Homeಮುಖಪುಟ'ಗಾಂಧಿ' ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ...

‘ಗಾಂಧಿ’ ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ ಕ್ಲಾಸ್‌ ತೆಗೆದುಕೊಂಡ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ರಿಚರ್ಡ್ ಅಟೆನ್‌ಬರೋ ಅವರು 1982ರಲ್ಲಿ ‘ಗಾಂಧಿ’ ಸಿನಿಮಾವನ್ನು ನಿರ್ಮಿಸುವವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಜಗತ್ತಿಗೆ ತಿಳಿದಿರಲಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು.

ಮಹಾತ್ಮಾ ಗಾಂಧಿ ಎಂದು ಕರೆಯಲ್ಪಡುವ ‘ಮೋಹನ್ ದಾಸ್ ಕರಮಚಂದ್ ಗಾಂಧಿ’ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿ ಜಗತ್ತಿನ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಅವರು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಮಹಾತ್ಮ ಗಾಂಧಿಯವರು 1937 ಮತ್ತು 1948ರ ನಡುವೆ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಐದು ಬಾರಿ ನಾಮನಿರ್ದೇಶನಗೊಂಡಿದ್ದರು. ಅಕ್ಟೋಬರ್ 2, 1869ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದ ಮಹತ್ಮಾ ಗಾಂಧಿ ‘ರಾಷ್ಟ್ರಪಿತ’ ಎಂದು ಹೆಸರುವಾಸಿಯಾಗಿದ್ದಾರೆ. 2007ರಲ್ಲಿ ವಿಶ್ವಸಂಸ್ಥೆಯು ಗಾಂಧಿಯವರ ಜನ್ಮದಿನವಾದ ಅಕ್ಟೋಬರ್ 2ನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ವನ್ನಾಗಿ ಘೋಷಿಸಿದೆ.

ಮೋದಿ ಹೇಳಿಕೆಗೆ ವ್ಯಕ್ತವಾದ ತೀವ್ರ ವಿರೋಧ:

ಪ್ರಧಾನಿ ನರೇಂದ್ರ ಮೋದಿಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.  ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ರಾಜ್ಯಸಭಾ ಸಂಸದೆ, ಪತ್ರಕರ್ತೆ ಸಾಗರಿಕಾ ಘೋಷ್, ರಿಚರ್ಡ್ ಅಟೆನ್‌ಬರೋ ಸಿನಿಮಾ ಮಾಡುವವರೆಗೂ ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಆಶ್ಚರ್ಯವೇನಿಲ್ಲ, ನಾಥೂರಾಂ ಗೋಡ್ಸೆಯ ಗೀಳು ಹೊಂದಿರುವವರಿಗೆ ಸಹಜವಾಗಿಯೇ ಗಾಂಧಿಯ ಬಗ್ಗೆ ಏನೂ ತಿಳಿದಿರುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌  ಮಾಡಿದ ಪತ್ರಕರ್ತೆ ಸ್ವಾತಿ ಚತುರ್ವೇದಿ, ಹೌದು ಪ್ರಧಾನಿ ಮೋದಿ, ಮಹಾತ್ಮಾ ಗಾಂಧಿಯವರು “ಚಲನಚಿತ್ರ” ಕ್ಕಿಂತ ಮೊದಲು ತಿಳಿದಿದ್ದರು ಎಂದು ಗಾಂಧೀಜಿ ಕುರಿತ ಅಂತರಾಷ್ಟ್ರೀಯ ಮ್ಯಾಗಝಿನ್‌ಗಳ ವರದಿಯನ್ನು ಉಲ್ಲೇಖಿಸಿ ಮೋದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪೋಸ್ಟ್‌ನಲ್ಲಿ ಅಮೆರಿಕ ಮೂಲದ ನ್ಯೂಸ್‌ವೀಕ್‌, ಟೈಮ್‌ ಮ್ಯಾಗಝೀನ್‌ ಪೋಟೋವನ್ನು ಉಲ್ಲೇಖಿಸಿದ್ದಾರೆ.

 

ನೆಹರೂವಿಯನ್‌ ಎಂಬ ಎಕ್ಸ್‌ ಖಾತೆ ಈ ಬಗ್ಗೆ ಮೋದಿಗೆ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿದ್ದು,  ಮಹಾತ್ಮಾ ಗಾಂಧಿಯವರ ಕುರಿತು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮಾತನಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ರಾಜಕೀಯ ತತ್ವಜ್ಞಾನಿ, ಅವರು 1955ರಿಂದ 1968ರಲ್ಲಿ ಹತ್ಯೆಯಾಗುವವರೆಗೆ ನಾಗರಿಕ ಹಕ್ಕುಗಳ ಚಳವಳಿಯಲ್ಲಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

 

ಈ ಕುರಿತು ಎಕ್ಸ್‌ನಲ್ಲಿ ಆದಿತ್ಯಸೇನ್‌ ಎಂಬವರು ಪ್ರತಿಕ್ರಿಯಿಸಿದ್ದು, ಸೂರ್ಯನ ಬಿಸಿಲಿಗೆ ಚುನಾವಣಾ ಪ್ರಚಾರ ಮಾಡುವಾಗ ಮೋದಿಯ ಸಣ್ಣ ಮೆದುಳು ಹುರಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ‘ನೀಲ್ಕ್’ ಎಂಬ ಎಕ್ಸ್‌ ಬಳಕೆದಾರರು, ಈ ಪಕ್ಷಕ್ಕೆ ಮತ ಹಾಕಿದ್ದಕ್ಕೆ ಇಂದು ನಾಚಿಕೆಯಾಗುತ್ತಿದೆ. ಈ ಜನರು ‘ಸಿನಿಮಾಗಳು ಗಾಂಧಿಯನ್ನು ಜಾಗತಿಕ ಐಕಾನ್ ಮಾಡಿದವು’ ಎಂದು ಭಾವಿಸುತ್ತಾರೆ, ವಾಸ್ತವವಾಗಿ, ಅವರು ಜಾಗತಿಕ ಐಕಾನ್ ಆಗಿದ್ದರು, ಆದ್ದರಿಂದ ವಿದೇಶಿ ನಿರ್ದೇಶಕರು ಅವರ ಜೀವನವನ್ನು ಆಧರಿಸಿ ಚಲನಚಿತ್ರವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮನರಂಜನ್‌ ಬಾಗ್‌ ಎಂಬವರು ಪ್ರತಿಕ್ರಿಯಿಸಿದ್ದು, ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿಲ್ಲದಿದ್ದರೆ, ಯುಕೆ ಮೂಲದ ರಿಚರ್ಡ್ ಅಟೆನ್‌ಬರೋಗೆ ಗಾಂಧಿಯ ಬಗ್ಗೆ ಹೇಗೆ ಗೊತ್ತು? ಎಂದು ಮೋದಿಗೆ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...