Homeಮುಖಪುಟ'ಗಾಂಧಿ' ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ...

‘ಗಾಂಧಿ’ ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ ಕ್ಲಾಸ್‌ ತೆಗೆದುಕೊಂಡ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ರಿಚರ್ಡ್ ಅಟೆನ್‌ಬರೋ ಅವರು 1982ರಲ್ಲಿ ‘ಗಾಂಧಿ’ ಸಿನಿಮಾವನ್ನು ನಿರ್ಮಿಸುವವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಜಗತ್ತಿಗೆ ತಿಳಿದಿರಲಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು.

ಮಹಾತ್ಮಾ ಗಾಂಧಿ ಎಂದು ಕರೆಯಲ್ಪಡುವ ‘ಮೋಹನ್ ದಾಸ್ ಕರಮಚಂದ್ ಗಾಂಧಿ’ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿ ಜಗತ್ತಿನ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಅವರು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಮಹಾತ್ಮ ಗಾಂಧಿಯವರು 1937 ಮತ್ತು 1948ರ ನಡುವೆ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಐದು ಬಾರಿ ನಾಮನಿರ್ದೇಶನಗೊಂಡಿದ್ದರು. ಅಕ್ಟೋಬರ್ 2, 1869ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದ ಮಹತ್ಮಾ ಗಾಂಧಿ ‘ರಾಷ್ಟ್ರಪಿತ’ ಎಂದು ಹೆಸರುವಾಸಿಯಾಗಿದ್ದಾರೆ. 2007ರಲ್ಲಿ ವಿಶ್ವಸಂಸ್ಥೆಯು ಗಾಂಧಿಯವರ ಜನ್ಮದಿನವಾದ ಅಕ್ಟೋಬರ್ 2ನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ವನ್ನಾಗಿ ಘೋಷಿಸಿದೆ.

ಮೋದಿ ಹೇಳಿಕೆಗೆ ವ್ಯಕ್ತವಾದ ತೀವ್ರ ವಿರೋಧ:

ಪ್ರಧಾನಿ ನರೇಂದ್ರ ಮೋದಿಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.  ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ರಾಜ್ಯಸಭಾ ಸಂಸದೆ, ಪತ್ರಕರ್ತೆ ಸಾಗರಿಕಾ ಘೋಷ್, ರಿಚರ್ಡ್ ಅಟೆನ್‌ಬರೋ ಸಿನಿಮಾ ಮಾಡುವವರೆಗೂ ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಆಶ್ಚರ್ಯವೇನಿಲ್ಲ, ನಾಥೂರಾಂ ಗೋಡ್ಸೆಯ ಗೀಳು ಹೊಂದಿರುವವರಿಗೆ ಸಹಜವಾಗಿಯೇ ಗಾಂಧಿಯ ಬಗ್ಗೆ ಏನೂ ತಿಳಿದಿರುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌  ಮಾಡಿದ ಪತ್ರಕರ್ತೆ ಸ್ವಾತಿ ಚತುರ್ವೇದಿ, ಹೌದು ಪ್ರಧಾನಿ ಮೋದಿ, ಮಹಾತ್ಮಾ ಗಾಂಧಿಯವರು “ಚಲನಚಿತ್ರ” ಕ್ಕಿಂತ ಮೊದಲು ತಿಳಿದಿದ್ದರು ಎಂದು ಗಾಂಧೀಜಿ ಕುರಿತ ಅಂತರಾಷ್ಟ್ರೀಯ ಮ್ಯಾಗಝಿನ್‌ಗಳ ವರದಿಯನ್ನು ಉಲ್ಲೇಖಿಸಿ ಮೋದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪೋಸ್ಟ್‌ನಲ್ಲಿ ಅಮೆರಿಕ ಮೂಲದ ನ್ಯೂಸ್‌ವೀಕ್‌, ಟೈಮ್‌ ಮ್ಯಾಗಝೀನ್‌ ಪೋಟೋವನ್ನು ಉಲ್ಲೇಖಿಸಿದ್ದಾರೆ.

 

ನೆಹರೂವಿಯನ್‌ ಎಂಬ ಎಕ್ಸ್‌ ಖಾತೆ ಈ ಬಗ್ಗೆ ಮೋದಿಗೆ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿದ್ದು,  ಮಹಾತ್ಮಾ ಗಾಂಧಿಯವರ ಕುರಿತು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮಾತನಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ರಾಜಕೀಯ ತತ್ವಜ್ಞಾನಿ, ಅವರು 1955ರಿಂದ 1968ರಲ್ಲಿ ಹತ್ಯೆಯಾಗುವವರೆಗೆ ನಾಗರಿಕ ಹಕ್ಕುಗಳ ಚಳವಳಿಯಲ್ಲಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

 

ಈ ಕುರಿತು ಎಕ್ಸ್‌ನಲ್ಲಿ ಆದಿತ್ಯಸೇನ್‌ ಎಂಬವರು ಪ್ರತಿಕ್ರಿಯಿಸಿದ್ದು, ಸೂರ್ಯನ ಬಿಸಿಲಿಗೆ ಚುನಾವಣಾ ಪ್ರಚಾರ ಮಾಡುವಾಗ ಮೋದಿಯ ಸಣ್ಣ ಮೆದುಳು ಹುರಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ‘ನೀಲ್ಕ್’ ಎಂಬ ಎಕ್ಸ್‌ ಬಳಕೆದಾರರು, ಈ ಪಕ್ಷಕ್ಕೆ ಮತ ಹಾಕಿದ್ದಕ್ಕೆ ಇಂದು ನಾಚಿಕೆಯಾಗುತ್ತಿದೆ. ಈ ಜನರು ‘ಸಿನಿಮಾಗಳು ಗಾಂಧಿಯನ್ನು ಜಾಗತಿಕ ಐಕಾನ್ ಮಾಡಿದವು’ ಎಂದು ಭಾವಿಸುತ್ತಾರೆ, ವಾಸ್ತವವಾಗಿ, ಅವರು ಜಾಗತಿಕ ಐಕಾನ್ ಆಗಿದ್ದರು, ಆದ್ದರಿಂದ ವಿದೇಶಿ ನಿರ್ದೇಶಕರು ಅವರ ಜೀವನವನ್ನು ಆಧರಿಸಿ ಚಲನಚಿತ್ರವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮನರಂಜನ್‌ ಬಾಗ್‌ ಎಂಬವರು ಪ್ರತಿಕ್ರಿಯಿಸಿದ್ದು, ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿಲ್ಲದಿದ್ದರೆ, ಯುಕೆ ಮೂಲದ ರಿಚರ್ಡ್ ಅಟೆನ್‌ಬರೋಗೆ ಗಾಂಧಿಯ ಬಗ್ಗೆ ಹೇಗೆ ಗೊತ್ತು? ಎಂದು ಮೋದಿಗೆ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...