Homeಕರ್ನಾಟಕ'ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

‘ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಕೇಂದ್ರದ ಬಿಜೆಪಿ ಸರ್ಕಾರ 'ಬಲತ್ಕಾರಿಗಳ ಬಚಾವು' ಮಾಡುವ ಸರ್ಕಾರವಾಗಿದೆ

- Advertisement -
- Advertisement -

“ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ. ರೇವಣ್ಣ ಕುಟುಂಬವು ರಾಜಕೀಯ, ಹಣ ಬಲದಿಂದ ನಡೆಸುವ ಅವ್ಯವಹಾರಗಳಿಗೆ, ದರ್ಪಕ್ಕೆ ಇನ್ನು ಉಳಿಗಾಲವಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ‘ಬಲತ್ಕಾರಿಗಳ ಬಚಾವು’ ಮಾಡುವ ಸರ್ಕಾರವಾಗಿದೆ. ಆ ಸರ್ಕಾರವನ್ನು ಜೂನ್ 4ರ ನಂತರ ಕೆಳಗಿಸಬೇಕು” ಎಂದು ಮಹಿಳಾ ಹೋರಾಟಗಾರ್ತಿ ಸುಭಾಷಿಣಿ ಅಲಿ ಹೇಳಿದ್ದಾರೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ನಡೆಯುತ್ತಿರುವ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, “ಶತಮಾನಗಳಿಂದಲೂ ಮಹಿಳಾ ಸಂಘಟನೆ ಸಂಘರ್ಷ ಮಾಡುತ್ತಿದೆ. ಸಂವಿಧಾನ ಜಾರಿಯಾದ ನಂತರವೂ ದೇಶದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಇದೆ. ಭಾರತದಲ್ಲಿ ಸಾವಂತವಾದ, ಪುರಷವಾದ ಬೇರೂರಿದೆ. ಜೊತೆಗೆ, ಬಂಡವಾಳ ಮತ್ತು ಮತೀಯವಾದವೂ ಸೇರಿಕೊಂಡಿದೆ. ಇವುಗಳನ್ನು ಒಡೆಯದಿದ್ದರೆ, ನಮಗಾರಿಗೂ ಉಳಿವಿಲ್ಲ” ಎಂದರು.

“ಪ್ರಜ್ವಲ್ ರೇವಣ್ಣ ಮತ್ತು ಆತನ ತಂದೆ ರೇವಣ್ಣನನ್ನು ಬಂಧಿಸಿ, ಜೈಲಿಗಟ್ಟಬೇಕು. ಅವರಿಗೆ ಓನ್ಲೀ ಜೈಲ್, ನೋ ಬೇಲ್’ (ಜೈಲು ಮಾತ್ರ, ಜಾಮೀನು ಇಲ್ಲ) ಆಗಬೇಕು. ಇದೇ ನಮ್ಮ ಪ್ರಮುಖ ಒತ್ತಾಯ. ರೇವಣ್ಣ ಕುಟುಂಬ ತನಿಖೆಯಲ್ಲಿ ತಮ್ಮ ಪ್ರಭಾವವನ್ನು ಬಳಸಬಹುದು. ಕರ್ನಾಟಕ ಸರ್ಕಾರಕ್ಕೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಬಾರದು. ಅವರನ್ನು ಜೈಲಿಗಟ್ಟಬೇಕು” ಎಂದು ಒತ್ತಾಯಿಸಿದರು.

“ಸಂತ್ರಸ್ತ ಮಹಿಳೆಯರೊಂದಿಗೆ ನಾವಿದ್ದೇವೆ. ಅವರೊಂದಿಗೆ ಕೊನೆವರೆಗೂ ಹೋರಾಡುತ್ತೇವೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತದೆ. ಸಂತ್ರಸ್ತೆಯರು ಎದೆಗುಂದಬೇಕಿಲ್ಲ” ಎಂದು ಬಲಿಪಶುಗಳಿಗೆ ಧೈರ್ಯ ತುಂಬುವ ಮಾತನಾಡಿದರು.

“ಸರ್ಕಾರಿ ಅಧಿಕಾರಿಗಳು, ಕಾರ್ಯಕರ್ತರು ಅಸಹಾಯಕ ಹೆಣ್ನುಮಕ್ಕಳು ಸಣ್ಣ ಪುಟ್ಟ ಸಹಾಯ ಕೇಳಲು ಬಂದಾಗ ಅವರ ಮೇಲೆ ರೇವಣ್ಣ ಮತ್ತು ಆತನ ಪುತ್ರ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಪರಿಹಾರ ನೀಡಬೇಕು. ಆಪ್ತ ಸಮಾಲೋಚನೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು:

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್ ಸತ್ಯಾಗ್ರಹ. ಎರಡು, ದಂಡಿ ಉಪ್ಪಿನ ಸತ್ಯಾಗ್ರಹ. ಎರಡನೆಯದು, 2020-21ರ ರೈತ ಹೋರಾಟ. ಇವು ದೇಶ ಕಂಡ ಐತಿಹಾಸಿಕ ಹೋರಾಟಗಳು. ರೈತರು ಒಂದು ವರ್ಷಗಳ ನಿರಂತರ ಹೋರಾಟ ಮಾಡಿ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದರು. ಇವತ್ತು, ಹಾಸನದಲ್ಲಿ ನಡೆದಿರುವ ಈ ಲೈಂಗಿಕ ಹಗರಣದ ವಿರುದ್ಧದ ಹೋರಾಟವು ಅಂತಹ ಐತಿಹಾಸಿಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಹೋರಾಟಗಾರ ಎಸ್.ಆರ್ ಹಿರೇಮಠ್ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನ ಕಡೆಗೆ’ ಬೃಹತ್ ಹೋರಾಟದಲ್ಲಿ ಅವರು ಮಾತನಾಡಿದರು. “ಹಾಸನವನ್ನು ತಮ್ಮ ‘ತಮ್ಮ ರಿಪಬ್ಲಿಕ್’ ಮಾಡಿಕೊಂಡು, ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು. ಪಾಳೆಗಾರಿಕೆಯನ್ನು ಕೊನೆಗಾಣಿಸಲು ವ್ಯವಸ್ಥಿತ ಹೋರಾಟ ನಡೆಬೇಕು. ಬಳ್ಳಾರಿಯ ಪಾಳೆಗಾರಿಕೆಯನ್ನು ಮುರಿದಂತೆ, ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಮುಗಿಸಬೇಕು” ಎಂದರು.

“ಅತ್ಯಾಚಾರ, ಅನ್ಯಾಯ ಮಾಡಿದವರ ವಿರುದ್ಧ ಸಂತ್ರಸ್ತ ಮಹಿಳೆಯರು ಮುಂದೆ ಬಂದು ಹೋರಾಟ ನಡೆಸಬೇಕು. ತಮ್ಮ ಮೇಲಾದ ದೌರ್ಜನ್ಯಗಳ ವಿರುದ್ಧ ಗಟ್ಟಿಯಾಗಿ ಮಾತನಾಡಬೇಕು. ಸರ್ಕಾರ ನಡೆಸುತ್ತಿರುವವರು ಹಾಸನಕ್ಕೆ ಬರಬೇಕು. ಸಂತ್ರಸ್ತೆಯರಿಗೆ ಧೈರ್ಯ ತುಂಬಬೇಕು. ನ್ಯಾಯ ಕೊಡಿಸುವ ಭರವಸೆ ನೀಡಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ ದಾಖಲಿಸಬೇಕು: 

ಪ್ರಜ್ವಲ್ ರೇವಣ್ಣ ಅವರನ್ನು ಭಯೋತ್ಪಾದಕನಾಗಿ ಹೆಸರಿಸಬೇಕು. 400 ಮಂದಿ ಸಂತ್ರಸ್ತೆಯರಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ಗಳನ್ನು ದಾಖಲಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು. ಸಪ್ರತಿ ಸಂತ್ರಸ್ತೆಯರಿಗೆ ₹1 ಕೋಟಿ ಪರಿಹಾರ ನೀಡಬೇಕು. ರೇವಣ್ಣನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಹೈಕೋರ್ಟಿನಲ್ಲಿ ಜಾಮೀನನ್ನು ಪ್ರಶ್ನಿಸಿಲ್ಲ. ಪ್ರಜ್ವಲ್‌ನನ್ನೂ ಇದೇ ರೀತಿ ಜಾಮೀನಿನ ಮೇಲೆ ಬಿಟ್ಟುಬಿಡುವ ಸಾಧ್ಯತೆ ಇದೆ. ಹೀಗಾಗಿ, ನಾವು ಬೃಹತ್ ಹೋರಾಟ ನಡೆಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ಹೇಳಿದ್ದಾರೆ.

ಸರ್ಕಾರಗಳು ರೇವಣ್ಣ ಮತ್ತು ಆತನ ಪುತ್ರ ಪ್ರಜ್ವಲ್ ರೇವಣ್ಣನನ್ನು ರಕ್ಷಿಸುತ್ತಿರುವ ಸಾಧ್ಯತೆಗಳಿವೆ. ಪ್ರಜ್ವಲ್ ಸೈಕೋ ಪಾತ್ ಇದ್ದಂತಿದ್ದಾನೆ. ಆತನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ; ‘ಹೋರಾಟದ ನಡಿಗೆ, ಹಾಸನದ ಕಡೆಗೆ..’; ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...