Homeಕರ್ನಾಟಕ'ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

‘ಓನ್ಲೀ ಜೈಲ್, ನೋ ಬೇಲ್’ ಎಂದು ಪ್ರಜ್ವಲ್ ರೇವಣ್ಣನಿಗೆ ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಕೇಂದ್ರದ ಬಿಜೆಪಿ ಸರ್ಕಾರ 'ಬಲತ್ಕಾರಿಗಳ ಬಚಾವು' ಮಾಡುವ ಸರ್ಕಾರವಾಗಿದೆ

- Advertisement -
- Advertisement -

“ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ. ರೇವಣ್ಣ ಕುಟುಂಬವು ರಾಜಕೀಯ, ಹಣ ಬಲದಿಂದ ನಡೆಸುವ ಅವ್ಯವಹಾರಗಳಿಗೆ, ದರ್ಪಕ್ಕೆ ಇನ್ನು ಉಳಿಗಾಲವಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ‘ಬಲತ್ಕಾರಿಗಳ ಬಚಾವು’ ಮಾಡುವ ಸರ್ಕಾರವಾಗಿದೆ. ಆ ಸರ್ಕಾರವನ್ನು ಜೂನ್ 4ರ ನಂತರ ಕೆಳಗಿಸಬೇಕು” ಎಂದು ಮಹಿಳಾ ಹೋರಾಟಗಾರ್ತಿ ಸುಭಾಷಿಣಿ ಅಲಿ ಹೇಳಿದ್ದಾರೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ನಡೆಯುತ್ತಿರುವ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, “ಶತಮಾನಗಳಿಂದಲೂ ಮಹಿಳಾ ಸಂಘಟನೆ ಸಂಘರ್ಷ ಮಾಡುತ್ತಿದೆ. ಸಂವಿಧಾನ ಜಾರಿಯಾದ ನಂತರವೂ ದೇಶದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಯುತ್ತಲೇ ಇದೆ. ಭಾರತದಲ್ಲಿ ಸಾವಂತವಾದ, ಪುರಷವಾದ ಬೇರೂರಿದೆ. ಜೊತೆಗೆ, ಬಂಡವಾಳ ಮತ್ತು ಮತೀಯವಾದವೂ ಸೇರಿಕೊಂಡಿದೆ. ಇವುಗಳನ್ನು ಒಡೆಯದಿದ್ದರೆ, ನಮಗಾರಿಗೂ ಉಳಿವಿಲ್ಲ” ಎಂದರು.

“ಪ್ರಜ್ವಲ್ ರೇವಣ್ಣ ಮತ್ತು ಆತನ ತಂದೆ ರೇವಣ್ಣನನ್ನು ಬಂಧಿಸಿ, ಜೈಲಿಗಟ್ಟಬೇಕು. ಅವರಿಗೆ ಓನ್ಲೀ ಜೈಲ್, ನೋ ಬೇಲ್’ (ಜೈಲು ಮಾತ್ರ, ಜಾಮೀನು ಇಲ್ಲ) ಆಗಬೇಕು. ಇದೇ ನಮ್ಮ ಪ್ರಮುಖ ಒತ್ತಾಯ. ರೇವಣ್ಣ ಕುಟುಂಬ ತನಿಖೆಯಲ್ಲಿ ತಮ್ಮ ಪ್ರಭಾವವನ್ನು ಬಳಸಬಹುದು. ಕರ್ನಾಟಕ ಸರ್ಕಾರಕ್ಕೆ ನಾವು ಎಚ್ಚರಿಕೆ ನೀಡುತ್ತಿದ್ದೇವೆ. ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ನೀಡಬಾರದು. ಅವರನ್ನು ಜೈಲಿಗಟ್ಟಬೇಕು” ಎಂದು ಒತ್ತಾಯಿಸಿದರು.

“ಸಂತ್ರಸ್ತ ಮಹಿಳೆಯರೊಂದಿಗೆ ನಾವಿದ್ದೇವೆ. ಅವರೊಂದಿಗೆ ಕೊನೆವರೆಗೂ ಹೋರಾಡುತ್ತೇವೆ. ಅವರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಯುತ್ತದೆ. ಸಂತ್ರಸ್ತೆಯರು ಎದೆಗುಂದಬೇಕಿಲ್ಲ” ಎಂದು ಬಲಿಪಶುಗಳಿಗೆ ಧೈರ್ಯ ತುಂಬುವ ಮಾತನಾಡಿದರು.

“ಸರ್ಕಾರಿ ಅಧಿಕಾರಿಗಳು, ಕಾರ್ಯಕರ್ತರು ಅಸಹಾಯಕ ಹೆಣ್ನುಮಕ್ಕಳು ಸಣ್ಣ ಪುಟ್ಟ ಸಹಾಯ ಕೇಳಲು ಬಂದಾಗ ಅವರ ಮೇಲೆ ರೇವಣ್ಣ ಮತ್ತು ಆತನ ಪುತ್ರ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಪರಿಹಾರ ನೀಡಬೇಕು. ಆಪ್ತ ಸಮಾಲೋಚನೆ ಒದಗಿಸಬೇಕು” ಎಂದು ಆಗ್ರಹಿಸಿದರು.

ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು:

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್ ಸತ್ಯಾಗ್ರಹ. ಎರಡು, ದಂಡಿ ಉಪ್ಪಿನ ಸತ್ಯಾಗ್ರಹ. ಎರಡನೆಯದು, 2020-21ರ ರೈತ ಹೋರಾಟ. ಇವು ದೇಶ ಕಂಡ ಐತಿಹಾಸಿಕ ಹೋರಾಟಗಳು. ರೈತರು ಒಂದು ವರ್ಷಗಳ ನಿರಂತರ ಹೋರಾಟ ಮಾಡಿ, ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮಾಡಿದರು. ಇವತ್ತು, ಹಾಸನದಲ್ಲಿ ನಡೆದಿರುವ ಈ ಲೈಂಗಿಕ ಹಗರಣದ ವಿರುದ್ಧದ ಹೋರಾಟವು ಅಂತಹ ಐತಿಹಾಸಿಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಹೋರಾಟಗಾರ ಎಸ್.ಆರ್ ಹಿರೇಮಠ್ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನ ಕಡೆಗೆ’ ಬೃಹತ್ ಹೋರಾಟದಲ್ಲಿ ಅವರು ಮಾತನಾಡಿದರು. “ಹಾಸನವನ್ನು ತಮ್ಮ ‘ತಮ್ಮ ರಿಪಬ್ಲಿಕ್’ ಮಾಡಿಕೊಂಡು, ಪಾಳೆಗಾರಿಕೆ ನಡೆಸುತ್ತಿರುವ ರೇವಣ್ಣ ಕುಟುಂಬದ ಅವನತಿಯಾಗಬೇಕು. ಪಾಳೆಗಾರಿಕೆಯನ್ನು ಕೊನೆಗಾಣಿಸಲು ವ್ಯವಸ್ಥಿತ ಹೋರಾಟ ನಡೆಬೇಕು. ಬಳ್ಳಾರಿಯ ಪಾಳೆಗಾರಿಕೆಯನ್ನು ಮುರಿದಂತೆ, ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಮುಗಿಸಬೇಕು” ಎಂದರು.

“ಅತ್ಯಾಚಾರ, ಅನ್ಯಾಯ ಮಾಡಿದವರ ವಿರುದ್ಧ ಸಂತ್ರಸ್ತ ಮಹಿಳೆಯರು ಮುಂದೆ ಬಂದು ಹೋರಾಟ ನಡೆಸಬೇಕು. ತಮ್ಮ ಮೇಲಾದ ದೌರ್ಜನ್ಯಗಳ ವಿರುದ್ಧ ಗಟ್ಟಿಯಾಗಿ ಮಾತನಾಡಬೇಕು. ಸರ್ಕಾರ ನಡೆಸುತ್ತಿರುವವರು ಹಾಸನಕ್ಕೆ ಬರಬೇಕು. ಸಂತ್ರಸ್ತೆಯರಿಗೆ ಧೈರ್ಯ ತುಂಬಬೇಕು. ನ್ಯಾಯ ಕೊಡಿಸುವ ಭರವಸೆ ನೀಡಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ ದಾಖಲಿಸಬೇಕು: 

ಪ್ರಜ್ವಲ್ ರೇವಣ್ಣ ಅವರನ್ನು ಭಯೋತ್ಪಾದಕನಾಗಿ ಹೆಸರಿಸಬೇಕು. 400 ಮಂದಿ ಸಂತ್ರಸ್ತೆಯರಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ವಿರುದ್ಧ 400 ಎಫ್ಐಆರ್‌ಗಳನ್ನು ದಾಖಲಿಸಬೇಕು. ಕಾನೂನು ಕ್ರಮ ಕೈಗೊಳ್ಳಬೇಕು. ಸಪ್ರತಿ ಸಂತ್ರಸ್ತೆಯರಿಗೆ ₹1 ಕೋಟಿ ಪರಿಹಾರ ನೀಡಬೇಕು. ರೇವಣ್ಣನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಹೈಕೋರ್ಟಿನಲ್ಲಿ ಜಾಮೀನನ್ನು ಪ್ರಶ್ನಿಸಿಲ್ಲ. ಪ್ರಜ್ವಲ್‌ನನ್ನೂ ಇದೇ ರೀತಿ ಜಾಮೀನಿನ ಮೇಲೆ ಬಿಟ್ಟುಬಿಡುವ ಸಾಧ್ಯತೆ ಇದೆ. ಹೀಗಾಗಿ, ನಾವು ಬೃಹತ್ ಹೋರಾಟ ನಡೆಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ಹೇಳಿದ್ದಾರೆ.

ಸರ್ಕಾರಗಳು ರೇವಣ್ಣ ಮತ್ತು ಆತನ ಪುತ್ರ ಪ್ರಜ್ವಲ್ ರೇವಣ್ಣನನ್ನು ರಕ್ಷಿಸುತ್ತಿರುವ ಸಾಧ್ಯತೆಗಳಿವೆ. ಪ್ರಜ್ವಲ್ ಸೈಕೋ ಪಾತ್ ಇದ್ದಂತಿದ್ದಾನೆ. ಆತನನ್ನು ಬಂಧಿಸಿ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ; ‘ಹೋರಾಟದ ನಡಿಗೆ, ಹಾಸನದ ಕಡೆಗೆ..’; ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...