Homeಮುಖಪುಟಜಮ್ಮ-ಕಾಶ್ಮೀರ: ಪೊಲೀಸ್‌ ಠಾಣೆ ಮೇಲೆ ಹಿಂಸಾತ್ಮಕ ದಾಳಿ; ಮೂವರು ಲೆಫ್ಟಿನೆಂಟ್ ಕರ್ನಲ್‌ಗಳು ಸೇರಿ 16 ಸೈನಿಕರ...

ಜಮ್ಮ-ಕಾಶ್ಮೀರ: ಪೊಲೀಸ್‌ ಠಾಣೆ ಮೇಲೆ ಹಿಂಸಾತ್ಮಕ ದಾಳಿ; ಮೂವರು ಲೆಫ್ಟಿನೆಂಟ್ ಕರ್ನಲ್‌ಗಳು ಸೇರಿ 16 ಸೈನಿಕರ ವಿರುದ್ಧ ಎಫ್ಐಆರ್‌

- Advertisement -
- Advertisement -

ಕುಪ್ವಾರ ಪೊಲೀಸ್ ಠಾಣೆಯ ಮೇಲೆ ಹಿಂಸಾತ್ಮಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್‌ಗಳು ಸೇರಿ ಒಟ್ಟು 16 ಸೈನಿಕರ ವಿರುದ್ಧ ಕೊಲೆ ಯತ್ನ ಮತ್ತು ಡಕಾಯಿತಿ ಸೇರಿದಂತೆ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮಂಗಳವಾರ ಪೊಲೀಸರು ಕುಪ್ವಾರ ಜಿಲ್ಲೆಯ ಬಟ್ಪೋರ ಎಂಬಲ್ಲಿ ಟೆರಿಟೋರಿಯಲ್‌ ಸೇನೆಯ ಸೈನಿಕರೊಬ್ಬರ ಮನೆಯ ಮೇಲೆ ಮಾದಕವಸ್ತು ಪ್ರಕರಣವೊಂದರ ತನಿಖೆ ಭಾಗವಾಗಿ ದಾಳಿ ನಡೆಸಿದ್ದರು. ಇದರಿಂದ ಆಕ್ರೋಶಗೊಂಡ ಸೈನಿಕರು ಅದೇ ದಿನ ರಾತ್ರಿ ಸುಮಾರು 9.40ಕ್ಕೆ ಠಾಣೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಟೆರಿಟೋರಿಯಲ್ ಆರ್ಮಿಯ ಶಸ್ತ್ರಸಜ್ಜಿತ ಮತ್ತು ಸಮವಸ್ತ್ರಧಾರಿ ಸಿಬ್ಬಂದಿಗಳ ಗುಂಪು, ಸೇನೆಯ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಪೊಲೀಸ್ ಠಾಣೆಗೆ ದಾಳಿ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪ್ರಾದೇಶಿಕ ಸೇನೆಯು ಭಾರತೀಯ ಸೇನೆಗೆ ಬೆಂಬಲ ಒದಗಿಸುವ ಅರೆಕಾಲಿಕ ಸ್ವಯಂಸೇವಕರನ್ನು ಒಳಗೊಂಡಿರುವ ಮಿಲಿಟರಿ ಮೀಸಲು ಪಡೆಯಾಗಿದೆ.

ಸೇನಾ ಲೆಫ್ಟಿನೆಂಟ್ ಕರ್ನಲ್ ಅಂಕಿತ್ ಸೂದ್, ರಾಜೀವ್ ಚೌಹಾಣ್ ಮತ್ತು ನಿಖಿಲ್ ನೇತೃತ್ವದ ಸಶಸ್ತ್ರ ಗುಂಪು ಪೊಲೀಸ್ ಠಾಣೆಯ ಆವರಣಕ್ಕೆ ಬಲವಂತವಾಗಿ ಪ್ರವೇಶಿಸಿ ಅಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಪೊಲೀಸ್ ಅಧಿಕಾರಿಗಳಾದ ರಯೀಸ್ ಖಾನ್, ಇಮ್ತಿಯಾಜ್ ಮಲಿಕ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸಲೀಮ್ ಮುಷ್ತಾಕ್, ಜಹೂರ್ ಅಹ್ಮದ್ ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸ್ ಅಧಿಕಾರಿಗಳಿಂದ ಮೊಬೈಲ್ ಫೋನ್‌ಗಳನ್ನು ಸೇನಾ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ ಮತ್ತು ಸ್ಥಳದಿಂದ ಪರಾರಿಯಾಗುವ ಮೊದಲು ಪೊಲೀಸ್ ಪೇದೆ ಗುಲಾಂ ರಸೂಲ್‌ ಅವರನ್ನು ಅಪಹರಿಸಿದ್ದಾರೆ ಎಂದು ಎಫ್ಐಆರ್‌ನಲ್ಲಿ ಆರೋಪಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯು ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸಲು ಮತ್ತು ಅಪರಾಧಿಗಳ ವಿರುದ್ಧ ಕಾನೂನು ಕ್ರಮವನ್ನು ಪ್ರಾರಂಭಿಸಲು ಸಹಾಯ ಮಾಡಿದೆ. ಆರೋಪಿ ಸೇನಾ ಸಿಬ್ಬಂದಿಗಳ ವಿರುದ್ಧ ಸೆಕ್ಸನ್‌ 186(ಸಾರ್ವಜನಿಕ ಕಾರ್ಯಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 332 (ಸಾರ್ವಜನಿಕ ಸೇವಕರನ್ನು ಅವರ ಕರ್ತವ್ಯದಿಂದ ತಡೆಯಲು ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು), 307(ಕೊಲೆಯ ಯತ್ನ), 342 ಮತ್ತು 147 (ಗಲಭೆಗೆ ಶಿಕ್ಷೆ), 392 (ದರೋಡೆಗೆ ಶಿಕ್ಷೆ), 397 ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯ ತನಿಖೆಯನ್ನು ಕುಪ್ವಾರ ಉಪ ಪೊಲೀಸ್ ವರಿಷ್ಠಾಧಿಕಾರಿ ನಡೆಸುತ್ತಿದ್ದಾರೆ. ಘಟನೆ ಬೆನ್ನಲ್ಲಿ ಪ್ರತಿಕ್ರಿಯಿಸಿದ್ದ ಶ್ರೀನಗರ ಮೂಲದ ರಕ್ಷಣಾ ವಕ್ತಾರರು ಘಟನೆಯನ್ನು ತಣ್ಣಗಾಗಿಸಲು ಪ್ರಯತ್ನಿಸಿದ್ದು,  ಪೊಲೀಸರು ಮತ್ತು ಸೇನಾ ಸಿಬ್ಬಂದಿಗಳ ಘರ್ಷಣೆಯ ಸುದ್ದಿ ಸುಳ್ಳು ಎಂದು ಹೇಳಿದ್ದರು. ಕಾರ್ಯಾಚರಣೆಯ ವಿಷಯದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಪ್ರಾದೇಶಿಕ ಸೇನಾ ಘಟಕದ ನಡುವಿನ ಸಣ್ಣ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...