Homeಮುಖಪುಟ'ಗಾಂಧಿ' ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ...

‘ಗಾಂಧಿ’ ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ ಕ್ಲಾಸ್‌ ತೆಗೆದುಕೊಂಡ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ರಿಚರ್ಡ್ ಅಟೆನ್‌ಬರೋ ಅವರು 1982ರಲ್ಲಿ ‘ಗಾಂಧಿ’ ಸಿನಿಮಾವನ್ನು ನಿರ್ಮಿಸುವವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಜಗತ್ತಿಗೆ ತಿಳಿದಿರಲಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು.

ಮಹಾತ್ಮಾ ಗಾಂಧಿ ಎಂದು ಕರೆಯಲ್ಪಡುವ ‘ಮೋಹನ್ ದಾಸ್ ಕರಮಚಂದ್ ಗಾಂಧಿ’ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿ ಜಗತ್ತಿನ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಅವರು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಮಹಾತ್ಮ ಗಾಂಧಿಯವರು 1937 ಮತ್ತು 1948ರ ನಡುವೆ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಐದು ಬಾರಿ ನಾಮನಿರ್ದೇಶನಗೊಂಡಿದ್ದರು. ಅಕ್ಟೋಬರ್ 2, 1869ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದ ಮಹತ್ಮಾ ಗಾಂಧಿ ‘ರಾಷ್ಟ್ರಪಿತ’ ಎಂದು ಹೆಸರುವಾಸಿಯಾಗಿದ್ದಾರೆ. 2007ರಲ್ಲಿ ವಿಶ್ವಸಂಸ್ಥೆಯು ಗಾಂಧಿಯವರ ಜನ್ಮದಿನವಾದ ಅಕ್ಟೋಬರ್ 2ನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ವನ್ನಾಗಿ ಘೋಷಿಸಿದೆ.

ಮೋದಿ ಹೇಳಿಕೆಗೆ ವ್ಯಕ್ತವಾದ ತೀವ್ರ ವಿರೋಧ:

ಪ್ರಧಾನಿ ನರೇಂದ್ರ ಮೋದಿಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.  ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ರಾಜ್ಯಸಭಾ ಸಂಸದೆ, ಪತ್ರಕರ್ತೆ ಸಾಗರಿಕಾ ಘೋಷ್, ರಿಚರ್ಡ್ ಅಟೆನ್‌ಬರೋ ಸಿನಿಮಾ ಮಾಡುವವರೆಗೂ ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಆಶ್ಚರ್ಯವೇನಿಲ್ಲ, ನಾಥೂರಾಂ ಗೋಡ್ಸೆಯ ಗೀಳು ಹೊಂದಿರುವವರಿಗೆ ಸಹಜವಾಗಿಯೇ ಗಾಂಧಿಯ ಬಗ್ಗೆ ಏನೂ ತಿಳಿದಿರುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌  ಮಾಡಿದ ಪತ್ರಕರ್ತೆ ಸ್ವಾತಿ ಚತುರ್ವೇದಿ, ಹೌದು ಪ್ರಧಾನಿ ಮೋದಿ, ಮಹಾತ್ಮಾ ಗಾಂಧಿಯವರು “ಚಲನಚಿತ್ರ” ಕ್ಕಿಂತ ಮೊದಲು ತಿಳಿದಿದ್ದರು ಎಂದು ಗಾಂಧೀಜಿ ಕುರಿತ ಅಂತರಾಷ್ಟ್ರೀಯ ಮ್ಯಾಗಝಿನ್‌ಗಳ ವರದಿಯನ್ನು ಉಲ್ಲೇಖಿಸಿ ಮೋದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪೋಸ್ಟ್‌ನಲ್ಲಿ ಅಮೆರಿಕ ಮೂಲದ ನ್ಯೂಸ್‌ವೀಕ್‌, ಟೈಮ್‌ ಮ್ಯಾಗಝೀನ್‌ ಪೋಟೋವನ್ನು ಉಲ್ಲೇಖಿಸಿದ್ದಾರೆ.

 

ನೆಹರೂವಿಯನ್‌ ಎಂಬ ಎಕ್ಸ್‌ ಖಾತೆ ಈ ಬಗ್ಗೆ ಮೋದಿಗೆ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿದ್ದು,  ಮಹಾತ್ಮಾ ಗಾಂಧಿಯವರ ಕುರಿತು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮಾತನಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ರಾಜಕೀಯ ತತ್ವಜ್ಞಾನಿ, ಅವರು 1955ರಿಂದ 1968ರಲ್ಲಿ ಹತ್ಯೆಯಾಗುವವರೆಗೆ ನಾಗರಿಕ ಹಕ್ಕುಗಳ ಚಳವಳಿಯಲ್ಲಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

 

ಈ ಕುರಿತು ಎಕ್ಸ್‌ನಲ್ಲಿ ಆದಿತ್ಯಸೇನ್‌ ಎಂಬವರು ಪ್ರತಿಕ್ರಿಯಿಸಿದ್ದು, ಸೂರ್ಯನ ಬಿಸಿಲಿಗೆ ಚುನಾವಣಾ ಪ್ರಚಾರ ಮಾಡುವಾಗ ಮೋದಿಯ ಸಣ್ಣ ಮೆದುಳು ಹುರಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ‘ನೀಲ್ಕ್’ ಎಂಬ ಎಕ್ಸ್‌ ಬಳಕೆದಾರರು, ಈ ಪಕ್ಷಕ್ಕೆ ಮತ ಹಾಕಿದ್ದಕ್ಕೆ ಇಂದು ನಾಚಿಕೆಯಾಗುತ್ತಿದೆ. ಈ ಜನರು ‘ಸಿನಿಮಾಗಳು ಗಾಂಧಿಯನ್ನು ಜಾಗತಿಕ ಐಕಾನ್ ಮಾಡಿದವು’ ಎಂದು ಭಾವಿಸುತ್ತಾರೆ, ವಾಸ್ತವವಾಗಿ, ಅವರು ಜಾಗತಿಕ ಐಕಾನ್ ಆಗಿದ್ದರು, ಆದ್ದರಿಂದ ವಿದೇಶಿ ನಿರ್ದೇಶಕರು ಅವರ ಜೀವನವನ್ನು ಆಧರಿಸಿ ಚಲನಚಿತ್ರವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮನರಂಜನ್‌ ಬಾಗ್‌ ಎಂಬವರು ಪ್ರತಿಕ್ರಿಯಿಸಿದ್ದು, ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿಲ್ಲದಿದ್ದರೆ, ಯುಕೆ ಮೂಲದ ರಿಚರ್ಡ್ ಅಟೆನ್‌ಬರೋಗೆ ಗಾಂಧಿಯ ಬಗ್ಗೆ ಹೇಗೆ ಗೊತ್ತು? ಎಂದು ಮೋದಿಗೆ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...