Homeಕರ್ನಾಟಕಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

ಹಾಸನ ಚಲೋ| ಪ್ರಜ್ವಲ್ ಅಟ್ಟಹಾಸಕ್ಕೆ ಕೊನೆಯಿದೆ, ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಕೆ. ನೀಲಾ

- Advertisement -
- Advertisement -

ಬಿಜೆಪಿಯವರು ರಾಮಾಯಣ, ಮಹಾಭಾರತ ನಮ್ಮವು ಅಂತ ಹೇಳಿಕೊಳ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ ಕತೆಯನ್ನ ನೆನಪು ಮಾಡುವೆ. ಆಕೆಯ ವಸ್ತ್ರವನ್ನು ಸೆಳೆದಾಗ ಆಕೆಯ ಐವರು ಗಂಡಂದಿರು ಸಹಾಯಕ್ಕೆ ಬರುವುದಿಲ್ಲ. ಆಕೆ ಪ್ರತಿಜ್ಞೆ ಮಾಡಿದಂತೆ ದುಶ್ಯಾಸನನ ತೊಡೆ ಸೀಳಿ ಆ ರಕ್ತದಿಂದ ಮುಡಿಕಟ್ಟಿದಳು. ಹಾಗಾಗಿ ಪ್ರಜ್ವಲ ನೀನು ನನ್ನ ಮೊಮ್ಮಗನ ವಯಸ್ಸಿನವನು. 4ನೇ ತಾರೀಖಿನ ನಂತರ ಗೆದ್ದಬಿಡಬಹುದು ಎಂಬ ಅಹಂಕಾರ ನಿನಗಿದ್ರೆ ಎಚ್ಚರಿಕೆ, ನಿನ್ನ ಅಟ್ಟಹಾಸಕ್ಕೆ ಕೊನೆಯಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ಕೆ. ನೀಲಾ ಆಕ್ರೋಶ ಹೊರಹಾಕಿದರು.

ಹಾಸನದಲ್ಲಿ ನಡೆದ ‘ಹೋರಾಟದ ನಡಿಗೆ, ಹಾಸನದ ಕಡೆಗೆ..’ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಹಾನಸದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ-ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇಡೀ ಕರ್ನಾಟಕದ ಜನವೇ ಹಾಸನಕ್ಕೆ ಬರುವಂತಾಗಿದೆ” ಎಂದು ಹೇಳಿದರು.

ಈ ದೇಶದ ಪ್ರಧಾನಿ ತಾಯಿ ದ್ರೋಹಿ

ಹೆಣ್ಣುಮಕ್ಕಳನ್ನು ಅಸಹಾಯಕತೆಯ ಖೆಡ್ಡಾಗೆ ತೋಡಿ ವಿಡಿಯೋ ಮಾಡಿ ಅವರ ಘನತೆಯನ್ನು ಉಲ್ಲಂಘಿಸಲಾಗಿದೆ. ಆದರೆ, ಪ್ರಧಾನಿ ನಾನು ಜೈವಿಕವಾಗಿ ತಾಯಿ ಹೊಟ್ಟೆಯಲ್ಲಿ ಹುಟ್ಟಿಬಂದಿಲ್ಲ ಬಂದಿಲ್ಲ, ದೇವರು ಕಳಿಸಿದ್ದಾನೆ ಅಂತಾರೆ. ಆದರೆ, ಈಗ ಹೇಳ್ತಾ ಇದೀನಿ, ಈ ದೇಶದ ಪ್ರಧಾನಿ ತಾಯಿದ್ರೋಹಿ. ರಕ್ತ ಸುರಿಸಿ ನೋವು ತಿಂದು ಜನ್ಮ ಕೊಡುವವಳನ್ನು ಪೆನ್‌ಡ್ರೈವ್‌ನಲ್ಲಿ ನೋಡುದ್ವಿ ಎಂದವರನ್ನು ಶಿಕ್ಷಿಸದಿರುವ ನಿಮಗೆಲ್ಲ ನಾಚಿಕೆಯಾಗಬೇಕು.

ಡಿಸಿ-ಎಸ್‌ಪಿ ಕೂಡ ತಪ್ಪಿತಸ್ಥರು

‘ವಿಡಿಯೋ ಮಾಡಿದ ಪ್ರಜ್ವಲ್, ಪೆನ್‌ಡ್ರೈವ್‌ ಹಂಚಿದವರು ಮತ್ತು ಜಿಲ್ಲಾಡಳಿತಕ್ಕೆ ಪ್ರಶ್ನಿಸಬೇಕಿದೆ. ಪ್ರಸಾರವಾಗುವುದಕ್ಕೆ ಬಿಡಬೇಡಿ ಅಂತ ಮನವಿ ಮಾಡಿದರೂ ಕ್ರಮವಹಿಸಲಿಲ್ಲ. ಹಾಸನದ ಡಿಸಿ, ಎಸ್‌ಪಿ ನೀವು ಮಹಿಳೆಯಾಗಿದ್ದುಕೊಂಡು ತಪ್ಪು ಮಾಡಿದ್ದೀರಿ, ನೀವು ತಪ್ಪಿತಸ್ಥರೆ… ಆ ವಿಡಿಯೋಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಯುವುದರಲ್ಲಿ ನೀವುಗಳು ವಿಫಲವಾಗಿದ್ದೀರಿ” ಎಂದು ಬೇಸರ ಹೊರಹಾಕಿದರು.

‘ಸಂತ್ರಸ್ತ ಮಹಿಳೆ ಅನ್ನಬೇಡಿ, ಆ ಪದವನ್ನು ಕಿತ್ತಾಕಿ. ತೊಂದರೆಗೆ ಒಳಗಾದ ಮಹಿಳೆಯರ ಜತೆ ನಾವಿದ್ದೇವೆ ಎಂದು ಹೇಳುವುದಕ್ಕೆ ನಾವಿಲ್ಲಿ ಬಂದಿದ್ದೀವಿ. ಈ ಸರ್ಕಾರ ಮಹಿಳೆಯರನ್ನ ರಕ್ಷಿಸಬೇಕು. ಅವರಿಗೆ ಘಟನೆ ಬದುಕನ್ನು ರಕ್ಷಿಸಲು ಮುಂದಾಗು ಅಂತ ಕೇಳುದ್ರೆ ಸಿದ್ದರಾಮಯ್ಯ ಅವರೇ ನಿಮ್ಮ ಬೇಳೆ ಬೇಯಿಸಿಕೊಂಡ್ರಿ, ಜವಾಬ್ದಾರಿಯಿಂದ ವಂಚಿತರಾದ್ರಿ. ಇನ್ನು ಬಿಜೆಪಿಯವ್ರೇ, ನೇಹಾ ಪ್ರಕರಣಕ್ಕೆ ಕೋಮು ಬಣ್ಣ ಬಳಿದಿರಿ. ಹಾನಸಕ್ಕೆ ಬಂದು ಅತ್ಯಾಚಾರಿ ಪ್ರಜ್ವಲನಿಗೆ ವೋಟಾಕಿ ಅಂತ ಕೇಳಿದ್ರಿ, ಪ್ರಧಾನಿ ಮೋದಿ, ಶೋಭಕ್ಕ, ಅಮಿತ್ ಶಾ ಎಲ್ಲರೂ ಎಲ್ಲಿದ್ದೀರಿ. ಹಾನಸಕ್ಕೆ ಕಾಂಗ್ರೆಸ್, ಬಿಜೆಪಿ- ಜೆಡಿಎಸ್ ಮೂರು ಪಕ್ಷದವರು ಯಾರು ಒಳ್ಳೆದನ್ನ ಮಾಡಿಲ್ಲ. ಹಾಸನದ ಜನತೆಯ ಬದುಕಲ್ಲಿ ಆಟ ಆಡಿದ್ದಾರೆ’ ಎಂದರು.

ಪ್ರಜ್ವಲನಿಂದ ಕಾಡುಪ್ರಾಣಿ ಭೇಟೆ

ಪ್ರಜ್ವಲ್ ದೇವಲಾಪುರ ಅರಣ್ಯದಲ್ಲಿ ಜಿಂಕೆ, ಚೀತಾ, ಮೊಲ ಸೇರಿದಂತೆ ಹಲವು ಪ್ರಾಣಿಗಳನ್ನು ಭೇಟೆಯಾಡಲು ಹೋಗುತ್ತಾನೆ. ಅಲ್ಲಿನ ಸ್ಥಳೀಯರು ಅದಕ್ಕೆ ಸಾಕ್ಷಿ ಇದ್ದಾರೆ. ಡಿಸಿ-ಎಸ್‌ಪಿ ತಾಕತ್ತಿದ್ದರೆ ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಮಾಡಿ ಎಂದು ಸವಾಲು ಹಾಕಿದರು.

ರೇವಣ್ಣನ ಅಸ್ಪೃಶ್ಯತೆ ಒಪ್ಪಬೇಡಿ

ರೇವಣ್ಣ ನೀವು ನಡೆಸಿರುವ ಅಸ್ಪೃಶ್ಯತೆಯ ಕರಾಳ ಮುಖವನ್ನು ಬಿಚ್ಚಿಡುತ್ತೇವೆ. ಹಾಸನದ ಜನತೆ ಆ ಕುಟುಂಬ ಇದುವರೆಗೂ ನಡೆಸಿರುವ ಅಸ್ಪೃಶ್ಯತೆ, ಜಾತಿ ದೌರ್ಜನ್ಯಗಳನ್ನು ಒಪ್ಪಬೇಡಿ, ತಿರಸ್ಕರಿಸಿ, ಪ್ರತಿಭಟಿಸಿ, ಸೆಟೆದು ನಿಲ್ಲಿ ಎಂದು ನೀಲಾ ಕರೆ ನೀಡಿದರು.

ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಒಡೆದ ಬಿಜೆಪಿ

ಈ ಪ್ರಕರಣದ ಮೂಲಕ ಹಾಸನದ ಗಂಡಸರು ಹೆಣ್ಣನ್ನು ಒಂಟಿಯಾಗಿ ಆಚೆ ಹೋಗದಂತೆ ಕಟ್ಟಿಹಾಕಲು ಬಿಜೆಪಿ ದಾರಿಮಾಡಿಕೊಟ್ಟಿದೆ. ಮನಸ್ಮೃತಿಯ ಅಣತಿಯಂತೆ ಮಹಿಳೆಯರನ್ನು ಕಟ್ಟಿಹಾಕುವ ಕೆಲಸಕ್ಕೆ ಬಿಜೆಪಿ ಈ ಪ್ರಕರಣದ ಮೂಲಕ ಸಂಚು ರೂಪಿಸಿದೆ. ಇನ್ನು ಎರಡನೇಯದಾಗಿ, ಕುಮಾರಸ್ವಾಮಿ, ದೇವೇಗೌಡ ಹಾಗೂ ರೇವಣ್ಣ ನಿಮ್ಮ ಮನೆಯ ಮಗನನ್ನು ಬೆಂಬಲಿಸಿ ಆ ಮೂಲಕ ಒಂದು ಪ್ರಾದೇಶಿಕ ಪಕ್ಷವನ್ನು ನಾಶ ಮಾಡಿದ್ದಾರೆ ನಿಮಗೆ ಇದು ಇಂದಿಗೂ ಅರ್ಥವಾಗಿಲ್ಲ ಎಂದರು.

ಹಾಸನದ ಮಹಿಳೆಯರ ಕಣ್ಣೀರ ಹನಿಗಳನ್ನು ಬಾವುಟವಾಗಿಸಿ ರಾಜ್ಯಾದ್ಯಂತ ಹೋರಾಟ ಮಾಡೋಣ. ಸ್ವಾಭಿಮಾನದ, ಮಹಿಳಾ ಅಸ್ಮಿತೆಯ ಚಳುವಳಿಯ ಕಟ್ಟೋಣ ಅಂಜಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ನೊಂದ ಮಹಿಳೆಯರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ; ಸಂತ್ರಸ್ತರನ್ನೇ ಅಪರಾಧಿಗಳನ್ನಾಗಿಸುವ ಯತ್ನಗಳು ನಡೆದವು: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...