Homeಕರ್ನಾಟಕಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ಹಾಸನ ಚಲೋ| ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

- Advertisement -
- Advertisement -

“ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು. ಸರ್ಕಾರವೂ ಕೂಡ ಪ್ರಕರಣದಲ್ಲಿ ತಮ್ಮದು ಹೆಚ್ಚಿನ ಪಾತ್ರವಿಲ್ಲ ಎಂಬಂತೆ ನುಣುಚಿಕೊಳ್ಳಲು ಯತ್ನಿಸಿತು. ಈ ಎಲ್ಲ ನುಣುಚುಕೋರರ ಬಣ್ಣ ಬಯಲಾಗಿದೆ. ಇದು, ಇಡೀ ವ್ಯವಸ್ಥೆಯ ವೈಫಲ್ಯ” ಎಂದು ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ ಹೇಳಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹೆಣ್ಣು ಮಕ್ಕಳು ತಮ್ಮ ಚಿಕ್ಕ ಕೆಲಸಕ್ಕಾಗಿ, ಪ್ರಮೋಷನ್‌ಗಾಗಿ, ಪಂಚಾಯಿತಿ ಮಟ್ಟದ ಟಿಕೆಟ್‌ಗಾಗಿ ಇಂತಹ ಕಾಮಕರ ದೌರ್ಜನ್ಯ ಬಲಿಯಾಗಬೇಕಿರುವ ಪರಿಸ್ಥಿತಿಯನ್ನು ಈ ವ್ಯವಸ್ಥೆ ಮಹಿಳೆಯರಿಗೆ ನೀಡಿದೆ. ಈ ವ್ಯವಸ್ಥೆಯನ್ನು ಬದಲಿಸಲು ಇಡೀ ದೇಶ ಒಗ್ಗೂಡಿ ಹೋರಾಟ ನಡೆಸಬೇಕು. ಇಂತಹ ದೌರ್ಜನ್ಯ ಪ್ರಕರಣಗಳನ್ನ ಸಮಗ್ರವಾಗಿ ಪರಿಶೀಲಿಸಲು ಉನ್ನತ ಸಮಿತಿಯನ್ನು ಸರ್ಕಾರ ರಚನೆ ಮಾಡಬೇಕು. ಗುಹೆಯಲ್ಲಿ ಅವಿತಿರುವ ಪ್ರಧಾನಿ ಮೋದಿಯವರು ಹೊರಬರಬೇಕು. ತಮ್ಮದೇ ಮಿತ್ರ ಪಕ್ಷದ ಸಂಸದ ಎಸಗಿರುವ ದೌರ್ಜನ್ಯದ ವಿರುದ್ಧ ಕ್ರಮಕ್ಕೆ ಮುಂದಾಗಬೇಕು” ಎಂದು ಆಗ್ರಹಿಸಿದರು.

ರೇವಣ್ಣ ಕಟುಂಬದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ:

ಬಂಧಿಸಿ ಬಂಧಿಸಿ ವಿಕೃತಿ ಕಾಮಿ ಪ್ರಜ್ವಲ್‌ನನ್ನು ಬಂಧಿಸಿ. ಅಡಗಲಿ ಅಡಗಲಿ ಪಾಳೇಗಾರಿಕೆ ಅಡಗಲಿ. ಪ್ರಜ್ವಲ್ ರೇವಣ್ಣನ ಬಂಧನ ಕೂಡಲೇ ಆಗಬೇಕು. ದೇವೆಗೌಡರ ಕುಟುಂಬಕ್ಕೆ ಧಿಕ್ಕಾರ. ಸಂತ್ರಸ್ತ ಮಹಿಳೆಯರೇ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಹಾಸನ ಚಲೋ ಹೋರಾಟದಲ್ಲಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಹಾಸನ ನಗರದ ಮಹಾರಾಜ ಪಾರ್ಕ್ ಮುಂಭಾಗ ಆರಂಭವಾದ ಹಾಸನ ಚಲೋ ಬೃಹತ್ ಹೋರಾಟದ ಆರಂಭದಲ್ಲಿ ಘೋಷವಾಕ್ಯಗಳನ್ನು ಕೂಗುವ ಮೂಲಕ ಅತ್ಯಾಚಾರಿ ಆರೋಪಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 11 ಗಂಟೆಗೆ ಆರಂಭವಾದ ಹೋರಾಟದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಪ್ರಗತಿಪರ ಹೋರಾಟಗಾರರು, ಸಾಹಿತಿಗಳು, ಚಿಂತಕರು, ಕೂಲಿ ಕಾರ್ಮಿಕರು ಸೇರಿದಂತೆ ಹಲವು ಮಹಿಳಾಪರ ಸಂಘಟನೆಗಳು, ಜನಪರ ಸಂಘಟನೆಗಳು ಬ್ಯಾನರ್, ಪೋಸ್ಟರ್‌ಗಳನ್ನು ಹಿಡಿದು ಕಾಮುಕ ಪ್ರಜ್ವಲ್‌ ರೇವಣ್ಣ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ವಿವಿಧ ಸಂಘಟನೆಗಳ ಸಾವಿರಾರು ಜನರು ರಾಜ್ಯದ ಮೂಲೆ ಮೂಲೆಗಳಿಂದ ಟೆಂಪೋ, ಟ್ರಕ್‌ಗಳಲ್ಲಿ ಬಂದ ಸಾವಿರಾರು ಮಂದಿ ಮಹಿಳೆಯರು, ಹೋರಾಟಗಾರರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಮಹಾರಾಜ ಪಾರ್ಕ್‌ನಿಂದ ಆರಂಭವಾದ ‘ಹಾಸನ ಚಲೋ’ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಸಾಗಿ ತಾಲೂಕು ಕಚೇರಿ ವೃತ್ತದ ಬಳಿಯ ಹಾಸನ ಚಲೋ ವೇದಿಕೆಯನ್ನು ಸೇರಿತು.

ಪ್ರತಿಭಟನೆಯ ದಾರಿಯುದ್ದಕ್ಕೂ ಧಿಕ್ಕಾರದ ಘೋಷಣೆಗಳು ಹಾಸನ ಜನರ ಗಮನ ಸೆಳೆದವು. ಎತ್ತ ನೋಡಿದರೂ ಮಹಿಳೆಯರ ಸಾಲು. ಸರ್ವಾಧಿಕಾರಿಗಳ ವಿರುದ್ಧದ ಹೋರಾಟವನ್ನು ಕಂಡು ಹಾಸನದ ಜನತೆ ನಿಬ್ಬೆರಗಾಗಿ ನಿಂತು ನೋಡುತ್ತಿದ್ದ ದೃಶ್ಯಗಳು ಕಂಡುಬಂದಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ದಲಿತ ಸಂಘರ್ಷ ಸಮಿತಿ, ಜನ ಶಕ್ತಿ, ಜನವಾದಿ, ರೈತ ಸಂಘಟನೆಗಳು, ಎದ್ದೇಳು ಕರ್ನಾಟಕ, ಜಾಗೃತ ಕರ್ನಾಟಕ, ಸಿಐಟಿಯು, ಭೀಮ್‌ ಆರ್ಮಿ ಸೇರಿದಂತೆ 150ಕ್ಕೂ ಅಧಿಕ ಸಂಘಟನೆಗಳು ಭಾಗವಹಿಸಿದ್ದು, ಕಾರ್ಯಕ್ರಮದಲ್ಲಿ ನ್ಯಾಯಕ್ಕಾಗಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ; ಪ್ರಜ್ವಲ್ ಪ್ರಕರಣ ಹಳ್ಳ ಹಿಡಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...