Homeಮುಖಪುಟದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

ದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

- Advertisement -
- Advertisement -

ಉತ್ತರಪ್ರದೇಶದ ಗೋರಖ್‌ಪುರದಲ್ಲಿ ದಲಿತ ಸಮುದಾಯದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕೆ ಫ್ರೆಂಚ್‌ ಚಲನಚಿತ್ರ ನಿರ್ದೇಶಕ ವ್ಯಾಲೆಂಟಿನ್‌ ಹೆನಾಲ್ಟ್‌ ಅವರನ್ನು ಕಳೆದ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು ಆದರೆ ಬಿಡುಗಡೆಯಾದ ಆರು ತಿಂಗಳ ನಂತರವೂ ಅವರಿಗೆ ತಮ್ಮ ತವರಿಗೆ ಹೋಗಲು ಸಾಧ್ಯವಾಗಿರಲಿಲ್ಲ, ಇದೀಗ ದೀರ್ಘ ಕಾನೂನು ಹೋರಾಟದ ಬಳಿಕ ವ್ಯಾಲೆಂಟಿನ್‌ ಹೆನಾಲ್ಟ್‌  ಪ್ರಾನ್ಸ್‌ಗೆ ತೆರಳಿದ್ದಾರೆ ಎಂದು ‘ಲೆ ಮಾಂಡೆ’ ವೆಬ್‌ಸೈಟ್ ವರದಿ ಮಾಡಿದೆ.

ದಲಿತ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೇಂದ್ರೀಕರಿಸುವ ಚಲನಚಿತ್ರದಲ್ಲಿ ಕೆಲಸ ಮಾಡಲು ಹೆನಾಲ್ಟ್ ಆಗಸ್ಟ್ 10, 2023ರಂದು ಭಾರತಕ್ಕೆ ಆಗಮಿಸಿದ್ದರು. ಅವರು ಉತ್ತರಪ್ರದೇಶಕ್ಕಿಂತ ಮೊದಲು ಬಿಹಾರ ಮತ್ತು ಜಾರ್ಖಂಡ್‌ಗಳಲ್ಲಿ ಪ್ರಯಾಣಿಸಿದ್ದರು. ಅಕ್ಟೋಬರ್ 10, 2023ರಂದು ಉತ್ತರಪ್ರದೇಶದಲ್ಲಿ ದಲಿತರಿಗೆ ಭೂಮಿಯ ಹಕ್ಕುಗಳಿಗೆ ಒತ್ತಾಯಿಸಿ ರೈತ ಮಹಿಳೆಯರ ನೇತೃತ್ವದಲ್ಲಿ ನಡೆದ “ಅಂಬೇಡ್ಕರ್ ಜನರ ಮೆರವಣಿಗೆ”ಯಲ್ಲಿ ಹೆನಾಲ್ಟ್  ಭಾಗವಹಿಸಿದ್ದರು. ವೇದಿಕೆಯಲ್ಲಿದ್ದ ಭಾಷಣಕಾರರೊಬ್ಬರಿಗೆ ಹೆನಾಲ್ಟ್  ಬಗ್ಗೆ ಮೊದಲೇ ಪರಿಚಯವಿದ್ದ ಕಾರಣ ಅವರು ಭಾಷಣದಲ್ಲಿ ವಿದೇಶಿ ವ್ಯಕ್ತಿಯೋರ್ವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲಿ ಹೆನಾಲ್ಟ್ ಅವರನ್ನು ಸ್ಥಳೀಯ ಗುಪ್ತಚರ ಇಲಾಖೆ ಏಜೆಂಟರು ಸುತ್ತುವರಿದಿದ್ದರು. ಪೊಲೀಸರು ಸ್ಥಳದಲ್ಲೇ  ಹೆನಾಲ್ಟ್ ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಅವರಿಗೆ ತೆರಳಲು ಅನುಮತಿ ನೀಡಿದ್ದರೂ, ಅದೇ ದಿನ ಅವರು ತಂಗಿದ್ದ ಹೋಟೆಲ್ ಕೊಠಡಿಯಿಂದ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಗಿದೆ. ವಿದೇಶಿ ಕಾಯಿದೆಯ ಕಲಂ 14ಬಿ ಅಡಿಯಲ್ಲಿ “ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದರು.

ವೀಸಾದಲ್ಲಿ ಜಾರ್ಖಂಡ್‌ನಿಂದ ಹೊರಹೋಗಲು ಅನುಮತಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ವರದಿಯ ಪ್ರಕಾರ, ಇದು ಸುಳ್ಳು ಆರೋಪವಾಗಿದ್ದು, ಅವರು ಬ್ಯುಸಿನೆಸ್‌ ವೀಸಾದಲ್ಲಿ ಬಂದಿದ್ದಾರೆ, ಈ ವೀಸಾ ಒಂದು ವರ್ಷದವರೆಗೆ ಮಾನ್ಯತೆ ಹೊಂದಿದೆ ಮತ್ತು ಯಾವುದೇ ಭೌಗೋಳಿಕ ನಿರ್ಬಂಧಗಳನ್ನು ಒಳಗೊಂಡಿಲ್ಲ ಎಂದು ಹೇಳಲಾಗಿದೆ.

ಬಂಧನಕ್ಕೊಳಗಾದ ಒಂದು ದಿನದ ನಂತರ ನ್ಯಾಯಾಧೀಶರು ಅವರ ಬಂಧನಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿದರು, ನಂತರ ಅವರನ್ನು ಗೋರಖ್‌ಪುರ ಜೈಲಿಗೆ ಕಳುಹಿಸಲಾಯಿತು. ನಾನು ನೆಲದ ಮೇಲೆ ಮಲಗಿದೆ, ರಾತ್ರಿಯಲ್ಲಿ ತಿರುಗಲು ಕೂಡ ಅಸಾಧ್ಯವಾದ ಕಡಿಮೆ ಸ್ಥಳಾವಕಾಶ ನೀಡಲಾಗಿತ್ತು ಎಂದು ಫ್ರೆಂಚ್ ದೈನಿಕದ ಜೊತೆ ತನ್ನ ಜೈಲು ಶಿಕ್ಷೆಯ ಬಗ್ಗೆ ಮಾತನಾಡುವಾಗ ಹೆನಾಲ್ಟ್ ಹೇಳಿರುವುದಾಗಿ ಉಲ್ಲೇಖಿಸಿದೆ. ವರದಿಯ ಪ್ರಕಾರ, ಮಾನಸಿಕ ಅಸ್ವಸ್ಥ ವ್ಯಕ್ತಿಗಳಿಗೆ ಮೀಸಲಾದ ಸೆಲ್‌ನಲ್ಲಿ ಅವರನ್ನು ಇರಿಸಲಾಗಿತ್ತು.

ಬಂಧನದ ಬಳಿಕ ಹೆನಾಲ್ಟ್ ಜೈಲಿನಿಂದ ಫ್ರೆಂಚ್ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದು, ರಾಯಭಾರ ಕಚೇರಿಯು ವಕೀಲರ ಸಂಪರ್ಕವನ್ನು ಒದಗಿಸಿದೆ. ಅವರ ಬಂಧನದ ನಂತರ ಮೂರನೇ ವಾರದಲ್ಲಿ, ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಜೈಲಿನಲ್ಲಿ ಅವರನ್ನು ಭೇಟಿಯಾದರು. ಆ ಬಳಿಕ ಅವರ ತಂದೆ ಅವರನ್ನು ಭೇಟಿ ಮಾಡಲು ಭಾರತಕ್ಕೆ ಬಂದರು ಮತ್ತು ವಕೀಲರನ್ನು ಬದಲಾಯಿಸಿದರು, ಬಳಿಕ ಜಾಮೀನು ಪಡೆಯುವಲ್ಲಿ ಅವರು ಯಶಸ್ವಿಯಾಗಿದ್ದರು. ಆದರೆ ಅವರು ತವರಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಹೆನಾಲ್ಟ್  ಅವರ ಪಾಸ್‌ಪೋರ್ಟ್ ಮೇ ತಿಂಗಳವರೆಗೆ ಪೊಲೀಸರ ಬಳಿ ಇತ್ತು. ಸತತ ಕಾನೂನು ಹೊರಾಟದ ಬಳಿಕ ಅವರು ಕೊನೆಗೆ ಇದೇ ಮೇ.4ರಂದು ಭಾರತವನ್ನು ತೊರೆದು ಪ್ರಾನ್ಸ್‌ಗೆ ವಾಪಾಸ್ಸಾಗಿದ್ದಾರೆ.

ಇದನ್ನು ಓದಿ: ಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...