Homeಕರ್ನಾಟಕಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್‌

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್‌

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಅತ್ಯಾಚಾರ ಸೇರಿದಂತೆ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ  ತಿರಸ್ಕರಿಸಿದೆ. ಪ್ರಜ್ವಲ್ ಪರ ವಕೀಲ ಅರುಣ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಹಾಸನದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ವೇಳೆ ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಆಗಿತ್ತು. ಎಪ್ರಿಲ್ 26ರಂದು ನಡೆದ ಎರಡನೇ ಹಂತದ ಚುನಾವಣೆಯ ನಂತರ ಪ್ರಜ್ವಲ್ ಅವರು ದೇಶವನ್ನು ತೊರೆದಿದ್ದರು. ಈ ಕುರಿತ ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರವು ಎಸ್‌ಐಟಿಯನ್ನು ರಚಿಸಿತ್ತು. ಬಳಿಕ ಪ್ರಜ್ವಲ್‌ ಪತ್ತೆಗೆ ಲುಕ್‌ ಔಟ್‌ ನೊಟೀಸ್‌ ಮತ್ತು ರೆಡ್‌ ಕಾರ್ನರ್‌ ನೊಟೀಸ್‌ ಜಾರಿ ಮಾಡಲಾಗಿತ್ತು. ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ನ್ನು ಹಿಂಪಡೆಯಲು ವಿನಂತಿಯೊಂದಿಗೆ ಕೇಂದ್ರ ಸರಕಾರವನ್ನು ಕೂಡ ಸಂಪರ್ಕಿಸಲಾಗಿತ್ತು.

ನಾಪತ್ತೆಯಾದ ಒಂದು ತಿಂಗಳ ನಂತರ, ಪ್ರಜ್ವಲ್ ಸೋಮವಾರದಂದು ವೀಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ತಾನು ತನಿಖೆಗೆ ಸಹಕರಿಸುತ್ತೇನೆ ಮತ್ತು ಮೇ 31ರಂದು ಬೆಳಿಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗುತ್ತೇನೆ. ನನಗೆ ನ್ಯಾಯಾಂಗದ ಮೇಲೆ ನಂಬಿಕೆಯಿದ್ದು, ನ್ಯಾಯಾಲಯದ ಮೂಲಕ ಸುಳ್ಳು ಪ್ರಕರಣಗಳಿಂದ ಮುಕ್ತಿ ಹೊಂದುವ ವಿಶ್ವಾಸವಿದೆ ಎಂದು ಹೇಳಿದ್ದರು.

ಇದರ ಬೆನ್ನಲ್ಲಿ ಮೇ 30ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ಪ್ರಜ್ವಲ್‌ ಹೆಸರಿನಲ್ಲಿ ವಿಮಾನ ಟಿಕೆಟ್ ಬುಕ್‌ ಆಗಿದೆ. ಪ್ರಜ್ವಲ್ ವಿರುದ್ಧ ಈಗಾಗಲೇ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದ್ದು,  ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಬಹುದಾಗಿದೆ.

ಪ್ರಜ್ವಲ್ ರೇವಣ್ಣ ವಾಪಸ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪ್ರಜ್ವಲ್ ವಿರುದ್ಧ ವಾರಂಟ್ ಜಾರಿಯಾಗಿರುವುದರಿಂದ ಬಂಧಿಸಬೇಕಾಗುತ್ತದೆ. ಇದಕ್ಕೆ ಎಸ್ಐಟಿಯವರು ಬೇಕಿದ್ದ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಡಿಯೋ ವೈರಲ್‌ ಬೆನ್ನಲ್ಲಿ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ಎಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಅಪ್ಪ-ಮಗನ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಿಸಲಾಗಿತ್ತು.

ಇದನ್ನು ಓದಿ:‘ಗಾಂಧಿ’ ಸಿನಿಮಾ ಹೊರ ಬರುವ ಮೊದಲು ಮಹತ್ಮಾ ಗಾಂಧಿ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂದ ಮೋದಿಗೆ ಕ್ಲಾಸ್‌ ತೆಗೆದುಕೊಂಡ ‘ಎಕ್ಸ್‌’ ಬಳಕೆದಾರರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...