Homeಮುಖಪುಟ'ಗಾಂಧಿ' ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ...

‘ಗಾಂಧಿ’ ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ ಕ್ಲಾಸ್‌ ತೆಗೆದುಕೊಂಡ ‘ಎಕ್ಸ್‌’ ಬಳಕೆದಾರರು

- Advertisement -
- Advertisement -

ರಿಚರ್ಡ್ ಅಟೆನ್‌ಬರೋ ಅವರು 1982ರಲ್ಲಿ ‘ಗಾಂಧಿ’ ಸಿನಿಮಾವನ್ನು ನಿರ್ಮಿಸುವವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಜಗತ್ತಿಗೆ ತಿಳಿದಿರಲಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ 75 ವರ್ಷಗಳಲ್ಲಿ ಗಾಂಧಿಯವರ ಜಾಗತಿಕ ಖ್ಯಾತಿಯನ್ನು ಹೆಚ್ಚು ಮಾಡುವುದು ದೇಶದ ಕೆಲಸವಾಗಿರಲಿಲ್ಲವೇ ಎಂದು  ಪ್ರಶ್ನಿಸಿದ್ದರು. ಮಹಾತ್ಮಾ ಗಾಂಧೀಜಿ ಒಬ್ಬ ಮಹಾನ್ ಚೇತನ. ಕಳೆದ 75 ವರ್ಷಗಳಲ್ಲಿ ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವುದು ನಮ್ಮ ಜವಾಬ್ದಾರಿಯಲ್ಲವೇ? ಇದು ಯಾರಿಗೂ ತಿಳಿದಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. ಮೊದಲ ಬಾರಿಗೆ, 1982ರಲ್ಲಿ ಗಾಂಧಿ ಚಲನಚಿತ್ರವನ್ನು ನಿರ್ಮಿಸಿದಾಗ, ಅವರು ಯಾರು ಎಂದು ಜಗತ್ತು ಕುತೂಹಲದಿಂದ ನೋಡಿತ್ತು. ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಅವರ ಬಗ್ಗೆ ಜಗತ್ತಿಗೆ ತಿಳಿದಿದ್ದರೆ, ಜಗತ್ತು ಗಾಂಧಿ ಬಗ್ಗೆ ಕೂಡ ಅಷ್ಟೇ ತಿಳಿದಿರಬೇಕಿತ್ತು.  ಗಾಂಧಿ ಮತ್ತು ಅವರ ಮೂಲಕ ಭಾರತವನ್ನು ಗುರುತಿಸಬೇಕಾಗಿತ್ತು ಎಂದು ನಾನು ಜಗತ್ತನ್ನು ಸುತ್ತಿದ ನಂತರ ಹೇಳುತ್ತಿದ್ದೇನೆ ಎಂದು ಮೋದಿ ಹೇಳಿದ್ದರು.

ಮಹಾತ್ಮಾ ಗಾಂಧಿ ಎಂದು ಕರೆಯಲ್ಪಡುವ ‘ಮೋಹನ್ ದಾಸ್ ಕರಮಚಂದ್ ಗಾಂಧಿ’ ಶಾಂತಿ ಮತ್ತು ಅಹಿಂಸೆಯ ಸಂಕೇತವಾಗಿ ಜಗತ್ತಿನ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಅವರು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಮಹಾತ್ಮ ಗಾಂಧಿಯವರು 1937 ಮತ್ತು 1948ರ ನಡುವೆ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಐದು ಬಾರಿ ನಾಮನಿರ್ದೇಶನಗೊಂಡಿದ್ದರು. ಅಕ್ಟೋಬರ್ 2, 1869ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದ ಮಹತ್ಮಾ ಗಾಂಧಿ ‘ರಾಷ್ಟ್ರಪಿತ’ ಎಂದು ಹೆಸರುವಾಸಿಯಾಗಿದ್ದಾರೆ. 2007ರಲ್ಲಿ ವಿಶ್ವಸಂಸ್ಥೆಯು ಗಾಂಧಿಯವರ ಜನ್ಮದಿನವಾದ ಅಕ್ಟೋಬರ್ 2ನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ವನ್ನಾಗಿ ಘೋಷಿಸಿದೆ.

ಮೋದಿ ಹೇಳಿಕೆಗೆ ವ್ಯಕ್ತವಾದ ತೀವ್ರ ವಿರೋಧ:

ಪ್ರಧಾನಿ ನರೇಂದ್ರ ಮೋದಿಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.  ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ರಾಜ್ಯಸಭಾ ಸಂಸದೆ, ಪತ್ರಕರ್ತೆ ಸಾಗರಿಕಾ ಘೋಷ್, ರಿಚರ್ಡ್ ಅಟೆನ್‌ಬರೋ ಸಿನಿಮಾ ಮಾಡುವವರೆಗೂ ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಆಶ್ಚರ್ಯವೇನಿಲ್ಲ, ನಾಥೂರಾಂ ಗೋಡ್ಸೆಯ ಗೀಳು ಹೊಂದಿರುವವರಿಗೆ ಸಹಜವಾಗಿಯೇ ಗಾಂಧಿಯ ಬಗ್ಗೆ ಏನೂ ತಿಳಿದಿರುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌  ಮಾಡಿದ ಪತ್ರಕರ್ತೆ ಸ್ವಾತಿ ಚತುರ್ವೇದಿ, ಹೌದು ಪ್ರಧಾನಿ ಮೋದಿ, ಮಹಾತ್ಮಾ ಗಾಂಧಿಯವರು “ಚಲನಚಿತ್ರ” ಕ್ಕಿಂತ ಮೊದಲು ತಿಳಿದಿದ್ದರು ಎಂದು ಗಾಂಧೀಜಿ ಕುರಿತ ಅಂತರಾಷ್ಟ್ರೀಯ ಮ್ಯಾಗಝಿನ್‌ಗಳ ವರದಿಯನ್ನು ಉಲ್ಲೇಖಿಸಿ ಮೋದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪೋಸ್ಟ್‌ನಲ್ಲಿ ಅಮೆರಿಕ ಮೂಲದ ನ್ಯೂಸ್‌ವೀಕ್‌, ಟೈಮ್‌ ಮ್ಯಾಗಝೀನ್‌ ಪೋಟೋವನ್ನು ಉಲ್ಲೇಖಿಸಿದ್ದಾರೆ.

 

ನೆಹರೂವಿಯನ್‌ ಎಂಬ ಎಕ್ಸ್‌ ಖಾತೆ ಈ ಬಗ್ಗೆ ಮೋದಿಗೆ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿದ್ದು,  ಮಹಾತ್ಮಾ ಗಾಂಧಿಯವರ ಕುರಿತು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮಾತನಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ರಾಜಕೀಯ ತತ್ವಜ್ಞಾನಿ, ಅವರು 1955ರಿಂದ 1968ರಲ್ಲಿ ಹತ್ಯೆಯಾಗುವವರೆಗೆ ನಾಗರಿಕ ಹಕ್ಕುಗಳ ಚಳವಳಿಯಲ್ಲಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.

 

ಈ ಕುರಿತು ಎಕ್ಸ್‌ನಲ್ಲಿ ಆದಿತ್ಯಸೇನ್‌ ಎಂಬವರು ಪ್ರತಿಕ್ರಿಯಿಸಿದ್ದು, ಸೂರ್ಯನ ಬಿಸಿಲಿಗೆ ಚುನಾವಣಾ ಪ್ರಚಾರ ಮಾಡುವಾಗ ಮೋದಿಯ ಸಣ್ಣ ಮೆದುಳು ಹುರಿದಿದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ‘ನೀಲ್ಕ್’ ಎಂಬ ಎಕ್ಸ್‌ ಬಳಕೆದಾರರು, ಈ ಪಕ್ಷಕ್ಕೆ ಮತ ಹಾಕಿದ್ದಕ್ಕೆ ಇಂದು ನಾಚಿಕೆಯಾಗುತ್ತಿದೆ. ಈ ಜನರು ‘ಸಿನಿಮಾಗಳು ಗಾಂಧಿಯನ್ನು ಜಾಗತಿಕ ಐಕಾನ್ ಮಾಡಿದವು’ ಎಂದು ಭಾವಿಸುತ್ತಾರೆ, ವಾಸ್ತವವಾಗಿ, ಅವರು ಜಾಗತಿಕ ಐಕಾನ್ ಆಗಿದ್ದರು, ಆದ್ದರಿಂದ ವಿದೇಶಿ ನಿರ್ದೇಶಕರು ಅವರ ಜೀವನವನ್ನು ಆಧರಿಸಿ ಚಲನಚಿತ್ರವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮನರಂಜನ್‌ ಬಾಗ್‌ ಎಂಬವರು ಪ್ರತಿಕ್ರಿಯಿಸಿದ್ದು, ಮಹಾತ್ಮಗಾಂಧಿ ಬಗ್ಗೆ ಯಾರಿಗೂ ತಿಳಿದಿಲ್ಲದಿದ್ದರೆ, ಯುಕೆ ಮೂಲದ ರಿಚರ್ಡ್ ಅಟೆನ್‌ಬರೋಗೆ ಗಾಂಧಿಯ ಬಗ್ಗೆ ಹೇಗೆ ಗೊತ್ತು? ಎಂದು ಮೋದಿಗೆ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...