Homeಕರ್ನಾಟಕಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

- Advertisement -
- Advertisement -

ಬಿಜೆಪಿಯವರು ರಾಮಾಯಣ, ಮಹಾಭಾರತ ನಮ್ಮವು ಅಂತ ಹೇಳಿಕೊಳ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನ ನೆನಪು ಮಾಡುವೆ. ಆಕೆಯ ವಸ್ತ್ರವನ್ನು ಸೆಳೆದಾಗ ಆಕೆಯ ಐವರು ಗಂಡಂದಿರು ಸಹಾಯಕ್ಕೆ ಬರುವುದಿಲ್ಲ. ಆಕೆ ಪ್ರತಿಜ್ಞೆ ಮಾಡಿದಂತೆ ದುಶ್ಯಾಸನನ ತೊಡೆ ಸೀಳಿ ಆ ರಕ್ತದಿಂದ ಮುಡಿಕಟ್ಟಿದಳು. ಹಾಗಾಗಿ ಪ್ರಜ್ವಲ ನೀನು ನನ್ನ ಮೊಮ್ಮಗನ ವಯಸ್ಸಿನವನು. 4ನೇ ತಾರೀಖಿನ ನಂತರ ಗೆದ್ದಬಿಡಬಹುದು ಎಂಬ ಅಹಂಕಾರ ನಿನಗಿದ್ರೆ ಎಚ್ಚರಿಕೆ, ನಿನ್ನ ಅಟ್ಟಹಾಸಕ್ಕೆ ಕೊನೆಯಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ ಆಕ್ರೋಶ ಹೊರಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹಾನಸದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇಡೀ ಕರ್ನಾಟಕದ ಜನವೇ ಹಾಸನಕ್ಕೆ ಬರುವಂತಾಗಿದೆ” ಎಂದು ಹೇಳಿದರು.

ಈ ದೇಶದ ಪ್ರಧಾನಿ ತಾಯಿ ದ್ರೋಹಿ

ಹೆಣ್ಣುಮಕ್ಕಳನ್ನು ಅಸಹಾಯಕತೆಯ ಖೆಡ್ಡಾಗೆ ತೋಡಿ ವಿಡಿಯೋ ಮಾಡಿ ಅವರ ಘನತೆಯನ್ನು ಉಲ್ಲಂಘಿಸಲಾಗಿದೆ. ಆದರೆ, ಪ್ರಧಾನಿ ನಾನು ಜೈವಿಕವಾಗಿ ತಾಯಿ ಹೊಟ್ಟೆಯಲ್ಲಿ ಹುಟ್ಟಿಬಂದಿಲ್ಲ ಬಂದಿಲ್ಲ, ದೇವರು ಕಳಿಸಿದ್ದಾನೆ ಅಂತಾರೆ. ಆದರೆ, ಈಗ ಹೇಳ್ತಾ ಇದೀನಿ, ಈ ದೇಶದ ಪ್ರಧಾನಿ ತಾಯಿದ್ರೋಹಿ. ರಕ್ತ ಸುರಿಸಿ ನೋವು ತಿಂದು ಜನ್ಮ ಕೊಡುವವಳನ್ನು ಪೆನ್‌ಡ್ರೈವ್‌ನಲ್ಲಿ ನೋಡುದ್ವಿ ಎಂದವರನ್ನು ಶಿಕ್ಷಿಸದಿರುವ ನಿಮಗೆಲ್ಲ ನಾಚಿಕೆಯಾಗಬೇಕು.

ಡಿಸಿ-ಎಸ್‌ಪಿ ಕೂಡ ತಪ್ಪಿತಸ್ಥರು

‘ವಿಡಿಯೋ ಮಾಡಿದ ಪ್ರಜ್ವಲ್, ಪೆನ್‌ಡ್ರೈವ್‌ ಹಂಚಿದವರು ಮತ್ತು ಜಿಲ್ಲಾಡಳಿತಕ್ಕೆ ಪ್ರಶ್ನಿಸಬೇಕಿದೆ. ಪ್ರಸಾರವಾಗುವುದಕ್ಕೆ ಬಿಡಬೇಡಿ ಅಂತ ಮನವಿ ಮಾಡಿದರೂ ಕ್ರಮವಹಿಸಲಿಲ್ಲ. ಹಾಸನದ ಡಿಸಿ, ಎಸ್‌ಪಿ ನೀವು ಮಹಿಳೆಯಾಗಿದ್ದುಕೊಂಡು ತಪ್ಪು ಮಾಡಿದ್ದೀರಿ, ನೀವು ತಪ್ಪಿತಸ್ಥರೆ… ಆ ವಿಡಿಯೋಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಯುವುದರಲ್ಲಿ ನೀವುಗಳು ವಿಫಲವಾಗಿದ್ದೀರಿ” ಎಂದು ಬೇಸರ ಹೊರಹಾಕಿದರು.

‘ಸಂತ್ರಸ್ತ ಮಹಿಳೆ ಅನ್ನಬೇಡಿ, ಆ ಪದವನ್ನು ಕಿತ್ತಾಕಿ. ತೊಂದರೆಗೆ ಒಳಗಾದ ಮಹಿಳೆಯರ ಜತೆ ನಾವಿದ್ದೇವೆ ಎಂದು ಹೇಳುವುದಕ್ಕೆ ನಾವಿಲ್ಲಿ ಬಂದಿದ್ದೀವಿ. ಈ ಸರ್ಕಾರ ಮಹಿಳೆಯರನ್ನ ರಕ್ಷಿಸಬೇಕು. ಅವರಿಗೆ ಘಟನೆ ಬದುಕನ್ನು ರಕ್ಷಿಸಲು ಮುಂದಾಗು ಅಂತ ಕೇಳುದ್ರೆ ಸಿದ್ದರಾಮಯ್ಯ ಅವರೇ ನಿಮ್ಮ ಬೇಳೆ ಬೇಯಿಸಿಕೊಂಡ್ರಿ, ಜವಾಬ್ದಾರಿಯಿಂದ ವಂಚಿತರಾದ್ರಿ. ಇನ್ನು ಬಿಜೆಪಿಯವ್ರೇ, ನೇಹಾ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿರಿ. ಹಾನಸಕ್ಕೆ ಬಂದು ಅತ್ಯಾಚಾರಿ ಪ್ರಜ್ವಲನಿಗೆ ವೋಟಾಕಿ ಅಂತ ಕೇಳಿದ್ರಿ, ಪ್ರಧಾನಿ ಮೋದಿ, ಶೋಭಕ್ಕ, ಅಮಿತ್ ಶಾ ಎಲ್ಲರೂ ಎಲ್ಲಿದ್ದೀರಿ. ಹಾನಸಕ್ಕೆ ಕಾಂಗ್ರೆಸ್, ಬಿಜೆಪಿ- ಜೆಡಿಎಸ್ ಮೂರು ಪಕ್ಷದವರು ಯಾರು ಒಳ್ಳೆದನ್ನ ಮಾಡಿಲ್ಲ. ಹಾಸನದ ಜನತೆಯ ಬದುಕಲ್ಲಿ ಆಟ ಆಡಿದ್ದಾರೆ’ ಎಂದರು.

ಪ್ರಜ್ವಲನಿಂದ ಕಾಡುಪ್ರಾಣಿ ಭೇಟೆ

ಪ್ರಜ್ವಲ್ ದೇವಲಾಪುರ ಅರಣ್ಯದಲ್ಲಿ ಜಿಂಕೆ, ಚೀತಾ, ಮೊಲ ಸೇರಿದಂತೆ ಹಲವು ಪ್ರಾಣಿಗಳನ್ನು ಭೇಟೆಯಾಡಲು ಹೋಗುತ್ತಾನೆ. ಅಲ್ಲಿನ ಸ್ಥಳೀಯರು ಅದಕ್ಕೆ ಸಾಕ್ಷಿ ಇದ್ದಾರೆ. ಡಿಸಿ-ಎಸ್‌ಪಿ ತಾಕತ್ತಿದ್ದರೆ ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಮಾಡಿ ಎಂದು ಸವಾಲು ಹಾಕಿದರು.

ರೇವಣ್ಣನ ಅಸ್ಪೃಶ್ಯತೆ ಒಪ್ಪಬೇಡಿ

ರೇವಣ್ಣ ನೀವು ನಡೆಸಿರುವ ಅಸ್ಪೃಶ್ಯತೆಯ ಕರಾಳ ಮುಖವನ್ನು ಬಿಚ್ಚಿಡುತ್ತೇವೆ. ಹಾಸನದ ಜನತೆ ಆ ಕುಟುಂಬ ಇದುವರೆಗೂ ನಡೆಸಿರುವ ಅಸ್ಪೃಶ್ಯತೆ, ಜಾತಿ ದೌರ್ಜನ್ಯಗಳನ್ನು ಒಪ್ಪಬೇಡಿ, ತಿರಸ್ಕರಿಸಿ, ಪ್ರತಿಭಟಿಸಿ, ಸೆಟೆದು ನಿಲ್ಲಿ ಎಂದು ನೀಲಾ ಕರೆ ನೀಡಿದರು.

ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಒಡೆದ ಬಿಜೆಪಿ

ಈ ಪ್ರಕರಣದ ಮೂಲಕ ಹಾಸನದ ಗಂಡಸರು ಹೆಣ್ಣನ್ನು ಒಂಟಿಯಾಗಿ ಆಚೆ ಹೋಗದಂತೆ ಕಟ್ಟಿಹಾಕಲು ಬಿಜೆಪಿ ದಾರಿಮಾಡಿಕೊಟ್ಟಿದೆ. ಮನಸ್ಮೃತಿಯ ಅಣತಿಯಂತೆ ಮಹಿಳೆಯರನ್ನು ಕಟ್ಟಿಹಾಕುವ ಕೆಲಸಕ್ಕೆ ಬಿಜೆಪಿ ಈ ಪ್ರಕರಣದ ಮೂಲಕ ಸಂಚು ರೂಪಿಸಿದೆ. ಇನ್ನು ಎರಡನೇಯದಾಗಿ, ಕುಮಾರಸ್ವಾಮಿ, ದೇವೇಗೌಡ ಹಾಗೂ ರೇವಣ್ಣ ನಿಮ್ಮ ಮನೆಯ ಮಗನನ್ನು ಬೆಂಬಲಿಸಿ ಆ ಮೂಲಕ ಒಂದು ಪ್ರಾದೇಶಿಕ ಪಕ್ಷವನ್ನು ನಾಶ ಮಾಡಿದ್ದಾರೆ ನಿಮಗೆ ಇದು ಇಂದಿಗೂ ಅರ್ಥವಾಗಿಲ್ಲ ಎಂದರು.

ಹಾಸನದ ಮಹಿಳೆಯರ ಕಣ್ಣೀರ ಹನಿಗಳನ್ನು ಬಾವುಟವಾಗಿಸಿ ರಾಜ್ಯಾದ್ಯಂತ ಹೋರಾಟ ಮಾಡೋಣ. ಸ್ವಾಭಿಮಾನದ, ಮಹಿಳಾ ಅಸ್ಮಿತೆಯ ಚಳುವಳಿಯ ಕಟ್ಟೋಣ ಅಂಜಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ನೊಂದ ಮಹಿಳೆಯರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ; ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...