಕರ್ತರು ಸುರಕ್ಷಿತವಾಗಿಲ್ಲ, ನಮಗೆ ಕದನ ವಿರಾಮ ಬೇಕು ಎಂದು ಹೇಳಿದೆ.

ಈ ಮಧ್ಯೆ ರಫಾ ಮೇಲಿನ ದಾಳಿಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು “ದುರಂತ’ ಎಂದು ಕರೆದಿದ್ದಾರೆ. ಮುಗ್ಧ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವ ನಮ್ಮ ಪ್ರಯತ್ನಗಳ ಹೊರತಾಗಿಯೂ, ನಿನ್ನೆ ರಾತ್ರಿ ಒಂದು ತಪ್ಪುಗಿ ದುರಂತ ಸಂಭವಿಸಿದೆ. ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಳೆದ ಎರಡು ವಾರಗಳಿಂದ ಇಸ್ರೇಲ್ ರಾಫಾ ಮೇಲೆ ದಾಳಿ ನಡೆಸುತ್ತಿದೆ. ರಾಫಾ ಮೇಲಿನ ದಾಳಿಯನ್ನು ಹಮಾಸ್‌ನ್ನು ಸೋಲಿಸುವ ತನ್ನ ಕಾರ್ಯತಂತ್ರದ ಭಾಗ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಮೇ 24 ರಂದು, ರಫಾದಲ್ಲಿ ಇಸ್ರೇಲ್ ತನ್ನ ಆಕ್ರಮಣಕಾರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ICJ ಆದೇಶಿಸಿದೆ. ನ್ಯಾಯಾಲಯದ ಸೂಚನೆಯ ಹೊರತಾಗಿಯೂ, ಇಸ್ರೇಲ್ ರಫಾದಲ್ಲಿ ತನ್ನ ದಾಳಿಯನ್ನು ಮುಂದುವರೆಸಿದ್ದು, ಮೇ 25ರಿಂದ 60ಕ್ಕೂ ಹೆಚ್ಚು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದೆ.

ರಫಾದಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ 900 ಕೆಜಿ ತೂಕದ 7 ಬಾಂಬ್‌ಗಳನ್ನು ಹಾಕಿದೆ. ಇಸ್ರೇಲ್‌ ಸೈನ್ಯವು “ನಿಖರವಾದ ಯುದ್ಧಸಾಮಗ್ರಿಗಳೊಂದಿಗೆ” ರಫಾವನ್ನು ಗುರಿಯಾಗಿಸಿಕೊಂಡಿದೆ. ದಾಳಿಯ ಮೊದಲು ಆ ಪ್ರದೇಶದಿಂದ ಸ್ಥಳಾಂತರವಾಗುವಂತೆ ಇಸ್ರೇಲ್‌ ಮಿಲಿಟರಿ ಪಡೆ ನಾಗರಿಕರಿಗೆ ಎಚ್ಚರಿಕೆ ನೀಡಿಲ್ಲ ಎಂದು ಗಾಝಾದ ಸರ್ಕಾರಿ ಮಾಧ್ಯಮ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...