Homeಮುಖಪುಟದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

ದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

- Advertisement -
- Advertisement -

ಉತ್ತರಪ್ರದೇಶದ ಗೋರಖ್‌ಪುರದಲ್ಲಿ ದಲಿತ ಸಮುದಾಯದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕೆ ಫ್ರೆಂಚ್‌ ಚಲನಚಿತ್ರ ನಿರ್ದೇಶಕ ವ್ಯಾಲೆಂಟಿನ್‌ ಹೆನಾಲ್ಟ್‌ ಅವರನ್ನು ಕಳೆದ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು ಆದರೆ ಬಿಡುಗಡೆಯಾದ ಆರು ತಿಂಗಳ ನಂತರವೂ ಅವರಿಗೆ ತಮ್ಮ ತವರಿಗೆ ಹೋಗಲು ಸಾಧ್ಯವಾಗಿರಲಿಲ್ಲ, ಇದೀಗ ದೀರ್ಘ ಕಾನೂನು ಹೋರಾಟದ ಬಳಿಕ ವ್ಯಾಲೆಂಟಿನ್‌ ಹೆನಾಲ್ಟ್‌  ಪ್ರಾನ್ಸ್‌ಗೆ ತೆರಳಿದ್ದಾರೆ ಎಂದು ‘ಲೆ ಮಾಂಡೆ’ ವೆಬ್‌ಸೈಟ್ ವರದಿ ಮಾಡಿದೆ.

ದಲಿತ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೇಂದ್ರೀಕರಿಸುವ ಚಲನಚಿತ್ರದಲ್ಲಿ ಕೆಲಸ ಮಾಡಲು ಹೆನಾಲ್ಟ್ ಆಗಸ್ಟ್ 10, 2023ರಂದು ಭಾರತಕ್ಕೆ ಆಗಮಿಸಿದ್ದರು. ಅವರು ಉತ್ತರಪ್ರದೇಶಕ್ಕಿಂತ ಮೊದಲು ಬಿಹಾರ ಮತ್ತು ಜಾರ್ಖಂಡ್‌ಗಳಲ್ಲಿ ಪ್ರಯಾಣಿಸಿದ್ದರು. ಅಕ್ಟೋಬರ್ 10, 2023ರಂದು ಉತ್ತರಪ್ರದೇಶದಲ್ಲಿ ದಲಿತರಿಗೆ ಭೂಮಿಯ ಹಕ್ಕುಗಳಿಗೆ ಒತ್ತಾಯಿಸಿ ರೈತ ಮಹಿಳೆಯರ ನೇತೃತ್ವದಲ್ಲಿ ನಡೆದ “ಅಂಬೇಡ್ಕರ್ ಜನರ ಮೆರವಣಿಗೆ”ಯಲ್ಲಿ ಹೆನಾಲ್ಟ್  ಭಾಗವಹಿಸಿದ್ದರು. ವೇದಿಕೆಯಲ್ಲಿದ್ದ ಭಾಷಣಕಾರರೊಬ್ಬರಿಗೆ ಹೆನಾಲ್ಟ್  ಬಗ್ಗೆ ಮೊದಲೇ ಪರಿಚಯವಿದ್ದ ಕಾರಣ ಅವರು ಭಾಷಣದಲ್ಲಿ ವಿದೇಶಿ ವ್ಯಕ್ತಿಯೋರ್ವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲಿ ಹೆನಾಲ್ಟ್ ಅವರನ್ನು ಸ್ಥಳೀಯ ಗುಪ್ತಚರ ಇಲಾಖೆ ಏಜೆಂಟರು ಸುತ್ತುವರಿದಿದ್ದರು. ಪೊಲೀಸರು ಸ್ಥಳದಲ್ಲೇ  ಹೆನಾಲ್ಟ್ ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಅವರಿಗೆ ತೆರಳಲು ಅನುಮತಿ ನೀಡಿದ್ದರೂ, ಅದೇ ದಿನ ಅವರು ತಂಗಿದ್ದ ಹೋಟೆಲ್ ಕೊಠಡಿಯಿಂದ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಗಿದೆ. ವಿದೇಶಿ ಕಾಯಿದೆಯ ಕಲಂ 14ಬಿ ಅಡಿಯಲ್ಲಿ “ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದರು.

ವೀಸಾದಲ್ಲಿ ಜಾರ್ಖಂಡ್‌ನಿಂದ ಹೊರಹೋಗಲು ಅನುಮತಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ವರದಿಯ ಪ್ರಕಾರ, ಇದು ಸುಳ್ಳು ಆರೋಪವಾಗಿದ್ದು, ಅವರು ಬ್ಯುಸಿನೆಸ್‌ ವೀಸಾದಲ್ಲಿ ಬಂದಿದ್ದಾರೆ, ಈ ವೀಸಾ ಒಂದು ವರ್ಷದವರೆಗೆ ಮಾನ್ಯತೆ ಹೊಂದಿದೆ ಮತ್ತು ಯಾವುದೇ ಭೌಗೋಳಿಕ ನಿರ್ಬಂಧಗಳನ್ನು ಒಳಗೊಂಡಿಲ್ಲ ಎಂದು ಹೇಳಲಾಗಿದೆ.

ಬಂಧನಕ್ಕೊಳಗಾದ ಒಂದು ದಿನದ ನಂತರ ನ್ಯಾಯಾಧೀಶರು ಅವರ ಬಂಧನಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿದರು, ನಂತರ ಅವರನ್ನು ಗೋರಖ್‌ಪುರ ಜೈಲಿಗೆ ಕಳುಹಿಸಲಾಯಿತು. ನಾನು ನೆಲದ ಮೇಲೆ ಮಲಗಿದೆ, ರಾತ್ರಿಯಲ್ಲಿ ತಿರುಗಲು ಕೂಡ ಅಸಾಧ್ಯವಾದ ಕಡಿಮೆ ಸ್ಥಳಾವಕಾಶ ನೀಡಲಾಗಿತ್ತು ಎಂದು ಫ್ರೆಂಚ್ ದೈನಿಕದ ಜೊತೆ ತನ್ನ ಜೈಲು ಶಿಕ್ಷೆಯ ಬಗ್ಗೆ ಮಾತನಾಡುವಾಗ ಹೆನಾಲ್ಟ್ ಹೇಳಿರುವುದಾಗಿ ಉಲ್ಲೇಖಿಸಿದೆ. ವರದಿಯ ಪ್ರಕಾರ, ಮಾನಸಿಕ ಅಸ್ವಸ್ಥ ವ್ಯಕ್ತಿಗಳಿಗೆ ಮೀಸಲಾದ ಸೆಲ್‌ನಲ್ಲಿ ಅವರನ್ನು ಇರಿಸಲಾಗಿತ್ತು.

ಬಂಧನದ ಬಳಿಕ ಹೆನಾಲ್ಟ್ ಜೈಲಿನಿಂದ ಫ್ರೆಂಚ್ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದು, ರಾಯಭಾರ ಕಚೇರಿಯು ವಕೀಲರ ಸಂಪರ್ಕವನ್ನು ಒದಗಿಸಿದೆ. ಅವರ ಬಂಧನದ ನಂತರ ಮೂರನೇ ವಾರದಲ್ಲಿ, ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಜೈಲಿನಲ್ಲಿ ಅವರನ್ನು ಭೇಟಿಯಾದರು. ಆ ಬಳಿಕ ಅವರ ತಂದೆ ಅವರನ್ನು ಭೇಟಿ ಮಾಡಲು ಭಾರತಕ್ಕೆ ಬಂದರು ಮತ್ತು ವಕೀಲರನ್ನು ಬದಲಾಯಿಸಿದರು, ಬಳಿಕ ಜಾಮೀನು ಪಡೆಯುವಲ್ಲಿ ಅವರು ಯಶಸ್ವಿಯಾಗಿದ್ದರು. ಆದರೆ ಅವರು ತವರಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಹೆನಾಲ್ಟ್  ಅವರ ಪಾಸ್‌ಪೋರ್ಟ್ ಮೇ ತಿಂಗಳವರೆಗೆ ಪೊಲೀಸರ ಬಳಿ ಇತ್ತು. ಸತತ ಕಾನೂನು ಹೊರಾಟದ ಬಳಿಕ ಅವರು ಕೊನೆಗೆ ಇದೇ ಮೇ.4ರಂದು ಭಾರತವನ್ನು ತೊರೆದು ಪ್ರಾನ್ಸ್‌ಗೆ ವಾಪಾಸ್ಸಾಗಿದ್ದಾರೆ.

ಇದನ್ನು ಓದಿ: ಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...