Homeಮುಖಪುಟ'ಆಲ್ ಐಸ್ ಆನ್ ರಫಾ': ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

- Advertisement -
- Advertisement -

ಇಸ್ರೇಲ್‌ ರಫಾ ಮೇಲಿನ ಆಕ್ರಮಣದ ಮಧ್ಯೆ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸದ್ದು ಮಾಡಿದೆ. ಭಾರತೀಯ ಸೆಲೆಬ್ರಿಟಿಗಳು ಹೆಚ್ಚಾಗಿ ಈ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಟ ದುಲ್ಕರ್ ಸಲ್ಮಾನ್, ಸಮಂತಾ ರುತ್ ಪ್ರಭು, ಟೊವಿನೋ ಥಾಮಸ್, ಕೀರ್ತಿ ಸುರೇಶ್, ಮಾಧುರಿ ದೀಕ್ಷಿತ್, ವರುಣ್ ಧವನ್, ವಿಜಯ್ ವರ್ಮಾ ಮತ್ತು ಇತರ ಹಲವು ಸೆಲೆಬ್ರಿಟಿಗಳು ರಫಾ ಮೇಲಿನ ಇಸ್ರೇಲ್‌ ಬಾಂಬ್ ದಾಳಿಯನ್ನು ಖಂಡಿಸಿ ‘ಆಲ್ ಐಸ್ ಆನ್ ರಫಾ’ ಎಂಬ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.

‘ಆಲ್ ಐಸ್ ಆನ್ ರಫಾ’ ಎಂಬ AI- ರಚಿತವಾದ ಚಿತ್ರದ ಪೋಸ್ಟ್‌ನ್ನು ಇನ್ಸ್ಟಾಗ್ರಾಂವೊಂದರಲ್ಲೇ  33 ದಶಲಕ್ಷಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ. ಚಿತ್ರವು ರಫಾದಲ್ಲಿನ ಪರಿಸ್ಥಿತಿಯನ್ನು ಪ್ರತಿನಿಧಿಸುತ್ತದೆ, ಅಲ್ಲಿನ ನಿರಾಶ್ರಿತ ಜನರನ್ನು ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಮತ್ತು ಮಿಲಿಟರಿ ಪಡೆಗಳು ಸುತ್ತುವರಿದಿರುವುದನ್ನು ಪ್ರತಿಬಿಂಬಿಸುತ್ತದೆ.

‘ಆಲ್ ಐಸ್ ಆನ್ ರಾಫಾ’ ಎಂಬ ಪದವು ಫೆಬ್ರವರಿ 2024ರಲ್ಲಿ ಆಕ್ರಮಿತ ಪ್ಯಾಲೇಸ್ತೀನ್‌ ಪ್ರಾಂತ್ಯಗಳ WHOನ ಕಚೇರಿಯ ನಿರ್ದೇಶಕ ಡಾ ರಿಕ್ ಪೀಪರ್‌ಕಾರ್ನ್ ಮೊದಲು ಬಳಕೆ ಮಾಡಿದ್ದಾರೆ. ‘ರಫಾದ ಮೇಲೆ ಎಲ್ಲರ ಕಣ್ಣುಗಳು’ ಎಂಬುವುದು ಗಾಝಾದ ರಫಾದಲ್ಲಿ ನಡೆಯುತ್ತಿರುವ ನರಮೇಧವನ್ನು ಉಲ್ಲೇಖಿಸುವ ಪದಗುಚ್ಛವಾಗಿದೆ. ಇಸ್ರೇಲ್‌ ರಫಾ ಮೇಲೆ ದಾಳಿ ನಡೆಸಿದರೆ ಅದು ಮಹಾ ದುರಂತ ಎಂದು ಡಾ. ಪೀಪರ್‌ಕಾರ್ನ್‌ ಹೇಳಿದ್ದಾರೆ. ರಾಫಾದಿಂದ WHOನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೀಪರ್‌ಕಾರ್ನ್ ‘ಎಲ್ಲಾ ಕಣ್ಣುಗಳು ರಫಾ ಮೇಲೆ ಇವೆ” ಎಂದು ಹೇಳಿದ್ದಾರೆ.

ಮೇ 26ರಂದು, ಇಸ್ರೇಲ್‌ ವಾಯುಪಡೆಗಳು ಇಸ್ರೇಲ್‌ನ ನಿರಾಶ್ರಿತರಿರುವ ಪ್ರದೇಶದ ಮೇಲೆ ನಡೆಸಿದ ವೈಮಾನಿಕ ದಾಳಿಗೆ ಕನಿಷ್ಠ 45 ಜನರ ಹತ್ಯೆ ನಡೆದಿದೆ. 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿರುವ ಯುನೈಟೆಡ್ ನೇಷನ್ಸ್ ರಿಲೀಫ್ ಅಂಡ್ ವರ್ಕ್ಸ್ ಏಜೆನ್ಸಿ(UNRWA) ಪ್ರಕಾರ, ಜನರು ರಫಾಗೆ ಓಡಿಹೋಗುವಂತೆ ಇಸ್ರೇಲ್‌ ಮಾಡಿದೆ. ಬಾಂಬ್ ಸ್ಫೋಟಗಳು, ಆಹಾರ ಮತ್ತು ನೀರಿನ ಕೊರತೆ, ತ್ಯಾಜ್ಯದ ರಾಶಿಗಳು ಮತ್ತು ಸೂಕ್ತವಲ್ಲದ ಜೀವನ ಪರಿಸ್ಥಿತಿಗಳ ನಡುವೆ ಇದು ಸಂಭವಿಸಿದೆ. ಗಾಝಾವು “ಭೂಮಿಯ ಮೇಲಿನ ನರಕ”ವಾಗಿದೆ ಮತ್ತು “ಗಾಝಾ ಪಟ್ಟಿಯಲ್ಲಿ ಯಾವುದೇ ಸುರಕ್ಷಿತ ಸ್ಥಳವಿಲ್ಲ” ಎಂದು UNRWA ಹೇಳಿದೆ. ಯಾರೂ ಸುರಕ್ಷಿತವಾಗಿಲ್ಲ, ನಾಗರಿಕರು ಸುರಕ್ಷಿತವಾಗಿಲ್ಲ, ನೆರವು ಕಾರ್ಯಕರ್ತರು ಸುರಕ್ಷಿತವಾಗಿಲ್ಲ, ನಮಗೆ ಕದನ ವಿರಾಮ ಬೇಕು ಎಂದು ಹೇಳಿದೆ.

ಈ ಮಧ್ಯೆ ರಫಾ ಮೇಲಿನ ದಾಳಿಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು “ದುರಂತ’ ಎಂದು ಕರೆದಿದ್ದಾರೆ. ಮುಗ್ಧ ನಾಗರಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳುವ ನಮ್ಮ ಪ್ರಯತ್ನಗಳ ಹೊರತಾಗಿಯೂ, ನಿನ್ನೆ ರಾತ್ರಿ ಒಂದು ತಪ್ಪುಗಿ ದುರಂತ ಸಂಭವಿಸಿದೆ. ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಳೆದ ಎರಡು ವಾರಗಳಿಂದ ಇಸ್ರೇಲ್ ರಾಫಾ ಮೇಲೆ ದಾಳಿ ನಡೆಸುತ್ತಿದೆ. ರಾಫಾ ಮೇಲಿನ ದಾಳಿಯನ್ನು ಹಮಾಸ್‌ನ್ನು ಸೋಲಿಸುವ ತನ್ನ ಕಾರ್ಯತಂತ್ರದ ಭಾಗ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಮೇ 24 ರಂದು, ರಫಾದಲ್ಲಿ ಇಸ್ರೇಲ್ ತನ್ನ ಆಕ್ರಮಣಕಾರಿ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ICJ ಆದೇಶಿಸಿದೆ. ನ್ಯಾಯಾಲಯದ ಸೂಚನೆಯ ಹೊರತಾಗಿಯೂ, ಇಸ್ರೇಲ್ ರಫಾದಲ್ಲಿ ತನ್ನ ದಾಳಿಯನ್ನು ಮುಂದುವರೆಸಿದ್ದು, ಮೇ 25ರಿಂದ 60ಕ್ಕೂ ಹೆಚ್ಚು ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದೆ.

ರಫಾದಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ 900 ಕೆಜಿ ತೂಕದ 7 ಬಾಂಬ್‌ಗಳನ್ನು ಹಾಕಿದೆ. ಇಸ್ರೇಲ್‌ ಸೈನ್ಯವು “ನಿಖರವಾದ ಯುದ್ಧಸಾಮಗ್ರಿಗಳೊಂದಿಗೆ” ರಫಾವನ್ನು ಗುರಿಯಾಗಿಸಿಕೊಂಡಿದೆ. ದಾಳಿಯ ಮೊದಲು ಆ ಪ್ರದೇಶದಿಂದ ಸ್ಥಳಾಂತರವಾಗುವಂತೆ ಇಸ್ರೇಲ್‌ ಮಿಲಿಟರಿ ಪಡೆ ನಾಗರಿಕರಿಗೆ ಎಚ್ಚರಿಕೆ ನೀಡಿಲ್ಲ ಎಂದು ಗಾಝಾದ ಸರ್ಕಾರಿ ಮಾಧ್ಯಮ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿರುಕುಳ ಆರೋಪ ಮಾಡಿದ ಕಾಮಿಡಿಯನ್‌ ನಳಿನ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...