Homeಮುಖಪುಟಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

ಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಬೀಡ್‌ ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ನಮ್ಮನ್ನು ಎನ್‌ಡಿಎ ಅಭ್ಯರ್ಥಿಗಳ ಪರ ಗುಂಪು ಇವಿಎಂ ಬಳಿ ತೆರಳದಂತೆ ತಡೆದಿದ್ದಾರೆ ಎಂದು ಮತದಾರರು ಆರೋಪಿಸಿದ್ದಾರೆ. ಈ ರೀತಿಯ ಆರೋಪ ಬೀಡ್‌ ಲೋಕಸಭೆ ಕ್ಷೇತ್ರದ ವಿವಿಧ ಮತಗಟ್ಟೆಯಲ್ಲಿ ಕೇಳಿಬಂದಿದ್ದು, ಈ ಕುರಿತು ಪ್ರತಿಪಕ್ಷಗಳು ಚು.ಆಯೋಗಕ್ಕೆ ದೂರು ನೀಡಿದೆ.

ಮಹಾರಾಷ್ಟ್ರದ ಪರ್ಲಿ ನಗರದಲ್ಲಿ ವಾಸಿಸುವ ರೈತ ನಾನಾ ನೌಕರೆ, ಮೇ 13ರಂದು ಶಾರದಾ ನಗರದ ವಿವೇಕ ವರ್ಧಿನಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಗೆ ಮತ ಚಲಾಯಿಸಲು ಹೋಗಿದ್ದರು. ಮತಗಟ್ಟೆಯಲ್ಲಿ ಅವರ ಬೆರಳಿಗೆ ಶಾಯಿ ಹಾಕಲಾಗಿದೆ ಆದರೆ ಅವರು ಮತಯಂತ್ರದ ಬಳಿ ಮತ ಚಲಾಯಿಸಲು ಹೋದಾಗ ಅಲ್ಲಿದ್ದ ಕೆಲವರು ಅವರನ್ನು ಮತಗಟ್ಟೆಯಿಂದ ಹೊರಗೆ ಹೋಗುವಂತೆ ಆಗ್ರಹಿಸಿ ಕೊನೆಗೆ ಮತಗಟ್ಟೆಯಿಂದ ಹೊರಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ಕುಟುಂಬದ ಸುರಕ್ಷತೆಯ ಕಾರಣದಿಂದ ಹೆದರಿ ಮತಯಂತ್ರದ ಬಳಿ ಹೋಗುವ ಹೆಚ್ಚಿನ ಪ್ರಯತ್ನಗಳನ್ನು ನಾನು ಮಾಡಲಿಲ್ಲ ಎಂದು ನೌಕರೆ ಹೇಳಿದ್ದಾರೆ. ಮತದಾನ ಮಾಡದಂತೆ ನಮಗೆ ನಿರ್ಬಂಧಿಸಿದಾಗ ನಾನು ಮತ್ತು ನನ್ನ ಕುಟುಂಬ ಸ್ಥಳದಿಂದ ಹೊರಟೆವು, ಚುನಾವಣಾ ಅಧಿಕಾರಿಯೊಬ್ಬರು ಸ್ಥಳದಲ್ಲಿಯೇ ಇದ್ದರು ಆದರೆ ಅವರಿಂದ ಏನೂ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಬೀಡ್ ಲೋಕಸಭಾ ಕ್ಷೇತ್ರದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾದ ಪರ್ಲಿಯಾದ್ಯಂತ ಹಲವಾರು ಮತದಾರರು ‘ನಮ್ಮ ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ’ ಎಂದು ಇದೇ ರೀತಿಯ ಆರೋಪವನ್ನು ಮಾಡಿದ್ದಾರೆ. ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮಹಾಯುತಿ ಮೈತ್ರಿಕೂಟದ ಕಾರ್ಯಕರ್ತರು ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ವಿರೋಧ ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಕುರಿತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣ) ನಾಯಕ ಬಜರಂಗ್ ಸೋನಾವಾನೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಮತದಾರರ ಕೈಗಳಿಗೆ ಶಾಯಿ ಹಾಕಿ ವಾಪಾಸ್ಸು ಕಳುಹಿಸಿ ಮತದಾನದ ಹಕ್ಕನ್ನು ಕಸಿದುಕೊಂಡು ನಕಲಿ ಮತದಾನವನ್ನು ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ನಾನು ಧರ್ಮಪುರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಮುಸ್ಲಿಂ ಮಹಿಳೆಯಿಂದ ಈ ಕುರಿತ ಮೊದಲ ದೂರು ಸ್ವೀಕರಿಸಿದೆ. ಮಹಿಳೆಯು, ನನ್ನ ಬೆರಳುಗಳಿಗೆ ಶಾಯಿ ಹಾಕಲಾಗಿದೆ, ಆದರೆ ಮತದಾನಕ್ಕೆ ಅವಕಾಶ ಕೊಡದೆ ಬೇರೆಯವರು ಮತದಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಧರ್ಮಪುರಿಯಲ್ಲಿ ಸುಮಾರು 1,000 ಮುಸ್ಲಿಂ ಮತದಾರರಿದ್ದರು ಎಂದು ಬಜರಂಗ್ ಸೋನಾವಾನೆ ಹೇಳಿದ್ದಾರೆ.

ಪರ್ಲಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಬಜರಂಗ್ ಸೋನಾವಾನೆ ಮತ್ತು ಬಿಜೆಪಿಯ ಮಾಜಿ ಶಾಸಕಿ ಪಂಕಜಾ ಮುಂಡೆ ಕಣದಲ್ಲಿದ್ದಾರೆ. ಮೇ 13ರಂದು ಸೋನಾವಾನೆ ಚುನಾವಣಾ ಆಯೋಗಕ್ಕೆ ಈ ಕುರಿತು ದೂರು ಸಲ್ಲಿಸಿದ್ದು, ಪರ್ಲಿ, ಮಜಲ್ಗಾಂವ್ ಮತ್ತು ಕೈಜ್‌ನ ಕೆಲವು ಬೂತ್‌ಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದ್ದಾರೆ. ಧರ್ಮಪುರಿ ಗ್ರಾಮದಲ್ಲಿ ಮುಸ್ಲಿಮರು ಹಾಗೂ ಜಿರೇವಾಡಿ ಗ್ರಾಮದಲ್ಲಿ ಹಿಂದುಳಿದ ವರ್ಗದ ಮತದಾರರಿಗೆ ಮತದಾನ ಮಾಡಲು ಅವಕಾಶವನ್ನು ನೀಡಲಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು 48 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಮಹಾರಾಷ್ಟ್ರ ಮುಖ್ಯ ಚುನಾವಣಾ ಆಯುಕ್ತರು ಜಿಲ್ಲಾ ಚುನಾವಣಾಧಿಕಾರಿಗೆ ಸೂಚಿಸಿದ್ದಾರೆ. ಸೋನಾವಾನೆ ಅವರು ಚುನಾವಣಾ ಆಯೋಗಕ್ಕೆ ಈ ಕುರಿತು ಹತ್ತಾರು ವಿಡಿಯೋಗಳನ್ನು ಪುರಾವೆಯಾಗಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ಜಿಲ್ಲಾ ಚುನಾವಣಾಧಿಕಾರಿ  ಮರುಮತದಾನ ಅಗತ್ಯವಿಲ್ಲ ಎಂದು ಚುನಾವಣಾ ಆಯೋಗಕ್ಕೆ ವರದಿಯನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.

ನಮಗೆ ಸಲ್ಲಿಸಿದ ಯಾವುದೇ ವೀಡಿಯೊಗಳಲ್ಲಿ ಚುನಾವಣಾ ಅಕ್ರಮ ನಡೆದಿರುವುದು ಸೆರೆಯಾಗಿಲ್ಲ, ಕೆಲವು ಬೂತ್‌ಗಳಲ್ಲಿ ಜನಸಂದಣಿಯನ್ನು ಮಾತ್ರ ತೋರಿಸುತ್ತದೆ. ಈ ಕುರಿತು ಮತಗಟ್ಟೆ ಅಧಿಕಾರಿಗಳನ್ನು ಕೂಡ ವಿಚಾರಣೆ ನಡೆಸಲಾಗಿದೆ. ಈ ವೇಳೆ ಯಾವುದೇ ಅವ್ಯವಹಾರ ನಡೆದಿರುವುದು ಕಂಡು ಬಂದಿಲ್ಲ ಎಂದು  ಜಿಲ್ಲಾಧಿಕಾರಿ ದೀಪಾ ಮುಂಡೆ ಹೇಳಿದ್ದಾರೆ.

ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಡಳಿತ ವಿರೋಧಿ ಭಾವನೆಯನ್ನು ಎದುರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ಬಿಜೆಪಿ ಪಕ್ಷವು 1996ರಿಂದ ಎಲ್ಲಾ ಲೋಕಸಭಾ ಚುನಾವಣೆಗಳಲ್ಲಿ ಈ ಕ್ಷೇತ್ರವನ್ನು ಮರಾಠರು ಮತ್ತು ಒಬಿಸಿಗಳ ಬೆಂಬಲದೊಂದಿಗೆ ಗೆದ್ದಿದೆ. ಆದರೆ ಈ ಬಾರಿ ಮರಾಠ ಮೀಸಲಾತಿಯ ಬೇಡಿಕೆ, ಇತರ ಹಿಂದುಳಿದ ವರ್ಗಗಳಲ್ಲಿ ಮರಾಠರಿಗೆ ಮರಾಠ ಕೋಟಾವನ್ನು ನೀಡುವ ಕುರಿತು ವಿರೋಧವಿದೆ. ಬೀಡ್‌ನಲ್ಲಿ ಸುಮಾರು 1.15 ಲಕ್ಷ ಒಬಿಸಿ ಮತದಾರರು, ಒಂದು ಲಕ್ಷಕ್ಕೂ ಹೆಚ್ಚು ಮರಾಠರು, ಸುಮಾರು 31,000 ದಲಿತರು ಮತ್ತು 43,000 ಮುಸ್ಲಿಮರು ಇದ್ದಾರೆ. 64,000 ಮತದಾರರನ್ನು ಹೊಂದಿರುವ ಪಂಕಜಾ ಮುಂಡೆ ಸೇರಿರುವ ಒಬಿಸಿ ಗುಂಪಿನ ವಂಜಾರಿ ಸಮುದಾಯವು ಇಲ್ಲಿದೆ. ಬೀಡಿನಲ್ಲಿ ಇರುವ ಹಲವಾರು ಅಧಿಕಾರಿಗಳು ಈ ಸಮುದಾಯದಿಂದ ಬಂದವರಾಗಿದ್ದಾರೆ. ಒಂದು ಕುಟುಂಬವು ಹಲವು ವರ್ಷಗಳಿಂದ ಇಲ್ಲಿ ಅಧಿಕಾರದಲ್ಲಿದ್ದು, ಜನರಿಗೆ ಏನೂ ಮಾಡಿಲ್ಲವಾದ್ದರಿಂದ ಬಿಜೆಪಿಯ ಮತ ಹಂಚಿಕೆಯು ಬೀಡಿನಲ್ಲಿ ಕುಸಿಯುತ್ತದೆ. ಆದ್ದರಿಂದ ಹಿಂಬಾಗಿಲ ಮೂಲಕ ಮತವನ್ನು ಪಡೆಯಲು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....