Homeಕರ್ನಾಟಕ'ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

‘ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಕೇಂದ್ರದ ಬಿಜೆಪಿ ಸರ್ಕಾರ 'ಬಲತ್ಕಾರಿಗಳ ಬಚಾವು' ಮಾಡುವ ಸರ್ಕಾರವಾಗಿದೆ

- Advertisement -
- Advertisement -

“ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ. ರೇವಣ್ಣ ಕುಟುಂಬವು ರಾಜಕೀಯ, ಹಣ ಬಲದಿಂದ ನಡೆಸುವ ಅವ್ಯವಹಾರಗಳಿಗೆ, ದರ್ಪಕ್ಕೆ ಇನ್ನು ಉಳಿಗಾಲವಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ‘ಬಲತ್ಕಾರಿಗಳ ಬಚಾವು’ ಮಾಡುವ ಸರ್ಕಾರವಾಗಿದೆ. ಆ ಸರ್ಕಾರವನ್ನು ಜೂನ್ 4ರ ನಂತರ ಕೆಳಗಿಸಬೇಕು” ಎಂದು ಮಹಿಳಾ ಹೋರಾಟಗಾರ್ತಿ ಸುಭಾಷಿಣಿ ಅಲಿ ಹೇಳಿದ್ದಾರೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ನಡೆಯುತ್ತಿರುವ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, “ಶತಮಾನಗಳಿಂದಲೂ ಮಹಿಳಾ ಸಂಘಟನೆ ಸಂಘರ್ಷ ಮಾಡುತ್ತಿದೆ. ಸಂವಿಧಾನ ಜಾರಿಯಾದ ನಂತರವೂ ದೇಶದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಇದೆ. ಭಾರತದಲ್ಲಿ ಸಾವಂತವಾದ, ಪುರಷವಾದ ಬೇರೂರಿದೆ. ಜೊತೆಗೆ, ಬಂಡವಾಳ ಮತ್ತು ಮತೀಯವಾದವೂ ಸೇರಿಕೊಂಡಿದೆ. ಇವುಗಳನ್ನು ಒಡೆಯದಿದ್ದರೆ, ನಮಗಾರಿಗೂ ಉಳಿವಿಲ್ಲ” ಎಂದರು.

“ಪ್ರಜ್ವಲ್ ರೇವಣ್ಣ ಮತ್ತು ಆತನ ತಂದೆ ರೇವಣ್ಣನನ್ನು ಬಂಧಿಸಿ, ಜೈಲಿಗಟ್ಟಬೇಕು. ಅವರಿಗೆ ಓನ್ಲೀ ಜೈಲ್, ನೋ ಬೇಲ್’ (ಜೈಲು ಮಾತ್ರ, ಜಾಮೀನು ಇಲ್ಲ) ಆಗಬೇಕು. ಇದೇ ನಮ್ಮ ಪ್ರಮುಖ ಒತ್ತಾಯ. ರೇವಣ್ಣ ಕುಟುಂಬ ತನಿಖೆಯಲ್ಲಿ ತಮ್ಮ ಪ್ರಭಾವವನ್ನು ಬಳಸಬಹುದು. ಕರ್ನಾಟಕ ಸರ್ಕಾರಕ್ಕೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಬಾರದು. ಅವರನ್ನು ಜೈಲಿಗಟ್ಟಬೇಕು” ಎಂದು ಒತ್ತಾಯಿಸಿದರು.

“ಸಂತ್ರಸ್ತ ಮಹಿಳೆಯರೊಂದಿಗೆ ನಾವಿದ್ದೇವೆ. ಅವರೊಂದಿಗೆ ಕೊನೆವರೆಗೂ ಹೋರಾಡುತ್ತೇವೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತದೆ. ಸಂತ್ರಸ್ತೆಯರು ಎದೆಗುಂದಬೇಕಿಲ್ಲ” ಎಂದು ಬಲಿಪಶುಗಳಿಗೆ ಧೈರ್ಯ ತುಂಬುವ ಮಾತನಾಡಿದರು.

“ಸರ್ಕಾರಿ ಅಧಿಕಾರಿಗಳು, ಕಾರ್ಯಕರ್ತರು ಅಸಹಾಯಕ ಹೆಣ್ನುಮಕ್ಕಳು ಸಣ್ಣ ಪುಟ್ಟ ಸಹಾಯ ಕೇಳಲು ಬಂದಾಗ ಅವರ ಮೇಲೆ ರೇವಣ್ಣ ಮತ್ತು ಆತನ ಪುತ್ರ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಪರಿಹಾರ ನೀಡಬೇಕು. ಆಪ್ತ ಸಮಾಲೋಚನೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು:

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್ ಸತ್ಯಾಗ್ರಹ. ಎರಡು, ದಂಡಿ ಉಪ್ಪಿನ ಸತ್ಯಾಗ್ರಹ. ಎರಡನೆಯದು, 2020-21ರ ರೈತ ಹೋರಾಟ. ಇವು ದೇಶ ಕಂಡ ಐತಿಹಾಸಿಕ ಹೋರಾಟಗಳು. ರೈತರು ಒಂದು ವರ್ಷಗಳ ನಿರಂತರ ಹೋರಾಟ ಮಾಡಿ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದರು. ಇವತ್ತು, ಹಾಸನದಲ್ಲಿ ನಡೆದಿರುವ ಈ ಲೈಂಗಿಕ ಹಗರಣದ ವಿರುದ್ಧದ ಹೋರಾಟವು ಅಂತಹ ಐತಿಹಾಸಿಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಹೋರಾಟಗಾರ ಎಸ್.ಆರ್ ಹಿರೇಮಠ್ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನ ಕಡೆಗೆ’ ಬೃಹತ್ ಹೋರಾಟದಲ್ಲಿ ಅವರು ಮಾತನಾಡಿದರು. “ಹಾಸನವನ್ನು ತಮ್ಮ ‘ತಮ್ಮ ರಿಪಬ್ಲಿಕ್’ ಮಾಡಿಕೊಂಡು, ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು. ಪಾಳೆಗಾರಿಕೆಯನ್ನು ಕೊನೆಗಾಣಿಸಲು ವ್ಯವಸ್ಥಿತ ಹೋರಾಟ ನಡೆಬೇಕು. ಬಳ್ಳಾರಿಯ ಪಾಳೆಗಾರಿಕೆಯನ್ನು ಮುರಿದಂತೆ, ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಮುಗಿಸಬೇಕು” ಎಂದರು.

“ಅತ್ಯಾಚಾರ, ಅನ್ಯಾಯ ಮಾಡಿದವರ ವಿರುದ್ಧ ಸಂತ್ರಸ್ತ ಮಹಿಳೆಯರು ಮುಂದೆ ಬಂದು ಹೋರಾಟ ನಡೆಸಬೇಕು. ತಮ್ಮ ಮೇಲಾದ ದೌರ್ಜನ್ಯಗಳ ವಿರುದ್ಧ ಗಟ್ಟಿಯಾಗಿ ಮಾತನಾಡಬೇಕು. ಸರ್ಕಾರ ನಡೆಸುತ್ತಿರುವವರು ಹಾಸನಕ್ಕೆ ಬರಬೇಕು. ಸಂತ್ರಸ್ತೆಯರಿಗೆ ಧೈರ್ಯ ತುಂಬಬೇಕು. ನ್ಯಾಯ ಕೊಡಿಸುವ ಭರವಸೆ ನೀಡಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ ದಾಖಲಿಸಬೇಕು: 

ಪ್ರಜ್ವಲ್ ರೇವಣ್ಣ ಅವರನ್ನು ಭಯೋತ್ಪಾದಕನಾಗಿ ಹೆಸರಿಸಬೇಕು. 400 ಮಂದಿ ಸಂತ್ರಸ್ತೆಯರಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ಗಳನ್ನು ದಾಖಲಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು. ಸಪ್ರತಿ ಸಂತ್ರಸ್ತೆಯರಿಗೆ ₹1 ಕೋಟಿ ಪರಿಹಾರ ನೀಡಬೇಕು. ರೇವಣ್ಣನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಹೈಕೋರ್ಟಿನಲ್ಲಿ ಜಾಮೀನನ್ನು ಪ್ರಶ್ನಿಸಿಲ್ಲ. ಪ್ರಜ್ವಲ್‌ನನ್ನೂ ಇದೇ ರೀತಿ ಜಾಮೀನಿನ ಮೇಲೆ ಬಿಟ್ಟುಬಿಡುವ ಸಾಧ್ಯತೆ ಇದೆ. ಹೀಗಾಗಿ, ನಾವು ಬೃಹತ್ ಹೋರಾಟ ನಡೆಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ಹೇಳಿದ್ದಾರೆ.

ಸರ್ಕಾರಗಳು ರೇವಣ್ಣ ಮತ್ತು ಆತನ ಪುತ್ರ ಪ್ರಜ್ವಲ್ ರೇವಣ್ಣನನ್ನು ರಕ್ಷಿಸುತ್ತಿರುವ ಸಾಧ್ಯತೆಗಳಿವೆ. ಪ್ರಜ್ವಲ್ ಸೈಕೋ ಪಾತ್ ಇದ್ದಂತಿದ್ದಾನೆ. ಆತನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ; ‘ಹೋರಾಟದ ನಡಿಗೆ, ಹಾಸನದ ಕಡೆಗೆ..’; ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...